ರಾಜ್ಯ ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕ ರಾಜೇಂದ್ರ ಕುಮಾರ ಕಟಾರಿಯಾ ಬಸ್ ವಾಷಿಂಗ್ ಯಂತ್ರವನ್ನು ಉದ್ಘಾಟಿಸಿದರು. 
ಜಿಲ್ಲಾ ಸುದ್ದಿ

ಕೆಎಸ್‍ಆರ್ ಟಿಸಿ ಬಸ್ ಸ್ವಚ್ಛತೆಗೆ ಹೊಸ ಯಂತ್ರ

ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿಯೇ ಪ್ರಪ್ರಥಮ ಬಾರಿಗೆ ಬಸ್‍ನ ಹೊರಮೈ ಸ್ವಚ್ಛಗೊಳಿಸಲು ಆಂತರಿಕವಾಗಿ ನಿರ್ಮಿಸಿರುವ ನೂತನ ವಾಷಿಂಗ್...

ಬೆಂಗಳೂರು: ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿಯೇ ಪ್ರಪ್ರಥಮ ಬಾರಿಗೆ ಬಸ್‍ನ ಹೊರಮೈ ಸ್ವಚ್ಛಗೊಳಿಸಲು ಆಂತರಿಕವಾಗಿ ನಿರ್ಮಿಸಿರುವ ನೂತನ ವಾಷಿಂಗ್ ಯಂತ್ರವನ್ನು ಅಳವಡಿಸಲಾಗಿದೆ. ಕೆಎಸ್‍ಆರ್ ಟಿಸಿ ಬೆಂಗಳೂರು ಕೇಂದ್ರಿಯ ವಿಭಾಗ (ಘಟಕ 4)ದಲ್ಲಿ ಈ ಯಂತ್ರ ಅಳವಡಿಸಲಾಗಿದ್ದು, ಸೋಮವಾರ ನಡೆದ ಕಾರ್ಯಕ್ರಮದಲ್ಲಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ರಾಜೇಂದ್ರ ಕುಮಾರ ಕಟಾರಿಯಾ ಮಿಷಿನ್ ಅನ್ನು ಉದ್ಘಾಟಿಸಿದರು.

ವೋಲ್ವೋ ಬಸ್‍ನ ಹೊರಮೈಯನ್ನು ಸುಲಭವಾಗಿ ಸ್ವಚ್ಛಗೊಳಿಸಲು ಇದನ್ನು ಬಳಸಲಾಗುತ್ತದೆ. ಈ ಹಿಂದೆ ಇದ್ದ ವಾಷಿಂಗ್ ಮಿಷಿನ್‍ನಲ್ಲಿ 2 ಬ್ರಷ್‍ಗಳಿದ್ದವು. ಇದರಿಂದ ಬಸ್ ತೊಳೆಯುವುದು ಕಷ್ಟವಾಗುತ್ತಿತ್ತು. ಆದರೆ, ಈಗ ಅಳವಡಿಸಿರುವ ವಾಷಿಂಗ್ ಮಿಷಿನ್‍ನಲ್ಲಿ 6 ಬ್ರಷ್ ಗಳಿದ್ದು(ಎರಡೂ ಕಡೆಯಲ್ಲಿ ತಲಾ 3 ಬ್ರಶ್‍ಗಳನ್ನು ಅಳವಡಿಸಲಾಗಿದೆ), ಇದರಿಂದ ಬಸ್ ಸ್ವಚ್ಛಗೊಳಿಸುವುದು ಸುಲಭ. ಮಿಷಿನ್‍ನಲ್ಲಿರುವ ಹೆಚ್ಚಿನ ಸೌಲಭ್ಯಗಳು, ವಾಷಿಂಗ್‍ನ ಗುಣಮಟ್ಟ ಹೆಚ್ಚಿಸುವುದರೊಂದಿಗೆ, ಬಳಕೆಯಾಗುತ್ತಿದ್ದ ಮಾನವ ಶಕ್ತಿ ಕಡಿಮೆ ಮಾಡುತ್ತದೆ. ಈ ಹಿಂದೆ
ಉಪಯೋಗಿಸುತ್ತಿದ್ದ ವಾಷಿಂಗ್ ಮೆಷಿನ್‍ನಲ್ಲಿ ಈ ಸೌಲಭ್ಯ ಇರಲಿಲ್ಲ ಎಂದು ಸಾರಿಗೆ ಸಂಸ್ಥೆ ತಿಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್‌ ಸರ್ಕಾರ ವಿರುದ್ಧ ಪ್ರತಿಭಟನೆ: ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 116 ಕ್ಕೆ ಏರಿಕೆ

ಕೇಂದ್ರ ಬಜೆಟ್ 2026-27: ರಾಜ್ಯದ ಹಣಕಾಸು ಸಮತೋಲನ ಪುನಃಸ್ಥಾಪಿಸಲು ಹೆಚ್ಚಿನ ಅನುದಾನ ಒದಗಿಸಿ; ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ

Grok ಅಶ್ಲೀಲ ಕಂಟೆಂಟ್ ವಿವಾದ: ಕೇಂದ್ರ ಸರ್ಕಾರಕ್ಕೆ ಕೊನೆಗೂ ಮಣಿದ X, 600 ಖಾತೆಗಳ ಡಿಲೀಟ್!

ನೋಂದಣಿ ಇಲ್ಲದೆ 'stock tips': ‘Finfluencers’ಗಳ ಸುಮಾರು 1 ಲಕ್ಷ ವಿಡಿಯೋ ಡಿಲೀಟ್​ ಮಾಡಿದ SEBI

ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯಿಂದ ರಿಷಭ್ ಪಂತ್ ಔಟ್; ಭಾರತ ತಂಡ ಸೇರಿದ 24 ವರ್ಷದ ಆಟಗಾರ!

SCROLL FOR NEXT