ತೆರವು ಕಾರ್ಯಾಚರಣೆ(ಸಾಂದರ್ಭಿಕ ಚಿತ್ರ) 
ಜಿಲ್ಲಾ ಸುದ್ದಿ

ಜಿಲ್ಲಾಡಳಿತದಿಂದ ರೂ. 827 ಕೋಟಿಯ ಭೂಮಿ ವಶ

ಒತ್ತುವರಿ ತೆರವು ಕಾರ್ಯ ಮುಂದುವರೆಸಿರುವ ಜಿಲ್ಲಾಡಳಿತ ರೂ.827 ಕೋಟಿ ಮೌಲ್ಯದ 46 . 34 ಎಕರೆ ಭೂಮಿ ವಶಪಡಿಸಿಕೊಂಡಿದೆ.

ಬೆಂಗಳೂರು: ಒತ್ತುವರಿ ತೆರವು ಕಾರ್ಯ ಮುಂದುವರೆಸಿರುವ ಬೆಂಗಳೂರು  ಜಿಲ್ಲಾಡಳಿತ ರೂ.827 ಕೋಟಿ ಮೌಲ್ಯದ 46 . 34  ಎಕರೆ ಭೂಮಿ ವಶಪಡಿಸಿಕೊಂಡಿದೆ.

ದಕ್ಷಿಣ  ತಾಲೂಕು ಉತ್ತರಹಳ್ಳಿಯ ಹೊಸಕೆರೆಹಳ್ಳಿಯ ಸ.ನಂ.22 ರಲ್ಲಿ ರಿಂಗ್ ರಸ್ತೆ ಸೇರಿದಂತೆ 15 . 27 ಎಕರೆ ಒತ್ತುವರಿ ಭೂಮಿಯನ್ನು ತಹಶೀಲ್ದಾರ್ ಡಾ.ಬಿ.ಆರ್ ದಯಾನಂದ್  ನೇತೃಉವ್ತದ ತಂಡ ವಶಪಡಿಸಿಕೊಂಡಿದೆ. ಈ ಜಾಗ ಅಂದಾಜು ರೂ 800 ಕೋಟಿ ಮೌಲ್ಯ ಹೊಂದಿದೆ.

ಜಾಗದ ನಡುವೆ ರಿಂಗ್ ರಸ್ತೆ ಹಾಡು ಹೋಗಿದ್ದು ಜನನಿಬಿಡ ಪ್ರದೇಶವಾದ ಕಾರಣ ರಸ್ತೆಯ ಎರಡೂ ಬದಿಯಲ್ಲಿ ಶೆಡ್ ನಿರ್ಮಿಸಿ ವಾಣಿಜ್ಯ ಚಟುವಟಿಕೆ ನಡೆಸಲಾಗುತ್ತಿತ್ತು. ರಾಜಧಾನಿ ವೈನ್ಸ್, ಸಿಮೆಂಟ್ ಮಾರಾಟ ಮಳಿಗೆ, ಮರದ ಪೀಠೋಪಕರಣ ಶೋರೂಂ, ಗ್ರೀನ್ ಲ್ಯಾಂಡ್ ರೆಸ್ಟೋರೆಂಟ್, ಸೌದೆ ಮಂಡಿ, ರೈನ್ಬೋ ಕಾರ್ ಡೆಕೊರೇಟರ್ಸ್ ಸೇರಿದಂತೆ ಹಲವು ವಾಣಿಜ್ಯ ಮಳಿಗೆಗಳನ್ನು ನಿರ್ಮಿಸಲಾಗಿದೆ. ಮಳಿಗೆಗಳು ತಾವಾಗಿಯೇ ತೆರವುಗೊಳ್ಳದಿದ್ದರೆ ಬುಧವಾರದಿಂದ ತೆರವು ಕಾರ್ಯಾಚರಣೆ ಕೈಗೊಳ್ಳಲಾಗುವುದು ಎಂದು ಎಚ್ಚರಿಸಲಾಗಿದೆ.

ಈ ಕುರಿತು ಮಾಹಿತಿ ನೀಡಿದ ದಕ್ಷಿಣ ಉಪವಿಭಾಗಾಧಿಕಾರಿ ಎಲ್.ಸಿ ನಾಗರಾಜು, ಜಾಗದ ನಡುವೆ ವರ್ತುಲ ರಸ್ತೆ ಹಾಡು ಹೋಗಿದ್ದು ಬಹುಕೋಟಿ ಬೆಲೆ ಬಾಳುತ್ತದೆ. ಕೆಲವು ಬಾಡಿಗೆ ಮಳಿಗೆಗಳಾಗಿದ್ದು ಸ್ಥಳೀಯ ಸಂಸ್ಥೆಗಳಿಂದ ನಕಲಿ ದಾಖಲೆ ಮೇಲೆ ಖಾತಾ ಮಾಡಿಸಿಕೊಳ್ಳಲಾಗಿದೆ. ವಿದ್ಯುತ್ ಸಂಪರ್ಕ ಪಡೆದು ಕಟ್ಟಡ ನಿರ್ಮಿಸಿ ಲಕ್ಷಾಂತರ ರೂ ಬಾಡಿಗೆ ಪಡೆಯಲಾಗುತ್ತಿದೆ. ಇಲ್ಲಿ ನೂತನವಾಗಿ ನಿರ್ಮಾಣವಾದ 14 ಅಂತಸ್ತಿನ ಮೂರು ವಸತಿ ಸಂಕೀರ್ಣದಲ್ಲಿ ಯಾರೂ ವಾಸವಿಲ್ಲ. ಈ ಕಟ್ಟಡವನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮತ್ತೆ ಕ್ರಿಕೆಟ್‌ ಪಂದ್ಯ, ರಾಜ್ಯ ಸಚಿವ ಸಂಪುಟದ ಒಪ್ಪಿಗೆ? ಗೃಹ ಇಲಾಖೆಗೆ ಭದ್ರತೆಯ ಹೊಣೆ!

ಟ್ರಂಪ್ ಗೆ ಮೋದಿ ದೂರವಾಣಿ ಕರೆ: ಮಹತ್ವದ ಚರ್ಚೆ!

ಸಿಎಂ ಸಿದ್ದರಾಮಯ್ಯರ ವಿಮಾನ ಪ್ರಯಾಣ: 'ರಾಜ್ಯದ ಬೊಕ್ಕಸ'ದಿಂದ ಆದ ಖರ್ಚು ಎಷ್ಟು ಗೊತ್ತಾ?

KSCA ಗೆ ಹೊಸ ಸದಸ್ಯರ ಸೇರ್ಪಡೆ: ರಾಜ್ಯಾದ್ಯಂತ ಸದಸ್ಯತ್ವ ಅಭಿಯಾನ- ವೆಂಕಟೇಶ್ ಪ್ರಸಾದ್

ಪಶ್ಚಿಮ ಬಂಗಾಳ ಬಿಟ್ಟು ಇನ್ನುಳಿದ 6 ರಾಜ್ಯಗಳಿಗೆ SIR ಗಡುವು ವಿಸ್ತರಿಸಿದ ಚುನಾವಣಾ ಆಯೋಗ!

SCROLL FOR NEXT