ರಾಜ್ಯ ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕ ರಾಜೇಂದ್ರ ಕುಮಾರ ಕಟಾರಿಯಾ ಬಸ್ ವಾಷಿಂಗ್ ಯಂತ್ರವನ್ನು ಉದ್ಘಾಟಿಸಿದರು. 
ಜಿಲ್ಲಾ ಸುದ್ದಿ

ಕೆಎಸ್‍ಆರ್ ಟಿಸಿ ಬಸ್ ಸ್ವಚ್ಛತೆಗೆ ಹೊಸ ಯಂತ್ರ

ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿಯೇ ಪ್ರಪ್ರಥಮ ಬಾರಿಗೆ ಬಸ್‍ನ ಹೊರಮೈ ಸ್ವಚ್ಛಗೊಳಿಸಲು ಆಂತರಿಕವಾಗಿ ನಿರ್ಮಿಸಿರುವ ನೂತನ ವಾಷಿಂಗ್...

ಬೆಂಗಳೂರು: ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿಯೇ ಪ್ರಪ್ರಥಮ ಬಾರಿಗೆ ಬಸ್‍ನ ಹೊರಮೈ ಸ್ವಚ್ಛಗೊಳಿಸಲು ಆಂತರಿಕವಾಗಿ ನಿರ್ಮಿಸಿರುವ ನೂತನ ವಾಷಿಂಗ್ ಯಂತ್ರವನ್ನು ಅಳವಡಿಸಲಾಗಿದೆ. ಕೆಎಸ್‍ಆರ್ ಟಿಸಿ ಬೆಂಗಳೂರು ಕೇಂದ್ರಿಯ ವಿಭಾಗ (ಘಟಕ 4)ದಲ್ಲಿ ಈ ಯಂತ್ರ ಅಳವಡಿಸಲಾಗಿದ್ದು, ಸೋಮವಾರ ನಡೆದ ಕಾರ್ಯಕ್ರಮದಲ್ಲಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ರಾಜೇಂದ್ರ ಕುಮಾರ ಕಟಾರಿಯಾ ಮಿಷಿನ್ ಅನ್ನು ಉದ್ಘಾಟಿಸಿದರು.

ವೋಲ್ವೋ ಬಸ್‍ನ ಹೊರಮೈಯನ್ನು ಸುಲಭವಾಗಿ ಸ್ವಚ್ಛಗೊಳಿಸಲು ಇದನ್ನು ಬಳಸಲಾಗುತ್ತದೆ. ಈ ಹಿಂದೆ ಇದ್ದ ವಾಷಿಂಗ್ ಮಿಷಿನ್‍ನಲ್ಲಿ 2 ಬ್ರಷ್‍ಗಳಿದ್ದವು. ಇದರಿಂದ ಬಸ್ ತೊಳೆಯುವುದು ಕಷ್ಟವಾಗುತ್ತಿತ್ತು. ಆದರೆ, ಈಗ ಅಳವಡಿಸಿರುವ ವಾಷಿಂಗ್ ಮಿಷಿನ್‍ನಲ್ಲಿ 6 ಬ್ರಷ್ ಗಳಿದ್ದು(ಎರಡೂ ಕಡೆಯಲ್ಲಿ ತಲಾ 3 ಬ್ರಶ್‍ಗಳನ್ನು ಅಳವಡಿಸಲಾಗಿದೆ), ಇದರಿಂದ ಬಸ್ ಸ್ವಚ್ಛಗೊಳಿಸುವುದು ಸುಲಭ. ಮಿಷಿನ್‍ನಲ್ಲಿರುವ ಹೆಚ್ಚಿನ ಸೌಲಭ್ಯಗಳು, ವಾಷಿಂಗ್‍ನ ಗುಣಮಟ್ಟ ಹೆಚ್ಚಿಸುವುದರೊಂದಿಗೆ, ಬಳಕೆಯಾಗುತ್ತಿದ್ದ ಮಾನವ ಶಕ್ತಿ ಕಡಿಮೆ ಮಾಡುತ್ತದೆ. ಈ ಹಿಂದೆ
ಉಪಯೋಗಿಸುತ್ತಿದ್ದ ವಾಷಿಂಗ್ ಮೆಷಿನ್‍ನಲ್ಲಿ ಈ ಸೌಲಭ್ಯ ಇರಲಿಲ್ಲ ಎಂದು ಸಾರಿಗೆ ಸಂಸ್ಥೆ ತಿಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT