ಲೋಕಾಯುಕ್ತ 
ಜಿಲ್ಲಾ ಸುದ್ದಿ

ಲೋಕಾ ನಿರ್ದೇಶನ ಪಾಲಿಸದ ಬಿಬಿಎಂಪಿ ಆಯುಕ್ತರಿಗೆ ನೋಟಿಸ್

ಎಚ್‍ಎಎಲ್‍ನ ಯಮಲೂರು ಸಮೀಪ ರಾಜಕಾಲುವೆಗೆ ಬಿದ್ದು 10 ವರ್ಷದ ಬಾಲಕ ಜುನೈದ್ ಮೃತಪಟ್ಟಿರುವ ಪ್ರಕರಣ ಸಂಬಂಧ ಬಿಬಿಎಂಪಿ ಆಯುಕ್ತರು ಹಾಗೂ ಸಂಬಂಧಪಟ್ಟ ವಲಯದ ಜಂಟಿ ಆಯುಕ್ತರಿಗೆ ಲೋಕಾಯುಕ್ತರು ನೋಟಿಸ್ ಜಾರಿ ಮಾಡಿದ್ದಾರೆ...

ಬೆಂಗಳೂರು: ಎಚ್‍ಎಎಲ್‍ನ ಯಮಲೂರು ಸಮೀಪ ರಾಜಕಾಲುವೆಗೆ ಬಿದ್ದು 10 ವರ್ಷದ ಬಾಲಕ ಜುನೈದ್ ಮೃತಪಟ್ಟಿರುವ ಪ್ರಕರಣ ಸಂಬಂಧ ಬಿಬಿಎಂಪಿ ಆಯುಕ್ತರು ಹಾಗೂ ಸಂಬಂಧಪಟ್ಟ ವಲಯದ ಜಂಟಿ ಆಯುಕ್ತರಿಗೆ ಲೋಕಾಯುಕ್ತರು ನೋಟಿಸ್ ಜಾರಿ ಮಾಡಿದ್ದಾರೆ.

ನಗರ ವ್ಯಾಪ್ತಿಯಲ್ಲಿರುವ ಎಲ್ಲಾ ರಾಜಕಾಲುವೆಗಳಿಗೆ ನೆಲಮಟ್ಟದಿಂದ 6 ಅಡಿ ಎತ್ತರದ ಕಬ್ಬಿಣದ ತಂತಿ ತಡೆಗೋಡೆ ನಿರ್ಮಿಸಬೇಕು. ಅಲ್ಲದೇ ಅಪಾಯಕಾರಿಯಾಗಿರುವ ಜಾಗದಲ್ಲಿ ರೇಡಿಯಂ ಅಕ್ಷರಗಳಿಂದ ಬರೆದಿರುವ ಎಚ್ಚರಿಕೆ ಸೂಚನಾ ಫಲಕ ಅಂಟಿಸಬೇಕು ಎಂದು 2015, ಏಪ್ರಿಲ್‍ನಲ್ಲಿ ಬಿಬಿಎಂಪಿ ಆಯುಕ್ತರು ಹಾಗೂ ಸಂಬಂಧಪಟ್ಟ ಎಂಜಿನಿಯರ್ ಗಳೊಂದಿಗೆ ನಡೆದ ಸಭೆಯಲ್ಲಿ ಲೋಕಾಯುಕ್ತರು ನಿರ್ದೇಶನ ನೀಡಿದ್ದರು.

ಸೂಚನೆ ಪಾಲಿಸಲು ಮೇ 25 ಗಡುವು ನೀಡಲಾಗಿತ್ತು. ಆದರೆ, ಲೋಕಾಯುಕ್ತರ ನಿರ್ದೇಶನವನ್ನು ಪಾಲಿಸುವಲ್ಲಿ ಬಿಬಿಎಂಪಿ ಆಯುಕ್ತರು ಹಾಗೂ ಎಂಜಿನಿಯರ್‍ಗಳು ವಿಫಲರಾಗಿದ್ದಾರೆ. ಹೀಗಾಗಿಯೇ ತಡೆಗೋಡೆ ಇಲ್ಲದ ರಾಜ ಕಾಲುವೆ ಬಳಿ ಚೆಂಡು ಹಿಡಿಯಲು ಹೋಗಿ ಬಾಲಕ ಜುನೈಲ್ ಆಕಸ್ಮಿಕವಾಗಿ ಬಿದ್ದು ಮೃತಪಟ್ಟಿದ್ದ. ಘಟನೆಗೆ ಸಂಬಂಧಿಸಿದಂತೆ ಹಾಗೂ ನಿರ್ದೇಶನಗಳನ್ನು ಪಾಲನೆ ಮಾಡದಿರುವ ಬಗ್ಗೆ ಜೂ.9ರೊಳಗೆ ವರದಿ ನೀಡುವಂತೆ ಬಿಬಿಎಂಪಿ ಆಯುಕ್ತರು ಹಾಗೂ ಸಂಬಂಧಪಟ್ಟ ವಲಯದ ಜಂಟಿ ಆಯುಕ್ತರಿಗೆ ಲೋಕಾಯುಕ್ತರು ನೋಟಿಸ್ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT