ಪತ್ರಿಕಾಗೋಷ್ಠಿಯಲ್ಲಿ ಎನ್.ವಿ ನರಸಿಂಹಯ್ಯ, ಮರಳಸಿದ್ದಪ್ಪ, ಶೆಹರಿಯಾರ್ ಖಾನ್ ಮತ್ತಿತರರು ಹಾಜರಿದ್ದರು. 
ಜಿಲ್ಲಾ ಸುದ್ದಿ

ರಾಜಕೀಯಕ್ಕಾಗಿ ಟಿಪ್ಪು ತೇಜೋವಧೆ ಮಾಡಲಾಗುತ್ತಿದೆ: ಮರಳುಸಿದ್ದಪ್ಪ

ಆಲೂರು ವೆಂಕಟರಾಯರನ್ನು ರಾಜಕೀಯದ ಪಗಡೆಯ ದಾಳವಾಗಿ ಬಳಿಸಿಕೊಂಡು, ಟಿಪ್ಪು ಸುಲ್ತಾರನ್ನು ತೇಜೋವಧೆ ಮಾಡಲಾಗುತ್ತಿದೆ ಎಂದು ಹಿರಿಯ...

ಬೆಂಗಳೂರು: ಆಲೂರು ವೆಂಕಟರಾಯರನ್ನು ರಾಜಕೀಯದ ಪಗಡೆಯ ದಾಳವಾಗಿ ಬಳಿಸಿಕೊಂಡು, ಟಿಪ್ಪು ಸುಲ್ತಾರನ್ನು ತೇಜೋವಧೆ ಮಾಡಲಾಗುತ್ತಿದೆ ಎಂದು ಹಿರಿಯ ಕನ್ನಡ ಸಾಹಿತಿ ಮರಳಸಿದ್ದಪ್ಪ ಹೇಳಿದ್ದಾರೆ.

ನಗರದ ಪ್ರೆಸ್ ಕ್ಲಬ್ ನಲ್ಲಿ ಟಿಪ್ಪು ಸುಲ್ತಾನ್ ಸಂಯುಕ್ತ ರಂಗ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಚಾಮರಾಜಪೇಟೆಯಲ್ಲಿರುವ ಎ.ವಿ ರಸ್ತೆಯನ್ನು ಆಲೂರು ವೆಂಕಟರಾಯರ ರಸ್ತೆಯೆಂದು ಹೇಳಲಾಗುತ್ತಿದೆ. ಆದರೆ ಕಡತಗಳ ಆಧಾರದ ಪ್ರಕಾರ, ಅದರ ಹೆಸರು ಆಲ್ಬರ್ಟ್ ವಿಕ್ಟರ್ ರಸ್ತೆ. ಆದರೆ, ಇದನ್ನು ಆಲೂರು ವೆಂಕಟರಾಯರ ರಸ್ತೆ ಎಂದು ಕೆಲವರು ಹೇಳುತ್ತಿದ್ದಾರೆ. ಈ ವಿಚಾರವನ್ನು ರಾಜಕೀಯವಾಗಿ ಬಳಸಿಕೊಂಡು ಮತ್ತೆ ಕೋಮುಗಲಭೆ ಸೃಷ್ಟಿಸಲು ಕೆಲವರು ಮುಂದಾಗಿದ್ದಾರೆ ಎಂದಿದ್ದಾರೆ.

ಚಾಮರಾಜಪೇಟೆಯಲ್ಲಿರುವ ಎ.ವಿ ರಸ್ತೆಗೆ ಟಿಪ್ಪು ಸುಲ್ತಾನ್ ಹೆಸರು ಇಡುವ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಬೇಕೆಂದು ಬಿಬಿಎಂಪಿ ಅಧಿಕಾರಿಗಳ ಮೇಲೆ ರಾಜಕೀಯದವರು ಒತ್ತಡ ಹೇರುತ್ತಿದ್ದಾರೆ. ಈ ಮೂಲಕ ಟಿಪ್ಪು ಸುಲ್ತಾನ್ ಅವರನ್ನು ತೇಜೋವಧೆ ಮಾಡಲಾಗುತ್ತಿದೆ ಎಂದ ಅವರು, ಚರಿತ್ರೆಯಲ್ಲಿ ಯಾವುದೇ ವ್ಯತ್ಯಾಸಗಳಿರುವುದಿಲ್ಲ. ಈ ವ್ಯತ್ಯಾಸಗಳನ್ನು ದುರುದ್ದೇಶದಿಂದ ಸೃಷ್ಟಿಸಲಾಗುತ್ತಿದೆ. ಕೋಮುಗಲಭೆ ಉಂಟಾಗುವ ಬೀಜ ಬಿತ್ತಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಈ ರಸ್ತೆಗೆ ಆಲೂರು ವೆಂಕಟರಾಯರ ರಸ್ತೆ ಎಂದು ಅಧಿಕೃತವಾಗಿ ಸರ್ಕಾರಿ ಕಡತಗಳಲ್ಲಿ ನಾಮಕರಣವಾಗಿದ್ದರೆ ನಮ್ಮದೇನು ಆಕ್ಷೇಪವಿಲ್ಲ. ಆದರೆ, ಕಡತಗಳಲ್ಲಿ ಆಲ್ಬರ್ಟ್ ವಿಕ್ಟರ್ ರಸ್ತೆ ಎಂದು ಬಿಬಿಎಂಪಿ ಕಡತಗಳಲ್ಲಿ ದಾಖಲಾಗಿದ್ದರೆ, ಅದಕ್ಕೆ ದೇಶಪ್ರೇಮಿ ಟಿಪ್ಪು ಸುಲ್ತಾನ್ ಹೆಸರು ಇಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.



Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

5th T20I: ಬಟ್ಲರ್, ಬ್ರೂಕ್ ಅರ್ಭಟ; ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಹೀನಾಯ ಸೋಲು, ಸರಣಿ ವೈಟ್‌ವಾಶ್

ಖಿನ್ನತೆಗೆ ಜಾರಿದ್ದೆ, ಗುಣಪಡಿಸಲು ಮಗು ಮಾಡಿಕೊಳ್ಳಿ ಎಂದು ವೈದ್ಯರು ಹೇಳಿದ್ರು; ಹುಡುಗನ ಎಲ್ಲಿ ಹುಡುಕಲಿ?: Endometriosis ಭಯಾನಕತೆ ಬಿಚ್ಚಿಟ್ಟ ಶಮಿತಾ ಶೆಟ್ಟಿ

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!

ಪುಣೆಯಲ್ಲಿ ತ್ಯಾಜ್ಯದ ಗುಡ್ಡ ಬಿದ್ದು ಕಟ್ಟಡ ಕುಸಿತ: 8 ಮಂದಿ ಸಾವು; 14 ಜನರ ರಕ್ಷಣೆ, ಒಬ್ಬರು ಇನ್ನೂ ನಾಪತ್ತೆ!