ಹೈಕೋರ್ಟ್ 
ಜಿಲ್ಲಾ ಸುದ್ದಿ

ಬೆಂಗಳೂರು-ಮಂಗಳೂರು ಮಾರ್ಗದಲ್ಲಿ ರೈಲುಗಳ ಸಂಖ್ಯೆ ಹೆಚ್ಚಿಸಲು ಹೈಕೋರ್ಟ್ ಸೂಚನೆ

ಬೆಂಗಳೂರು-ಮಂಗಳೂರು ಮಾರ್ಗದಲ್ಲಿ ರೈಲುಗಳ ಸಂಖ್ಯೆ ಹೆಚ್ಚಿಸುವ ಕುರಿತು ಖಚಿತ ಮಾಹಿತಿ ನೀಡಬೇಕೆಂದು ರೈಲ್ವೆ ಇಲಾಖೆಗೆ ಹೈಕೋರ್ಟ್ ಸೂಚನೆ

ಬೆಂಗಳೂರು: ಬೆಂಗಳೂರು-ಮಂಗಳೂರು ಮಾರ್ಗದಲ್ಲಿ ರೈಲುಗಳ ಸಂಖ್ಯೆ ಹೆಚ್ಚಿಸುವ ಹಾಗೂ ಪ್ರಸ್ತುತ ಸಂಚರಿಸುತ್ತಿರುವ ರೈಲುಗಳಿಗೆ ಹೆಚ್ಚುವರಿ ಬೋಗಿಗಳನ್ನು ಅಳವಡಿಸುವ ಕುರಿತು ಒಂದು ವಾರದಲ್ಲಿ ಖಚಿತ ಮಾಹಿತಿ ನೀಡಬೇಕೆಂದು ರೈಲ್ವೆ ಇಲಾಖೆಗೆ ಹೈಕೋರ್ಟ್ ಸೂಚನೆ ನೀಡಿದೆ.   

ಬೆಂಗಳೂರು -ಮಂಗಳೂರು ಮಾರ್ಗದಲ್ಲಿ ರಸ್ತೆ ಸಾರಿಗೆ  ಹಾಗೂ ರೈಲಿನ ವ್ಯವಸ್ಥೆ ಅಸಮರ್ಪಕವಾಗಿದ್ದು, ಸೂಕ್ತ ವ್ಯವಸ್ಥೆ ಕಲ್ಪಿಸಲು ಆದೇಶ  ನೀಡಲು  ಕೋರಿ ಲತಾ ರಮೇಶ್ ಮತ್ತು  ಪ್ರದೀಪ್ ಕುಮಾರ್  ಎಂಬುವವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಹೈಕೋರ್ಟ್ ನ ಮುಖ್ಯ  ನ್ಯಾಯ ಮೂರ್ತಿ  ಎಸ್.ಕೆ ಮುಖರ್ಜಿ  ಮತ್ತು ನ್ಯಾ.ರಾಮಮೋಹನ ರೆಡ್ಡಿ ಅವರಿದ್ದ ವಿಭಾಗೀಯ ಪೀಠ, ಹೆಚ್ಚುವರಿ ರೈಲು ಸೇವೆ ಕಲ್ಪಿಸಲು  ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿದೆ.  

ಬೆಂಗಳೂರು-ಮಂಗಳೂರು ರಸ್ತೆ ಹಾಗೂ ರೈಲು  ಮಾರ್ಗ ಸಮರ್ಪಕವಾಗಿಲ್ಲ, ಅಲ್ಲದೇ  ಶಿರಾಡಿ ಘಾಟ್ ರಸ್ತೆ ಮಾರ್ಗ ದುಸ್ಥಿತಿಯಲ್ಲಿರುವ ಕಾರಣ, ಚಾರ್ಮಡಿ ಘಾಟ್ ಬಳಸಿಕೊಂಡು ಮಂಗಳೂರಿಗೆ ಪ್ರಯಾಣಿಸಬೇಕಿದೆ. ಪ್ರಯಾಣಿಕರಿಗೆ  ಅನುಕೂಲವಾಗಲು ಹೆಚ್ಚಿನ ರೈಲು ಸಂಪರ್ಕಗಳನ್ನು ಕಲ್ಪಿಸಲು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಅರ್ಜಿದಾರರ ಪರ ವಕೀಲರು ವಾದಮಂಡಿಸಿದ್ದರು.

ಹೈಕೋರ್ಟ್ ನಿರ್ದೇಶನಕ್ಕೆ ಪ್ರತಿಕ್ರಿಯೆ ನೀಡಿರುವ ರೈಲ್ವೆ ಇಲಾಖೆ ಪರ ವಕೀಲರು, ರೈಲುಗಳ ಸಂಖ್ಯೆಯನ್ನು  ಹೆಚ್ಚಿಸುವ ಸಂಬಂಧ ಅಧಿಕಾರಿಗಳೊಂದಿಗೆ ಚರ್ಚೆ  ನಡೆಸಲಾಗುವುದು. ಇದಕ್ಕಾಗಿ ಕಾಲಾವಕಾಶ ಅಗತ್ಯವಿದೆ ಎಂದು  ಮನವಿ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಸರ್ಕಾರಿ ಸಂಸ್ಥೆಗಳು, ಸಾರ್ವಜನಿಕ ಸ್ಥಳಗಳಲ್ಲಿ RSS ಚಟುವಟಿಕೆಗಳನ್ನು ನಿಷೇಧಿಸಿ: ಮುಖ್ಯಮಂತ್ರಿಗೆ ಪ್ರಿಯಾಂಕ್ ಖರ್ಗೆ ಪತ್ರ

RSS ನಿಷೇಧಕ್ಕೆ ಕರೆ: ಸಚಿವ ಪ್ರಿಯಾಂಕ್ ಖರ್ಗೆ ಬೌದ್ಧಿಕ ದಾರಿದ್ರ್ಯತನ ತೋರಿಸುತ್ತದೆ, ಯತ್ನಾಳ್ ಕಿಡಿ!

ಭಾರತ- ಬಾಂಗ್ಲಾದೇಶ ಗಡಿ: ರೂ. 2.82 ಕೋಟಿ ಮೌಲ್ಯದ 'ಚಿನ್ನದ ಬಿಸ್ಕತ್ತು' ಜೊತೆಗೆ ಕಳ್ಳಸಾಗಣೆದಾರನನ್ನು ಬಂಧಿಸಿದ BSF!

SCROLL FOR NEXT