ತೆರವು ಕಾರ್ಯಾಚರಣೆ(ಸಾಂದರ್ಭಿಕ ಚಿತ್ರ) 
ಜಿಲ್ಲಾ ಸುದ್ದಿ

ಜಿಲ್ಲಾಡಳಿತದಿಂದ ರೂ. 827 ಕೋಟಿಯ ಭೂಮಿ ವಶ

ಒತ್ತುವರಿ ತೆರವು ಕಾರ್ಯ ಮುಂದುವರೆಸಿರುವ ಜಿಲ್ಲಾಡಳಿತ ರೂ.827 ಕೋಟಿ ಮೌಲ್ಯದ 46 . 34 ಎಕರೆ ಭೂಮಿ ವಶಪಡಿಸಿಕೊಂಡಿದೆ.

ಬೆಂಗಳೂರು: ಒತ್ತುವರಿ ತೆರವು ಕಾರ್ಯ ಮುಂದುವರೆಸಿರುವ ಬೆಂಗಳೂರು  ಜಿಲ್ಲಾಡಳಿತ ರೂ.827 ಕೋಟಿ ಮೌಲ್ಯದ 46 . 34  ಎಕರೆ ಭೂಮಿ ವಶಪಡಿಸಿಕೊಂಡಿದೆ.

ದಕ್ಷಿಣ  ತಾಲೂಕು ಉತ್ತರಹಳ್ಳಿಯ ಹೊಸಕೆರೆಹಳ್ಳಿಯ ಸ.ನಂ.22 ರಲ್ಲಿ ರಿಂಗ್ ರಸ್ತೆ ಸೇರಿದಂತೆ 15 . 27 ಎಕರೆ ಒತ್ತುವರಿ ಭೂಮಿಯನ್ನು ತಹಶೀಲ್ದಾರ್ ಡಾ.ಬಿ.ಆರ್ ದಯಾನಂದ್  ನೇತೃಉವ್ತದ ತಂಡ ವಶಪಡಿಸಿಕೊಂಡಿದೆ. ಈ ಜಾಗ ಅಂದಾಜು ರೂ 800 ಕೋಟಿ ಮೌಲ್ಯ ಹೊಂದಿದೆ.

ಜಾಗದ ನಡುವೆ ರಿಂಗ್ ರಸ್ತೆ ಹಾಡು ಹೋಗಿದ್ದು ಜನನಿಬಿಡ ಪ್ರದೇಶವಾದ ಕಾರಣ ರಸ್ತೆಯ ಎರಡೂ ಬದಿಯಲ್ಲಿ ಶೆಡ್ ನಿರ್ಮಿಸಿ ವಾಣಿಜ್ಯ ಚಟುವಟಿಕೆ ನಡೆಸಲಾಗುತ್ತಿತ್ತು. ರಾಜಧಾನಿ ವೈನ್ಸ್, ಸಿಮೆಂಟ್ ಮಾರಾಟ ಮಳಿಗೆ, ಮರದ ಪೀಠೋಪಕರಣ ಶೋರೂಂ, ಗ್ರೀನ್ ಲ್ಯಾಂಡ್ ರೆಸ್ಟೋರೆಂಟ್, ಸೌದೆ ಮಂಡಿ, ರೈನ್ಬೋ ಕಾರ್ ಡೆಕೊರೇಟರ್ಸ್ ಸೇರಿದಂತೆ ಹಲವು ವಾಣಿಜ್ಯ ಮಳಿಗೆಗಳನ್ನು ನಿರ್ಮಿಸಲಾಗಿದೆ. ಮಳಿಗೆಗಳು ತಾವಾಗಿಯೇ ತೆರವುಗೊಳ್ಳದಿದ್ದರೆ ಬುಧವಾರದಿಂದ ತೆರವು ಕಾರ್ಯಾಚರಣೆ ಕೈಗೊಳ್ಳಲಾಗುವುದು ಎಂದು ಎಚ್ಚರಿಸಲಾಗಿದೆ.

ಈ ಕುರಿತು ಮಾಹಿತಿ ನೀಡಿದ ದಕ್ಷಿಣ ಉಪವಿಭಾಗಾಧಿಕಾರಿ ಎಲ್.ಸಿ ನಾಗರಾಜು, ಜಾಗದ ನಡುವೆ ವರ್ತುಲ ರಸ್ತೆ ಹಾಡು ಹೋಗಿದ್ದು ಬಹುಕೋಟಿ ಬೆಲೆ ಬಾಳುತ್ತದೆ. ಕೆಲವು ಬಾಡಿಗೆ ಮಳಿಗೆಗಳಾಗಿದ್ದು ಸ್ಥಳೀಯ ಸಂಸ್ಥೆಗಳಿಂದ ನಕಲಿ ದಾಖಲೆ ಮೇಲೆ ಖಾತಾ ಮಾಡಿಸಿಕೊಳ್ಳಲಾಗಿದೆ. ವಿದ್ಯುತ್ ಸಂಪರ್ಕ ಪಡೆದು ಕಟ್ಟಡ ನಿರ್ಮಿಸಿ ಲಕ್ಷಾಂತರ ರೂ ಬಾಡಿಗೆ ಪಡೆಯಲಾಗುತ್ತಿದೆ. ಇಲ್ಲಿ ನೂತನವಾಗಿ ನಿರ್ಮಾಣವಾದ 14 ಅಂತಸ್ತಿನ ಮೂರು ವಸತಿ ಸಂಕೀರ್ಣದಲ್ಲಿ ಯಾರೂ ವಾಸವಿಲ್ಲ. ಈ ಕಟ್ಟಡವನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT