ಏರ್ ಪೋರ್ಟ್ ಕ್ಯಾಬ್ ( ಸಾಂದರ್ಭಿಕ ಚಿತ್ರ) 
ಜಿಲ್ಲಾ ಸುದ್ದಿ

ಕ್ಯಾಬ್ ಡಿಕ್ಕಿ: ಸ್ಥಳದಲ್ಲೇ ವ್ಯಕ್ತಿ ಸಾವು

ಮದುವೆ ಆಹ್ವಾನ ಪತ್ರಿಕೆ ನೀಡಲು ಹೋಗುತ್ತಿದ್ದ ವ್ಯಕ್ತಿಯೊಬ್ಬರಿಗೆ ಕ್ಯಾಬ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬಳ್ಳಾರಿ ರಸ್ತೆ ಕಾಡಿಗೇನಹಳ್ಳಿ ಗೇಟ್ ಬಳಿ ಮಂಗಳವಾರ ಬೆಳಗ್ಗೆ ಸಂಭವಿಸಿದೆ...

ಬೆಂಗಳೂರು: ಮದುವೆ ಆಹ್ವಾನ ಪತ್ರಿಕೆ ನೀಡಲು ಹೋಗುತ್ತಿದ್ದ ವ್ಯಕ್ತಿಯೊಬ್ಬರಿಗೆ ಕ್ಯಾಬ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬಳ್ಳಾರಿ ರಸ್ತೆ ಕಾಡಿಗೇನಹಳ್ಳಿ ಗೇಟ್ ಬಳಿ ಮಂಗಳವಾರ ಬೆಳಗ್ಗೆ ಸಂಭವಿಸಿದೆ.

ವಿಜಯಪುರ ನಿವಾಸಿ ವೀರಪ್ಪ (50) ಮೃತ ದುರ್ದೈವಿ. ಸಹೋದರಿ ಮಗನ ಮದುವೆ ಆಮಂತ್ರಣ ಪತ್ರಿಕೆ ನೀಡಲು ಸೋಮವಾರ ಚಿಕ್ಕಜಾಲದ ಸಂಬಂಧಿಕರ ಮನೆಗೆ ಹೋಗಿದ್ದರು. ರಾತ್ರಿ ಅಲ್ಲೇ ಉಳಿದುಕೊಂಡು ಬೆಳಗ್ಗೆ ಊರಿಗೆ ವಾಪಸ್ಸಾಗಲು ರಸ್ತೆ ದಾಟುತ್ತಿದ್ದಾಗ ಏರ್ ಪೋರ್ಟ್ ಕಡೆಯಿಂದ ಬಂದ ಕ್ಯಾಬ್ ಡಿಕ್ಕಿ ಹೊಡೆದಿದೆ. ತಲೆಗೆ ಗಂಭೀರ ಪೆಟ್ಟಾಗಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಚಾಲಕ ನಾರಾಯಣಸ್ವಾಮಿ ಎಂಬಾತನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಚಿಕ್ಕಜಾಲ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಡ್ಡಾದಿಡ್ಡಿ ಬೈಕ್ ಚಾಲನೆ: ಸವಾರ ಬಲಿ

ಬೆಂಗಳೂರು: ಮತ್ತೊಂದು ಪ್ರಕರಣದಲ್ಲಿ ಸೋಮವಾರ ರಾತ್ರಿ ಆರ್.ಟಿ.ನಗರ ದೇವೇಗೌಡ ರಸ್ತೆಯಲ್ಲಿ ಸವಾರನ ನಿಯಂತ್ರಣ ಕಳೆದುಕೊಂಡು ಬೈಕ್ ಅಡ್ಡಾದಿಡ್ಡಿ ಚಲಿಸಿ ಪಾದಚಾರಿ ಮಾರ್ಗಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಅಫ್ರೋಜ್ ಅಹ್ಮದ್ (32) ಮೃತಪಟ್ಟಿದ್ದಾರೆ. ಸ್ನೇಹಿತ ಮಹೇಶ್ ಎಂಬಾತನಿಗೆ ಗಾಯಗಳಾಗಿವೆ. ಕೆಜಿ ಹಳ್ಳಿ ನಿವಾಸಿ ಅಫ್ರೋಜ್, ಮನೆ ಸಮೀಪದಲ್ಲಿ ಸೋಫಾ ತಯಾರಿಕೆ ಅಂಗಡಿ ಇಟ್ಟುಕೊಂಡಿದ್ದರು. ಕೆಲಸದ ಮೇಲೆ ಸ್ನೇಹಿತ ಮಹೇಶ್‍ನ ಜತೆ ಜೆ.ಸಿ ನಗರಕ್ಕೆ ಹೋಗಿ ರಾತ್ರಿ 12.30ರ ವೇಳೆಗೆ ಆರ್‍ಟಿ ನಗರದ ದೇವೇಗೌಡ ರಸ್ತೆಯಲ್ಲಿ ವಾಪಸ್ಸಾಗುತ್ತಿದ್ದಾಗ ಘಟನೆ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರ್.ಟಿ.ನಗರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

'sir' ವಿವಾದ ಕೊನೆಗೂ ಅಂತ್ಯ: 'ಸರ್.. ನೀವು ನನ್ನ ಹಿರಿಯರು': ಕಿಚ್ಚಾ ಸುದೀಪ್ ಗೆ ಧನ್ಯವಾದ ಹೇಳಿದ ನಟ ಯಶ್!

ಟಿ20 ವಿಶ್ವಕಪ್: 'ಅಲ್ಲಿ ಬೇಡ ಅಂದ್ರೆ ಇಲ್ಲಿ ಆಡಿ..': ಬಾಂಗ್ಲಾದೇಶಕ್ಕೆ ಹೊಸ ಮೈದಾನಗಳ ಸೂಚಿಸಿದ ICC

ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ದಳಪತಿ ವಿಜಯ್ ಅಭಿನಯದ 'ಜನ ನಾಯಗನ್'

SCROLL FOR NEXT