ಮಾಜಿ ಶಾಸಕ ಅರಗ ಜ್ಞಾನೇಂದ್ರ ಮತ್ತು ಮೃತ ಬಾಲಕಿ ನಂದಿತಾ 
ಜಿಲ್ಲಾ ಸುದ್ದಿ

ನಂದಿತಾ ಸಾವು ಪ್ರಕರಣ ಗಲಭೆ: ಮಾಜಿ ಶಾಸಕ ಅರಗ ಜ್ಞಾನೇಂದ್ರ ವಿರುದ್ಧ ಚಾರ್ಜ್ ಶೀಟ್

ತೀರ್ಥಹಳ್ಳಿ ಬಾಲಕಿ ನಂದಿತ ಸಾವಿನ ಪ್ರಕರಣ ನಂತರ ನಡೆದ ಗಲಭೆ ಸಂಬಂಧ ಮಾಜಿ ಶಾಸಕ ಅರಗ ಜ್ಞಾನೇಂದ್ರ ಸೇರಿದಂತೆ 47 ಮಂದಿ ವಿರುದ್ಧ ಪೊಲೀಸರು ಜಾರ್ಜ್ ಶೀಟ್ ಸಲ್ಲಿಸಿದ್ದಾರೆ.

ಶಿವಮೊಗ್ಗ: ತೀರ್ಥಹಳ್ಳಿ ಬಾಲಕಿ ನಂದಿತ ಸಾವಿನ ಪ್ರಕರಣ ನಂತರ ನಡೆದ ಗಲಭೆ ಸಂಬಂಧ ಮಾಜಿ ಶಾಸಕ ಅರಗ ಜ್ಞಾನೇಂದ್ರ ಸೇರಿದಂತೆ 47 ಮಂದಿ ವಿರುದ್ಧ ಪೊಲೀಸರು ಶುಕ್ರವಾರ ಜಾರ್ಜ್ ಶೀಟ್ ಸಲ್ಲಿಸಿದ್ದಾರೆ. 2014 ರಲ್ಲಿ ನಂದಿತಾ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಳು. ಹೀಗಾಗಿ ಇಡೀ ತೀರ್ಥಹಳ್ಳಿ ಹೊತ್ತಿ ಉರಿದಿತ್ತು.

8 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ನಂದಿತಾ 2014 ಅಕ್ಟೋಬರ್ 29 ರಂದು  ಆನಂದಗಿರಿ ಬೆಟ್ಟದಲ್ಲಿ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದಳು. ನಂತರ ಆಕೆಯನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೇ ಅಕ್ಟೋಬರ್ 31 ರಂದು ನಂದಿತಾ ಸಾವನ್ನಪ್ಪಿದ್ದಳು. ನಂತರ ತೀರ್ಥಹಳ್ಳಿಯಲ್ಲಿ ದೊಡ್ಡ ಗಲಭೆಯೇ ನಡೆದಿತ್ತು. ಹೀಗಾಗಿ ಸುಮಾರು 15 ದಿನಗಳ ಕಾಲ ನಿಷೇದಾಜ್ಞೆ ಜಾರಿ ಮಾಡಲಾಗಿತ್ತು.

ಗಲಭೆ ಪ್ರಕರಣ ಸಂಬಂಧ ಮಾಜಿ ಶಾಸಕ ಅರಗ ಜ್ಞಾನೇಂದ್ರ ಸೇರಿದಂತೆ 47 ಜನರ ವಿರುದ್ಧ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.ಶಾಂತಿ ಭಂಗ, ಸಾರ್ವಜನಿಕ ಆಸ್ತಿ ನಷ್ಟ, ಪೊಲೀಸ್ ವಾಹನ ಜಖಂ ಹಾಗೂ 144 ಸೆಕ್ಷನ್ ಉಲ್ಲಂಘನೆ ಆರೋಪಗಳ ಅಡಿಯಲ್ಲಿ ಚಾರ್ಜ್ ಶೀಟ್ ಸಲ್ಲಿಕೆ ಮಾಡಲಾಗಿದೆ.

ಈ ಗಲಭೆಯ ನಂತರ ಸರ್ಕಾರ ನಂದಿತಾ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿತ್ತು. ವಿಚಾರಣೆ ನಡೆಸಿದ ಸಿಐಡಿ ಪೊಲೀಸರು ನಂದಿತಾ ಮಾನಸಿಕ ಖಿನ್ನತೆಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ವರದಿ ನೀಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಸ್ಸಾಂ: ಸೈರಾಂಗ್‌-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ; ಸ್ಥಳದಲ್ಲೇ 7 ಆನೆಗಳ ದಾರುಣ ಸಾವು

ಉ.ಕ. ನಿರ್ಲಕ್ಷ್ಯ ಮಾಡಿದ್ದೇವೆ ಎಂದು ಹೇಳುವ ನೈತಿಕ ಹಕ್ಕು ಬಿಜೆಪಿಯವರಿಗೆ ಇಲ್ಲ, 'ಗ್ಯಾರಂಟಿ ನಿಧಿ'ಯ ಶೇ. 43.63 ಭಾಗ ನೀಡಿದ್ದೇವೆ: ಸಿದ್ದರಾಮಯ್ಯ

Epstein Files ಬಿಡುಗಡೆ: ಟ್ರಂಪ್ ಬಗ್ಗೆ ಹೆಚ್ಚಿನದ್ದಿಲ್ಲ; ಕ್ಲಿಂಟನ್ ಫೋಟೋಗಳು ಬಹಿರಂಗ!

ಬಿಕ್ಲು ಶಿವ ಕೊಲೆ ಕೇಸ್ ನಲ್ಲಿ ಸಿಗದ ನಿರೀಕ್ಷಣಾ ಜಾಮೀನು: ಅಜ್ಞಾತ ಸ್ಥಳಕ್ಕೆ ತೆರಳಿದ ಬಿಜೆಪಿ ಶಾಸಕ ಭೈರತಿ ಬಸವರಾಜು?

ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾತ್ರೋರಾತ್ರಿ ಶೋಧ; ಇತಿಹಾಸದಲ್ಲಿಯೇ ಮೊದಲ ಬಾರಿಗೆ 30 ಮೊಬೈಲ್ ಫೋನ್‌ಗಳು ವಶ!

SCROLL FOR NEXT