ಪತ್ರಿಕಾಗೋಷ್ಠಿ ನಡೆಸಿದ ಅಂತರಾಷ್ಟ್ರೀಯ ಯೋಗ ಸಂಯೋಜಕರಾದ ಆಚಾರ್ಯ ಎಂ. ನಿರಂಜನಮೂರ್ತಿ. 
ಜಿಲ್ಲಾ ಸುದ್ದಿ

ಬೆಂಗಳೂರಿನಲ್ಲಿ ಜೂನ್ 21ರಂದು 'ಯೋಗ ಚಾಂಪಿಯನ್ ಶಿಪ್' ಸ್ಪರ್ಧೆ

ಎಸ್ ಜಿ ಎಸ್ ಅಂತರಾಷ್ಟ್ರೀಯ ಯೋಗ ಪ್ರತಿಷ್ಠಾನ ಹಾಗೂ ಕರ್ನಾಟಕ ಸರ್ಕಾರದ ಯುವ ಸಬಲೀಕರಣ ಸಹಯೋಗದಲ್ಲಿ ಜೂನ್ 21ರಂದು 'ಯೋಗ ಚಾಂಪಿಯನ್...

ಬೆಂಗಳೂರು: ಎಸ್ ಜಿ ಎಸ್ ಅಂತರಾಷ್ಟ್ರೀಯ ಯೋಗ ಪ್ರತಿಷ್ಠಾನ ಹಾಗೂ ಕರ್ನಾಟಕ ಸರ್ಕಾರದ ಯುವ ಸಬಲೀಕರಣ ಸಹಯೋಗದಲ್ಲಿ ಜೂನ್ 21ರಂದು 'ಯೋಗ ಚಾಂಪಿಯನ್ ಶಿಪ್' ಸ್ಪರ್ಧೆಯನ್ನು ಕಂಠೀರವ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅತರರಾಷ್ಟ್ರೀಯ ಯೋಗ ಸಂಯೋಜಕರಾದ ಆಚಾರ್ಯ ಎಂ. ನಿರಂಜನಮೂರ್ತಿ, ಅಂತರರಾಷ್ಟ್ರೀಯ ಯೋಗ ದಿನದ ಸವಿ ನೆನಪಿಗಾಗಿ ಈ ಸ್ಪರ್ಧೆ ಹಮ್ಮಿಕೊಳ್ಳಲಾಗಿದ್ದು, ಸ್ಪರ್ಧೆಯಲ್ಲಿ ಯಾರು ಬೇಕಾದರೂ ಭಾಗವಹಿಸಬಹುದಾಗಿದೆ. ಸ್ಪರ್ಧೆಯಲ್ಲಿ ಭಾಗವಹಿಸುವವರು ಮೂರು ಆಸನಗಳನ್ನು ಪ್ರದರ್ಶಿಸಲು ಅವಕಾಶ ಕಲ್ಪಿಸಲಾಗಿದೆ ಎಂದಿದ್ದಾರೆ.
ಸ್ಪರ್ಧೆಯು 9 ವಯೋವಿಭಾಗದಲ್ಲಿ ಪುರುಷ ಮತ್ತು ಮಹಿಳೆಯರಿಗೆ ಪ್ರತ್ಯೇಕವಾಗಿ ನಡೆಸುತ್ತಿದ್ದು, ಸ್ಪರ್ಧ ಮೂರು ವಿಜೇತರಿಗೆ 5 ಸಾವಿರ ನಗದು ಬಹುಮಾನ ಮತ್ತು ಯೋಗ ಕುಮಾರ, ಯೋಗ ಕುಮಾರಿ, ಸೇರಿದಂತೆ ವಿಭಿನ್ನ ಬಿರುದುಗಳನ್ನು ನೀಡಲಾಗುವುದು ಎಂದು ಹೇಳಿದ್ದಾರೆ.
ಸ್ಪರ್ಧೆಯಲ್ಲಿ ಭಾಗವಹಿಸಲು ಇಚ್ಛಿಸುವವರು ಜೂನ್ 15ರೊಳಗಾಗಿ ನೊಂದಾಯಿಸಿಕೊಳ್ಳಬಹುದು.
ಹೆಚ್ಚಿನ ಮಾಹಿತಿಗಾಗಿ: ಆಚಾರ್ಯ ಎಂ.ನಿರಂಜನಮೂರ್ತಿ ಅಂತರರಾಷ್ಟ್ರೀಯ ಯೋಗ ಸಂಯೋಜಕ, ನಂ.7, 4ನೇ ಮಹಡಿ, ಡಾ.ವಿಷ್ಣುವರ್ಧನ್ ರಸ್ತೆ, ಪದ್ಮನಾಭನಗರ ಬೆಂಗಳೂರು- 560061
ದೂರವಾಣಿ ಸಂಖ್ಯೆ: 9343583787 ಸಂಪರ್ಕಿಸಿ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮತ್ತೆ ಗ್ರಾಹಕರಿಗೆ ಶಾಕ್: ಪೆಟ್ರೋಲ್, ಡೀಸೆಲ್ ದರ 5 ದಿನಗಳಲ್ಲಿ ಎರಡನೇ ಬಾರಿ ಏರಿಕೆ

Tamil Nadu: ಯಾವುದೇ ಸಮಯದಲ್ಲಿ TMK ಸರ್ಕಾರ ಪತನ, ರೆಡಿಯಾಗಿರಿ, ಡಿಎಂಕೆ ಕಾರ್ಯಕರ್ತರಿಗೆ ಸ್ಟಾಲಿನ್ ಕರೆ!

ದುಬಾರೆ ಆನೆ ಶಿಬಿರದಲ್ಲಿ ಸಾಕಾನೆಗಳ ಕಾದಾಟ: ಕಂಜನ್ ದಾಳಿಯಿಂದ ಗಾಯಗೊಂಡಿದ್ದ 'ಮಾರ್ತಾಂಡ' ಸಾವು!

ರಾಜ್ಯ ಸರ್ಕಾರಕ್ಕೆ ಮೂರು ವರ್ಷ ತುಂಬಿದ ಹಿನ್ನೆಲೆಯಲ್ಲಿ ಸಾಧನ ಸಮಾವೇಶ: ಗಿನ್ನೆಸ್ ದಾಖಲೆಗೆ ತುಮಕೂರು ಸಜ್ಜು!

ಗಲ್ಫ್ ರಾಷ್ಟ್ರಗಳ ಮನವಿ: ಇರಾನ್ ಮೇಲಿನ ದಾಳಿ ಮುಂದೂಡಿದ ಡೊನಾಲ್ಡ್ ಟ್ರಂಪ್

SCROLL FOR NEXT