ಪತ್ರಿಕಾಗೋಷ್ಟಿಯಲ್ಲಿ ಕಲಾ ನಿರ್ದೇಶಕ ಅರುಣ್ ಸಾಗರ್, ಕೀಮ ಆಯೋಜಕ ವಿ.ಕೆ ಲೋಕೇಶ್ 
ಜಿಲ್ಲಾ ಸುದ್ದಿ

2015ರ ಕೀಮ ಪ್ರಶಸ್ತಿಗೆ ಅರ್ಜಿ ಆಹ್ವಾನ

ಮಾಧ್ಯಮ ನಿರ್ವಹಣಾ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಟಾರಿಯನ್‌ ಸಂಸ್ಥೆ ನೀಡುವ ಕೀಮ (ಕನ್ನಡ ಅಂತರರಾಷ್ಟ್ರೀಯ ಸಂಗೀತ ಪ್ರಶಸ್ತಿ) 2015ನೇ ಸಾಲಿನ...

ಬೆಂಗಳೂರು: ಮಾಧ್ಯಮ ನಿರ್ವಹಣಾ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಟಾರಿಯನ್‌ ಸಂಸ್ಥೆ ನೀಡುವ ಕೀಮ (ಕನ್ನಡ ಅಂತರರಾಷ್ಟ್ರೀಯ ಸಂಗೀತ ಪ್ರಶಸ್ತಿ) 2015ನೇ ಸಾಲಿನ ಪ್ರಶಸ್ತಿಗಳಿಗೆ ಸಂಗೀತ ಕ್ಷೇತ್ರದಲ್ಲಿನ ವಿವಿಧ ಸಾಧಕರಿಂದ ಅರ್ಜಿಗಳನ್ನು ಆಹ್ವಾನಿಸಿದೆ.

ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ವಿ. ಕೆ ಲೋಕೇಶ್ ಅವರು ಒಟ್ಟು 30 ಪ್ರಶಸ್ತಿಗಳನ್ನು ನೀಡಲಾಗುತ್ತಿದ್ದು ಸಂಗೀತ ಹಕ್ಕು ಹೊಂದಿರುವ ಸಂಗೀತ ಸಂಯೋಜಕರು, ಸಾಹಿತಿ­ಗಳು, ಹಿನ್ನೆಲೆ ಗಾಯಕರು, ವಾದ್ಯ ಸಂಯೋಜಕರು, ತಂತ್ರಜ್ಞರು, ಚಲನಚಿತ್ರ/ ಚಲನಚಿತ್ರೇತರ ಹಾಡುಗಳಲ್ಲಿ ಸಾಧನೆ ಮಾಡಿರುವವರು ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದು. ತೀರ್ಪುಗಾರರ ಸಮಿತಿ ಅರ್ಜಿಗಳನ್ನು ಪರಿಷ್ಕರಿಸಿ ನಾಮಾಂಕಿತರನ್ನು ಘೋಷಿಸಲಿದೆ.

ಜೀವಮಾನದ ಸಾಧನೆ, ಮಹೋನ್ನತ ಕೊಡುಗೆ ಮತ್ತು ಅಂತರರಾಷ್ಟ್ರೀಯ ಸಂಗೀತಗಾರ ವಿಭಾಗಗಳಲ್ಲಿ ವಿಶೇಷ ಪ್ರಶಸ್ತಿಗಳನ್ನು ಸಹ ನೀಡಲಾಗುವುದು. ಜೂನ್ 21ರವರೆಗೆ ಅರ್ಜಿ ಸಲ್ಲಿಸಲು ಅವಕಾಶವಿದೆ. ಪ್ರಶಸ್ತಿ ಕುರಿತ ವಿವರಗಳಿಗೆ www.kima.co.in ವೆಬ್‌ಸೈಟ್‌ಅನ್ನು ವೀಕ್ಷಿಸಬಹುದು. 

ಪತ್ರಿಕಾಗೋಷ್ಟಿಯಲ್ಲಿ ಕಲಾ ನಿರ್ದೇಶಕ, ನಟ ಅರುಣ್ ಸಾಗರ್, ಸಂಸ್ಥೆಯ ಮುಖ್ಯಸ್ಥರು ಹಾಜರಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!