ರಾಮಲಿಂಗಾರೆಡ್ಡಿ 
ಜಿಲ್ಲಾ ಸುದ್ದಿ

ಹೊಸ ರಸ್ತೆ 2 ವರ್ಷ ಅಗೆಯುವಂತಿಲ್ಲ: ರಾಮಲಿಂಗಾರೆಡ್ಡಿ

ರಸ್ತೆ ಕಾಮಗಾರಿ ನಡೆದ ನಂತರ ಕನಿಷ್ಠ ಎರಡು ವರ್ಷಗಳವರೆಗೂ ರಸ್ತೆ ಅಗೆಯುವಂತಿಲ್ಲ ಎಂದು ಬಿಬಿಎಂಪಿ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು...

ಬೆಂಗಳೂರು: ರಸ್ತೆ ಕಾಮಗಾರಿ ನಡೆದ ನಂತರ ಕನಿಷ್ಠ ಎರಡು ವರ್ಷಗಳವರೆಗೂ ರಸ್ತೆ ಅಗೆಯುವಂತಿಲ್ಲ ಎಂದು ಬಿಬಿಎಂಪಿ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ಅವರು ತಿಳಿಸಿದ್ದಾರೆ.

ಬಿಬಿಎಂಪಿಯಲ್ಲಿ ಮಂಗಳವಾರ ನಡೆದ ಓಎಫ್‌ಸಿ ಸಮನ್ವಯ ಸಮಿತಿ ಸಭೆ ನಂತರ ಮಾತನಾಡಿದ ಅವರು, ಓಎಫ್‌ಸಿ ಕೇಬಲ್ ಸೇರಿದಂತೆ ಭೂಮಿಯ ಕೆಳಗೆ ಏನೇ ಅಳವಡಿಸುವುದಿದ್ದರೂ ಕಾಮಗಾರಿಗೆ ಮುನ್ನ ಮಾಡಬೇಕು ಎಂದು ಸೂಚಿಸಲಾಗಿದೆ. ಹೊಸ ರಸ್ತೆಗಳಲ್ಲಿ ಓಎಫ್‌ಸಿ ಕೇಬಲ್ ಅಳವಡಿಸಲು ದೊಡ್ಡದಾಗಿ ಗುಂಡಿ ತೋಡುತ್ತಿದ್ದು, ಸಾರ್ವಜನಿಕರ ಹಣ ಪೋಲಾಗುತ್ತಿದೆ. ಸಣ್ಣ ಕಾಮಗಾರಿಗಳಿದ್ದರೆ ರಸ್ತೆ ಬದಿಗಳಲ್ಲಿ ಸಣ್ಣದಾಗಿ ಗುಂಡಿ ತೋಡಿ ಕಾಮಗಾರಿ ನಡೆಸಬಹುದು. ಆದರೆ ರಸ್ತೆ ಮಧ್ಯ ಗುಂಡಿ ತೋಡುವುದರಿಂದ ಹೊಸದಾಗಿ ಮಾಡಿದ ರಸ್ತೆ ಕಾಮಗಾರಿ ವ್ಯರ್ಥವಾಗುತ್ತದೆ. ಇದಕ್ಕೆ ಕಡಿವಾಣ ಹಾಕುವಂತೆ ಬಿಬಿಎಂಪಿ ವಲಯ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.

ಕಾಮಗಾರಿ ನಡೆಯುವಾಗಲೇ ವಿವಿಧ ಇಲಾಖೆಗಳೊಂದಿಗೆ ಸಂವಹನ ನಡೆಸಬೇಕು. ರಸ್ತೆ ಕಾಮಗಾರಿಯ ಜೊತೆಗೆ ಓಎಫ್‌ಸಿ ಅಳವಡಿಸುವು ಕಾರ್ಯವೂ ನಡೆಬೇಕು ಎಂದು ಸಚಿವರು ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಅಧಿಕಾರಿಗಳ ಸಭೆ ನಡೆದಿದ್ದು, ಸೇಂಟ್ ಮಾರ್ಕ್ಸ್ ರಸ್ತೆ ಬದಿ ಗುಂಡಿ ತೋಡಿರುವುದರ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಿಯಮದ ಪ್ರಕಾರ, ಟೆಂಡರ್ ಶ್ಯೂರ್ ರಸ್ತೆಯಲ್ಲಿ ಮುಂಚಿತವಾಗಿ ಎಲ್ಲವನ್ನೂ ಅಳವಡಿಸಬೇಕು. ಬಿಬಿಎಂಪಿ ಹಾಗೂ ಜಲಮಂಡಳಿ ಸಭೆ ನಡೆಸಿ ತೀರ್ಮಾನಕ್ಕೆ ಬರಬೇಕೆಂದು ಸೂಚನೆ ನೀಡಲಾಗಿದೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ಉರ್ದು ಭಾಷೆಯಲ್ಲಿ ಸರ್ಕಾರದ ಜಾಹೀರಾತು: ಸಿಎಂ ಸಿದ್ದರಾಮಯ್ಯ ಸಮರ್ಥನೆ ಹೇಗಿದೆ ಗೊತ್ತಾ?

SCROLL FOR NEXT