ಬಿಬಿಎಂಪಿ ಕಚೇರಿ 
ಜಿಲ್ಲಾ ಸುದ್ದಿ

ರು.17 ಕೋಟಿ ಬಾಕಿ: ಬಾಡಿಗೆ ಕೊಡದ ವಿವಿಧ ಇಲಾಖೆಗಳಿಗೆ ಬಿಬಿಎಂಪಿ ಎಚ್ಚರಿಕೆ

ಬಿಬಿಎಂಪಿ ವಾಣಿಜ್ಯ ಸಂಕೀರ್ಣಗಳಲ್ಲಿರುವ ಸರ್ಕಾರಿ ಸಂಸ್ಥೆಗಳು ಉಳಿಸಿಕೊಂಡಿರುವ ರು.17.53 ಕೋಟಿ ಬಾಡಿಗೆ ಮೊತ್ತವನ್ನು ತಕ್ಷಣವೇ ಪಾವತಿಸದಿದ್ದರೆ ಕಚೇರಿಗಳಿಗೆ ಬೀಗ ಜಡಿಯಲಾಗುವುದು ಎಂದು ಆಡಳಿತಾಧಿಕಾರಿ ಟಿ.ಎಂ.ವಿಜಯಭಾಸ್ಕರ್ ಇಲಾಖೆಗಳಿಗೆ ಎಚ್ಚರಿಕೆ ನೀಡಿದ್ದಾರೆ...

ಬೆಂಗಳೂರು: ಬಿಬಿಎಂಪಿ ವಾಣಿಜ್ಯ ಸಂಕೀರ್ಣಗಳಲ್ಲಿರುವ ಸರ್ಕಾರಿ ಸಂಸ್ಥೆಗಳು ಉಳಿಸಿಕೊಂಡಿರುವ ರು.17.53 ಕೋಟಿ ಬಾಡಿಗೆ ಮೊತ್ತವನ್ನು ತಕ್ಷಣವೇ ಪಾವತಿಸದಿದ್ದರೆ ಕಚೇರಿಗಳಿಗೆ ಬೀಗ ಜಡಿಯಲಾಗುವುದು ಎಂದು ಆಡಳಿತಾಧಿಕಾರಿ ಟಿ.ಎಂ.ವಿಜಯಭಾಸ್ಕರ್ ಇಲಾಖೆಗಳಿಗೆ ಎಚ್ಚರಿಕೆ ನೀಡಿದ್ದಾರೆ.

ರೈಲ್ವೆ, ಪೊಲೀಸ್, ಆರ್‍ಟಿಒ, ಬಿಎಸ್‍ಎನ್ ಎಲ್, ಅಳತೆ ಮತ್ತು ತೂಕ ಮಾಪನ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ವಿಜಯಭಾಸ್ಕರ್ ಹಾಗೂ ಆಯುಕ್ತ ಕುಮಾರ್ ನಾಯಕ್ ಸಭೆ ನಡೆಸಿದರು. ವಿವಿಧ ವಾಣಿಜ್ಯ ಸಂಕೀರ್ಣ ಹಾಗೂ ಮಾರುಕಟ್ಟೆಗಳಲ್ಲಿ ಇಲಾಖೆಗಳು ಕಚೇರಿ ಬಾಡಿಗೆ ಪಡೆದಿದ್ದು, ಹಲವು ವರ್ಷಗಳಿಂದ ಬಾಡಿಗೆ ಬಾಕಿ ಉಳಿಸಿಕೊಂಡಿವೆ. ಕೆಲವು ಇಲಾಖೆಗಳ ಬಾಕಿ ರು.1 ಕೋಟಿಯವರೆಗೂ ತಲುಪಿದೆ. ಶೀಘ್ರವೇ ಬಾಕಿ ಪಾವತಿಸದಿದ್ದರೆ ಕಚೇರಿಗಳಿಗೆ ಬೀಗ ಹಾಕುವಂತೆ ಮಾರುಕಟ್ಟೆ ವಿಭಾಗದ ಅಧಿಕಾರಿಗಳಿಗೆ ಸೂಚಿಸಲಾಗುವುದು ಎಂದು ಸೂಚಿಸಿದರು.

ಬಿಎಸ್‍ಎನ್‍ಎಲ್, ರೈಲ್ವೆ, ಆರ್‍ಟಿಒ, ಮೀನುಗಾರಿಕೆ, ಕಾವೇರಿ ಹ್ಯಾಂಡಿ ಕ್ರಾಫ್ಟ್, ಕೃಷಿ ಮಾರಾಟ ವಿಭಾಗ, ಕೆಎಸ್‍ಎಫ್ ಸಿ, ಸಣ್ಣ ನೀರಾವರಿ ಸೇರಿದಂತೆ ಕೆಲವು ಇಲಾಖೆಗಳು
ಪಾಲಿಕೆಯ ವಾಣಿಜ್ಯ ಸಂಕಿರ್ಣಗಳಲ್ಲಿ ಮಳಿಗೆ ಬಾಡಿಗೆ ಪಡೆದು ನಿಗದಿತ ಸಮಯದಲ್ಲಿ ಬಾಡಿಗೆ ಪಾವತಿಸಿಲ್ಲ. ಪಾಲಿಕೆಯಿಂದ ಹಲವು ಬಾರಿ ಬೇಡಿಕೆ ನೋಟಿಸ್ ಕಳುಹಿಸಿದರೂ ಸಂಸ್ಥೆಗಳು
ಸ್ಪಂದಿಸಿಲ್ಲ. ಹಲವು ವರ್ಷಗಳಿಂದ ಉಳಿಸಿಕೊಂಡ ಬಾಕಿ ಒಟ್ಟು ರು.17 ಕೋಟಿಯಾಗಿದ್ದು, ಕೂಡಲೇ ಅಂತಿಮ ನೋಟಿಸ್ ಜಾರಿ ಮಾಡಬೇಕು ಎಂದು  ಮಾರುಕಟ್ಟೆ ವಿಭಾಗದ ಕಂದಾಯ ಅಧಿಕಾರಿಗಳಿಗೆ ಸಭೆಯಲ್ಲಿ ಸೂಚನೆ ನೀಡಲಾಯಿತು.

ಬಿಬಿಎಂಪಿಯ ವಾಣಿಜ್ಯ ಸಂಕೀರ್ಣಗಳಲ್ಲಿ ಸುಮಾರು 6,000 ಮಳಿಗೆಗಳಿದ್ದು, ಬಾಡಿಗೆ ಪಾವತಿಸುವಂತೆ ಮಾಲಿಕರಿಗೆ ಪ್ರತಿ ತಿಂಗಳು ನೋಟಿಸ್ ಜಾರಿ ಮಾಡಬೇಕು. ಅಧಿಕಾರಿಗಳು ಒಂದು ವಾರದಲ್ಲಿ ನೋಟಿಸ್ ಜಾರಿ ಮಾಡಿ ಅದರ ಪ್ರತಿಗಳನ್ನು ಮಾರುಕಟ್ಟೆ ವಿಭಾಗದ ಉಪ ಆಯುಕ್ತರಿಗೆ ಸಲ್ಲಿಸಬೇಕು. ನಿಗದಿಪಡಿಸಿದ ಬಾಡಿಗೆ ವಸೂಲಿ ಮಾಡಿ ಗುರಿ ಮುಟ್ಟದಿದ್ದರೆ,
ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ವಿಜಯಭಾಸ್ಕರ್ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Video: 80 ಸಾವಿರ ಹಣವಿದ್ದ ಬ್ಯಾಗ್ ನಾಪತ್ತೆ, ಮೇಲಿಂದ ಕೋತಿಯಿಂದ ಹಣದ ಸುರಿಮಳೆ! ಸಿಕ್ಕಿದೆಷ್ಟು ಗೊತ್ತಾ?

SCROLL FOR NEXT