ಬಿಬಿಎಂಪಿ ಕಚೇರಿ 
ಜಿಲ್ಲಾ ಸುದ್ದಿ

ರು.17 ಕೋಟಿ ಬಾಕಿ: ಬಾಡಿಗೆ ಕೊಡದ ವಿವಿಧ ಇಲಾಖೆಗಳಿಗೆ ಬಿಬಿಎಂಪಿ ಎಚ್ಚರಿಕೆ

ಬಿಬಿಎಂಪಿ ವಾಣಿಜ್ಯ ಸಂಕೀರ್ಣಗಳಲ್ಲಿರುವ ಸರ್ಕಾರಿ ಸಂಸ್ಥೆಗಳು ಉಳಿಸಿಕೊಂಡಿರುವ ರು.17.53 ಕೋಟಿ ಬಾಡಿಗೆ ಮೊತ್ತವನ್ನು ತಕ್ಷಣವೇ ಪಾವತಿಸದಿದ್ದರೆ ಕಚೇರಿಗಳಿಗೆ ಬೀಗ ಜಡಿಯಲಾಗುವುದು ಎಂದು ಆಡಳಿತಾಧಿಕಾರಿ ಟಿ.ಎಂ.ವಿಜಯಭಾಸ್ಕರ್ ಇಲಾಖೆಗಳಿಗೆ ಎಚ್ಚರಿಕೆ ನೀಡಿದ್ದಾರೆ...

ಬೆಂಗಳೂರು: ಬಿಬಿಎಂಪಿ ವಾಣಿಜ್ಯ ಸಂಕೀರ್ಣಗಳಲ್ಲಿರುವ ಸರ್ಕಾರಿ ಸಂಸ್ಥೆಗಳು ಉಳಿಸಿಕೊಂಡಿರುವ ರು.17.53 ಕೋಟಿ ಬಾಡಿಗೆ ಮೊತ್ತವನ್ನು ತಕ್ಷಣವೇ ಪಾವತಿಸದಿದ್ದರೆ ಕಚೇರಿಗಳಿಗೆ ಬೀಗ ಜಡಿಯಲಾಗುವುದು ಎಂದು ಆಡಳಿತಾಧಿಕಾರಿ ಟಿ.ಎಂ.ವಿಜಯಭಾಸ್ಕರ್ ಇಲಾಖೆಗಳಿಗೆ ಎಚ್ಚರಿಕೆ ನೀಡಿದ್ದಾರೆ.

ರೈಲ್ವೆ, ಪೊಲೀಸ್, ಆರ್‍ಟಿಒ, ಬಿಎಸ್‍ಎನ್ ಎಲ್, ಅಳತೆ ಮತ್ತು ತೂಕ ಮಾಪನ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ವಿಜಯಭಾಸ್ಕರ್ ಹಾಗೂ ಆಯುಕ್ತ ಕುಮಾರ್ ನಾಯಕ್ ಸಭೆ ನಡೆಸಿದರು. ವಿವಿಧ ವಾಣಿಜ್ಯ ಸಂಕೀರ್ಣ ಹಾಗೂ ಮಾರುಕಟ್ಟೆಗಳಲ್ಲಿ ಇಲಾಖೆಗಳು ಕಚೇರಿ ಬಾಡಿಗೆ ಪಡೆದಿದ್ದು, ಹಲವು ವರ್ಷಗಳಿಂದ ಬಾಡಿಗೆ ಬಾಕಿ ಉಳಿಸಿಕೊಂಡಿವೆ. ಕೆಲವು ಇಲಾಖೆಗಳ ಬಾಕಿ ರು.1 ಕೋಟಿಯವರೆಗೂ ತಲುಪಿದೆ. ಶೀಘ್ರವೇ ಬಾಕಿ ಪಾವತಿಸದಿದ್ದರೆ ಕಚೇರಿಗಳಿಗೆ ಬೀಗ ಹಾಕುವಂತೆ ಮಾರುಕಟ್ಟೆ ವಿಭಾಗದ ಅಧಿಕಾರಿಗಳಿಗೆ ಸೂಚಿಸಲಾಗುವುದು ಎಂದು ಸೂಚಿಸಿದರು.

ಬಿಎಸ್‍ಎನ್‍ಎಲ್, ರೈಲ್ವೆ, ಆರ್‍ಟಿಒ, ಮೀನುಗಾರಿಕೆ, ಕಾವೇರಿ ಹ್ಯಾಂಡಿ ಕ್ರಾಫ್ಟ್, ಕೃಷಿ ಮಾರಾಟ ವಿಭಾಗ, ಕೆಎಸ್‍ಎಫ್ ಸಿ, ಸಣ್ಣ ನೀರಾವರಿ ಸೇರಿದಂತೆ ಕೆಲವು ಇಲಾಖೆಗಳು
ಪಾಲಿಕೆಯ ವಾಣಿಜ್ಯ ಸಂಕಿರ್ಣಗಳಲ್ಲಿ ಮಳಿಗೆ ಬಾಡಿಗೆ ಪಡೆದು ನಿಗದಿತ ಸಮಯದಲ್ಲಿ ಬಾಡಿಗೆ ಪಾವತಿಸಿಲ್ಲ. ಪಾಲಿಕೆಯಿಂದ ಹಲವು ಬಾರಿ ಬೇಡಿಕೆ ನೋಟಿಸ್ ಕಳುಹಿಸಿದರೂ ಸಂಸ್ಥೆಗಳು
ಸ್ಪಂದಿಸಿಲ್ಲ. ಹಲವು ವರ್ಷಗಳಿಂದ ಉಳಿಸಿಕೊಂಡ ಬಾಕಿ ಒಟ್ಟು ರು.17 ಕೋಟಿಯಾಗಿದ್ದು, ಕೂಡಲೇ ಅಂತಿಮ ನೋಟಿಸ್ ಜಾರಿ ಮಾಡಬೇಕು ಎಂದು  ಮಾರುಕಟ್ಟೆ ವಿಭಾಗದ ಕಂದಾಯ ಅಧಿಕಾರಿಗಳಿಗೆ ಸಭೆಯಲ್ಲಿ ಸೂಚನೆ ನೀಡಲಾಯಿತು.

ಬಿಬಿಎಂಪಿಯ ವಾಣಿಜ್ಯ ಸಂಕೀರ್ಣಗಳಲ್ಲಿ ಸುಮಾರು 6,000 ಮಳಿಗೆಗಳಿದ್ದು, ಬಾಡಿಗೆ ಪಾವತಿಸುವಂತೆ ಮಾಲಿಕರಿಗೆ ಪ್ರತಿ ತಿಂಗಳು ನೋಟಿಸ್ ಜಾರಿ ಮಾಡಬೇಕು. ಅಧಿಕಾರಿಗಳು ಒಂದು ವಾರದಲ್ಲಿ ನೋಟಿಸ್ ಜಾರಿ ಮಾಡಿ ಅದರ ಪ್ರತಿಗಳನ್ನು ಮಾರುಕಟ್ಟೆ ವಿಭಾಗದ ಉಪ ಆಯುಕ್ತರಿಗೆ ಸಲ್ಲಿಸಬೇಕು. ನಿಗದಿಪಡಿಸಿದ ಬಾಡಿಗೆ ವಸೂಲಿ ಮಾಡಿ ಗುರಿ ಮುಟ್ಟದಿದ್ದರೆ,
ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ವಿಜಯಭಾಸ್ಕರ್ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕದನ ವಿರಾಮ ಅಂತ್ಯ; ಹೊಸ ಮಾತುಕತೆಗೆ ಡೊನಾಲ್ಡ್ ಟ್ರಂಪ್ ಒಪ್ಪಿಗೆ – 'ಶರಣಾಗುವುದಿಲ್ಲ' ಎಂದ ಇರಾನ್

ಪ್ರಿಯಾಂಕ್ ಖರ್ಗೆ RSS ಸಚಿವರು- ಪರಮೇಶ್ವರ್ 'ಗೊತ್ತಿಲ್ಲ' ಸಚಿವರು: ಶೋಭಾ ಕರಂದ್ಲಾಜೆ

ನಮ್ಮ ಆಚರಣೆಯ ನಡುವೆ ಬೇರೆಯದನ್ನು ಯಾಕೆ ತರುತ್ತೀರಾ: ದಸರಾದಲ್ಲಿ ಕಂಬಳ ಆಯೋಜನೆಗೆ ಯದುವೀರ್- ಪ್ರತಾಪ್ ಸಿಂಹ ವಿರೋಧ!

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್