ರಾಮಲಿಂಗಾರೆಡ್ಡಿ 
ಜಿಲ್ಲಾ ಸುದ್ದಿ

ಹೊಸ ರಸ್ತೆ 2 ವರ್ಷ ಅಗೆಯುವಂತಿಲ್ಲ: ರಾಮಲಿಂಗಾರೆಡ್ಡಿ

ರಸ್ತೆ ಕಾಮಗಾರಿ ನಡೆದ ನಂತರ ಕನಿಷ್ಠ ಎರಡು ವರ್ಷಗಳವರೆಗೂ ರಸ್ತೆ ಅಗೆಯುವಂತಿಲ್ಲ ಎಂದು ಬಿಬಿಎಂಪಿ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು...

ಬೆಂಗಳೂರು: ರಸ್ತೆ ಕಾಮಗಾರಿ ನಡೆದ ನಂತರ ಕನಿಷ್ಠ ಎರಡು ವರ್ಷಗಳವರೆಗೂ ರಸ್ತೆ ಅಗೆಯುವಂತಿಲ್ಲ ಎಂದು ಬಿಬಿಎಂಪಿ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ಅವರು ತಿಳಿಸಿದ್ದಾರೆ.

ಬಿಬಿಎಂಪಿಯಲ್ಲಿ ಮಂಗಳವಾರ ನಡೆದ ಓಎಫ್‌ಸಿ ಸಮನ್ವಯ ಸಮಿತಿ ಸಭೆ ನಂತರ ಮಾತನಾಡಿದ ಅವರು, ಓಎಫ್‌ಸಿ ಕೇಬಲ್ ಸೇರಿದಂತೆ ಭೂಮಿಯ ಕೆಳಗೆ ಏನೇ ಅಳವಡಿಸುವುದಿದ್ದರೂ ಕಾಮಗಾರಿಗೆ ಮುನ್ನ ಮಾಡಬೇಕು ಎಂದು ಸೂಚಿಸಲಾಗಿದೆ. ಹೊಸ ರಸ್ತೆಗಳಲ್ಲಿ ಓಎಫ್‌ಸಿ ಕೇಬಲ್ ಅಳವಡಿಸಲು ದೊಡ್ಡದಾಗಿ ಗುಂಡಿ ತೋಡುತ್ತಿದ್ದು, ಸಾರ್ವಜನಿಕರ ಹಣ ಪೋಲಾಗುತ್ತಿದೆ. ಸಣ್ಣ ಕಾಮಗಾರಿಗಳಿದ್ದರೆ ರಸ್ತೆ ಬದಿಗಳಲ್ಲಿ ಸಣ್ಣದಾಗಿ ಗುಂಡಿ ತೋಡಿ ಕಾಮಗಾರಿ ನಡೆಸಬಹುದು. ಆದರೆ ರಸ್ತೆ ಮಧ್ಯ ಗುಂಡಿ ತೋಡುವುದರಿಂದ ಹೊಸದಾಗಿ ಮಾಡಿದ ರಸ್ತೆ ಕಾಮಗಾರಿ ವ್ಯರ್ಥವಾಗುತ್ತದೆ. ಇದಕ್ಕೆ ಕಡಿವಾಣ ಹಾಕುವಂತೆ ಬಿಬಿಎಂಪಿ ವಲಯ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.

ಕಾಮಗಾರಿ ನಡೆಯುವಾಗಲೇ ವಿವಿಧ ಇಲಾಖೆಗಳೊಂದಿಗೆ ಸಂವಹನ ನಡೆಸಬೇಕು. ರಸ್ತೆ ಕಾಮಗಾರಿಯ ಜೊತೆಗೆ ಓಎಫ್‌ಸಿ ಅಳವಡಿಸುವು ಕಾರ್ಯವೂ ನಡೆಬೇಕು ಎಂದು ಸಚಿವರು ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಅಧಿಕಾರಿಗಳ ಸಭೆ ನಡೆದಿದ್ದು, ಸೇಂಟ್ ಮಾರ್ಕ್ಸ್ ರಸ್ತೆ ಬದಿ ಗುಂಡಿ ತೋಡಿರುವುದರ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಿಯಮದ ಪ್ರಕಾರ, ಟೆಂಡರ್ ಶ್ಯೂರ್ ರಸ್ತೆಯಲ್ಲಿ ಮುಂಚಿತವಾಗಿ ಎಲ್ಲವನ್ನೂ ಅಳವಡಿಸಬೇಕು. ಬಿಬಿಎಂಪಿ ಹಾಗೂ ಜಲಮಂಡಳಿ ಸಭೆ ನಡೆಸಿ ತೀರ್ಮಾನಕ್ಕೆ ಬರಬೇಕೆಂದು ಸೂಚನೆ ನೀಡಲಾಗಿದೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Operation Sindoor ವೇಳೆ ಪಾಕಿಸ್ತಾನಕ್ಕೆ ನೆರವು, Azerbaijan ಶಾಕ್ ಕೊಟ್ಟ ಭಾರತ, SCO ಸದಸ್ಯತ್ವಕ್ಕೆ ತಡೆ! ಅಧ್ಯಕ್ಷ Ilham Aliyev ಹೇಳಿದ್ದೇನು?

ಒಂದೂರಿನಲ್ಲಿ ಬಡ ಬ್ರಾಹ್ಮಣನಿದ್ದ ಎಂದೇ ಶುರುವಾಗುತ್ತಿದ್ದ ಕತೆಯನ್ನು ಬದಲಿಸುತ್ತಿರುವವರ್ಯಾರು? (ತೆರೆದ ಕಿಟಕಿ)

ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆ: ಭೂಕುಸಿತದಲ್ಲಿ ಆರು ಮಂದಿ ಸಾವು; 1,150 ಕ್ಕೂ ಹೆಚ್ಚು ರಸ್ತೆಗಳು ಬಂದ್; Video

'ಉದಾತ್ತ ಹೃದಯ ಮತ್ತು ಸರಳತೆ': ಜನ್ಮದಿನಕ್ಕೆ ಶುಭ ಕೋರಿದ ಶಿವಣ್ಣಗೆ ಧನ್ಯವಾದ ಹೇಳಿದ ನಟ Pawan Kalyan

ಜಮ್ಮು- ಕಾಶ್ಮೀರದಲ್ಲಿ ಭಾರೀ ಮಳೆಗೆ ಪ್ರವಾಹ ಭೀತಿ: ಚೆನಾಬ್, ಝೇಲಂನಲ್ಲಿ ಅಪಾಯದ ಮಟ್ಟ ಮೀರಿದ ನೀರು; ಶಾಲೆಗಳಿಗೆ ರಜೆ, ಹೆದ್ದಾರಿ ಬಂದ್

SCROLL FOR NEXT