ನೆಲಮಂಗಲ: ವೇಗವಾಗಿ ಬರುತ್ತಿದ್ದ ಸ್ಕಾರ್ಪಿಯೋ ಕಾರು ಚಾಲಕನ ನಿಯಂತ್ರಣ ತಪ್ಪಿ ಮತ್ತೊಂದು ಬದಿಯಲ್ಲಿ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸಾವನ್ನಪ್ಪಿರುವ ಘಟನೆ ಬೆಂಗಳೂರು ಹೊರವಲಯದಲ್ಲಿ ನಡೆದಿದೆ.
ರಾಷ್ಟ್ರೀಯ ಹೆದ್ದಾರಿ 4ರ ನೆಲಮಂಗಲದ ದಾನೋಜಿಪಾಳ್ಯದ ಬಳಿ ಶುಕ್ರವಾರ ಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ಕಾರಿನಲ್ಲಿದ್ದ ಜಾರ್ಖಂಡ್ ಹಾಗೂ ಉತ್ತರ ಪ್ರದೇಶ ಮೂಲದ ನಾಲ್ವರು ವಿದ್ಯಾರ್ಥಿಗಳು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.
ಬೆಂಗಳೂರಿನಿಂದ ತುಮಕೂರಿಗೆ ವಿದ್ಯಾರ್ಥಿಗಲು ತೆರಳುತ್ತಿದ್ದ ವೇಳೆ ಈ ಅವಘಡ ಸಂಭವಿಸಿದ್ದು, ಅವಘಡದಲ್ಲಿ ಕಾರಿನಲ್ಲಿದ್ದ ಒಂದು ನಾಯಿಯೂ ಮೃತಪಟ್ಟಿದೆ. ಸ್ಥಳಕ್ಕೆ ನೆಲಮಂಗಲ ಪಟ್ಟಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.