ರಾಜ್ಯ ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕ ರಾಜೇಂದ್ರ ಕುಮಾರ ಕಟಾರಿಯಾ ಬಸ್ ವಾಷಿಂಗ್ ಯಂತ್ರವನ್ನು ಉದ್ಘಾಟಿಸಿದರು. 
ಜಿಲ್ಲಾ ಸುದ್ದಿ

ಕೆಎಸ್‍ಆರ್ ಟಿಸಿ ಬಸ್ ಸ್ವಚ್ಛತೆಗೆ ಹೊಸ ಯಂತ್ರ

ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿಯೇ ಪ್ರಪ್ರಥಮ ಬಾರಿಗೆ ಬಸ್‍ನ ಹೊರಮೈ ಸ್ವಚ್ಛಗೊಳಿಸಲು ಆಂತರಿಕವಾಗಿ ನಿರ್ಮಿಸಿರುವ ನೂತನ ವಾಷಿಂಗ್...

ಬೆಂಗಳೂರು: ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿಯೇ ಪ್ರಪ್ರಥಮ ಬಾರಿಗೆ ಬಸ್‍ನ ಹೊರಮೈ ಸ್ವಚ್ಛಗೊಳಿಸಲು ಆಂತರಿಕವಾಗಿ ನಿರ್ಮಿಸಿರುವ ನೂತನ ವಾಷಿಂಗ್ ಯಂತ್ರವನ್ನು ಅಳವಡಿಸಲಾಗಿದೆ. ಕೆಎಸ್‍ಆರ್ ಟಿಸಿ ಬೆಂಗಳೂರು ಕೇಂದ್ರಿಯ ವಿಭಾಗ (ಘಟಕ 4)ದಲ್ಲಿ ಈ ಯಂತ್ರ ಅಳವಡಿಸಲಾಗಿದ್ದು, ಸೋಮವಾರ ನಡೆದ ಕಾರ್ಯಕ್ರಮದಲ್ಲಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ರಾಜೇಂದ್ರ ಕುಮಾರ ಕಟಾರಿಯಾ ಮಿಷಿನ್ ಅನ್ನು ಉದ್ಘಾಟಿಸಿದರು.

ವೋಲ್ವೋ ಬಸ್‍ನ ಹೊರಮೈಯನ್ನು ಸುಲಭವಾಗಿ ಸ್ವಚ್ಛಗೊಳಿಸಲು ಇದನ್ನು ಬಳಸಲಾಗುತ್ತದೆ. ಈ ಹಿಂದೆ ಇದ್ದ ವಾಷಿಂಗ್ ಮಿಷಿನ್‍ನಲ್ಲಿ 2 ಬ್ರಷ್‍ಗಳಿದ್ದವು. ಇದರಿಂದ ಬಸ್ ತೊಳೆಯುವುದು ಕಷ್ಟವಾಗುತ್ತಿತ್ತು. ಆದರೆ, ಈಗ ಅಳವಡಿಸಿರುವ ವಾಷಿಂಗ್ ಮಿಷಿನ್‍ನಲ್ಲಿ 6 ಬ್ರಷ್ ಗಳಿದ್ದು(ಎರಡೂ ಕಡೆಯಲ್ಲಿ ತಲಾ 3 ಬ್ರಶ್‍ಗಳನ್ನು ಅಳವಡಿಸಲಾಗಿದೆ), ಇದರಿಂದ ಬಸ್ ಸ್ವಚ್ಛಗೊಳಿಸುವುದು ಸುಲಭ. ಮಿಷಿನ್‍ನಲ್ಲಿರುವ ಹೆಚ್ಚಿನ ಸೌಲಭ್ಯಗಳು, ವಾಷಿಂಗ್‍ನ ಗುಣಮಟ್ಟ ಹೆಚ್ಚಿಸುವುದರೊಂದಿಗೆ, ಬಳಕೆಯಾಗುತ್ತಿದ್ದ ಮಾನವ ಶಕ್ತಿ ಕಡಿಮೆ ಮಾಡುತ್ತದೆ. ಈ ಹಿಂದೆ
ಉಪಯೋಗಿಸುತ್ತಿದ್ದ ವಾಷಿಂಗ್ ಮೆಷಿನ್‍ನಲ್ಲಿ ಈ ಸೌಲಭ್ಯ ಇರಲಿಲ್ಲ ಎಂದು ಸಾರಿಗೆ ಸಂಸ್ಥೆ ತಿಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು; Video!

SCROLL FOR NEXT