ಪತ್ರಿಕಾಗೋಷ್ಠಿ ನಡೆಸಿದ ಅಂತರಾಷ್ಟ್ರೀಯ ಯೋಗ ಸಂಯೋಜಕರಾದ ಆಚಾರ್ಯ ಎಂ. ನಿರಂಜನಮೂರ್ತಿ. 
ಜಿಲ್ಲಾ ಸುದ್ದಿ

ಬೆಂಗಳೂರಿನಲ್ಲಿ ಜೂನ್ 21ರಂದು 'ಯೋಗ ಚಾಂಪಿಯನ್ ಶಿಪ್' ಸ್ಪರ್ಧೆ

ಎಸ್ ಜಿ ಎಸ್ ಅಂತರಾಷ್ಟ್ರೀಯ ಯೋಗ ಪ್ರತಿಷ್ಠಾನ ಹಾಗೂ ಕರ್ನಾಟಕ ಸರ್ಕಾರದ ಯುವ ಸಬಲೀಕರಣ ಸಹಯೋಗದಲ್ಲಿ ಜೂನ್ 21ರಂದು 'ಯೋಗ ಚಾಂಪಿಯನ್...

ಬೆಂಗಳೂರು: ಎಸ್ ಜಿ ಎಸ್ ಅಂತರಾಷ್ಟ್ರೀಯ ಯೋಗ ಪ್ರತಿಷ್ಠಾನ ಹಾಗೂ ಕರ್ನಾಟಕ ಸರ್ಕಾರದ ಯುವ ಸಬಲೀಕರಣ ಸಹಯೋಗದಲ್ಲಿ ಜೂನ್ 21ರಂದು 'ಯೋಗ ಚಾಂಪಿಯನ್ ಶಿಪ್' ಸ್ಪರ್ಧೆಯನ್ನು ಕಂಠೀರವ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅತರರಾಷ್ಟ್ರೀಯ ಯೋಗ ಸಂಯೋಜಕರಾದ ಆಚಾರ್ಯ ಎಂ. ನಿರಂಜನಮೂರ್ತಿ, ಅಂತರರಾಷ್ಟ್ರೀಯ ಯೋಗ ದಿನದ ಸವಿ ನೆನಪಿಗಾಗಿ ಈ ಸ್ಪರ್ಧೆ ಹಮ್ಮಿಕೊಳ್ಳಲಾಗಿದ್ದು, ಸ್ಪರ್ಧೆಯಲ್ಲಿ ಯಾರು ಬೇಕಾದರೂ ಭಾಗವಹಿಸಬಹುದಾಗಿದೆ. ಸ್ಪರ್ಧೆಯಲ್ಲಿ ಭಾಗವಹಿಸುವವರು ಮೂರು ಆಸನಗಳನ್ನು ಪ್ರದರ್ಶಿಸಲು ಅವಕಾಶ ಕಲ್ಪಿಸಲಾಗಿದೆ ಎಂದಿದ್ದಾರೆ.
ಸ್ಪರ್ಧೆಯು 9 ವಯೋವಿಭಾಗದಲ್ಲಿ ಪುರುಷ ಮತ್ತು ಮಹಿಳೆಯರಿಗೆ ಪ್ರತ್ಯೇಕವಾಗಿ ನಡೆಸುತ್ತಿದ್ದು, ಸ್ಪರ್ಧ ಮೂರು ವಿಜೇತರಿಗೆ 5 ಸಾವಿರ ನಗದು ಬಹುಮಾನ ಮತ್ತು ಯೋಗ ಕುಮಾರ, ಯೋಗ ಕುಮಾರಿ, ಸೇರಿದಂತೆ ವಿಭಿನ್ನ ಬಿರುದುಗಳನ್ನು ನೀಡಲಾಗುವುದು ಎಂದು ಹೇಳಿದ್ದಾರೆ.
ಸ್ಪರ್ಧೆಯಲ್ಲಿ ಭಾಗವಹಿಸಲು ಇಚ್ಛಿಸುವವರು ಜೂನ್ 15ರೊಳಗಾಗಿ ನೊಂದಾಯಿಸಿಕೊಳ್ಳಬಹುದು.
ಹೆಚ್ಚಿನ ಮಾಹಿತಿಗಾಗಿ: ಆಚಾರ್ಯ ಎಂ.ನಿರಂಜನಮೂರ್ತಿ ಅಂತರರಾಷ್ಟ್ರೀಯ ಯೋಗ ಸಂಯೋಜಕ, ನಂ.7, 4ನೇ ಮಹಡಿ, ಡಾ.ವಿಷ್ಣುವರ್ಧನ್ ರಸ್ತೆ, ಪದ್ಮನಾಭನಗರ ಬೆಂಗಳೂರು- 560061
ದೂರವಾಣಿ ಸಂಖ್ಯೆ: 9343583787 ಸಂಪರ್ಕಿಸಿ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT