ಬಿಬಿಎಂಪಿ 
ಜಿಲ್ಲಾ ಸುದ್ದಿ

ಬಿಬಿಎಂಪಿ ಮೀಸಲು ಪಟ್ಟಿ ತಕರಾರನ್ನು ಏಕಸದಸ್ಯ ಪೀಠದಲ್ಲೇ ಬಗೆಹರಿಸಿಕೊಳ್ಳಿ : ಹೈಕೋರ್ಟ್

ಬಿಬಿಎಂಪಿ ಚುನಾವಣೆ ಮೀಸಲು ಪಟ್ಟಿ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಹೈಕೋರ್ಟ್ ನ ನ್ಯಾ.ನಾಗರತ್ನ ಅವರ ಏಕಸದಸ್ಯ ಪೀಠದಲ್ಲೇ ಬಗೆಹರಿಸಿಕೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ನ್ಯಾ.ರಾಘವೇಂದ್ರ ಸಿಂಗ್ ಚೌವ್ಹಾಣ್ ಆದೇಶಿಸಿದ್ದಾರೆ.

ಬೆಂಗಳೂರು : ಬಿಬಿಎಂಪಿ  ಚುನಾವಣೆ ಮೀಸಲು ಪಟ್ಟಿ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಹೈಕೋರ್ಟ್  ನ ನ್ಯಾ.ನಾಗರತ್ನ ಅವರ ಏಕಸದಸ್ಯ ಪೀಠದಲ್ಲೇ ಬಗೆಹರಿಸಿಕೊಳ್ಳುವಂತೆ  ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನ್ಯಾ.ರಾಘವೇಂದ್ರ ಸಿಂಗ್ ಚೌವ್ಹಾಣ್ ಆದೇಶಿಸಿದ್ದಾರೆ. 

ಮೇ.31 ರೊಳಗೆ ಬಿಬಿಎಂಪಿ ಚುನಾವಣೆ ಪ್ರಕ್ರಿಯೆ ನಡೆಸಬೇಕು. ಬಿಬಿಎಂಪಿ ಚುನಾವಣೆಗೆ 2001 ರ ಜನಗಣತಿ  ಆಧರಿಸಿ ಮೀಸಲುಪಟ್ಟಿ ನಿಗದಿಪಡಿಸಿ ಮೇ.31 ರ ಒಳಗಾಗಿ ಚುನಾವಣೆ ನಡೆಸುವಂತೆ ನ್ಯಾ.ಬಿ.ವಿ ನಾಗರತ್ನ ಅವರಿದ್ದ ಪೀಠ ರಾಜ್ಯ ಚುನಾವಣಾ ಆಯೋಗಕ್ಕೆ ಕಳೆದ ಮಾರ್ಚ್ 30 ರಂದು ನಿರ್ದೇಶನ ನೀಡಿತ್ತು. ಆದೇಶವನ್ನು ಪ್ರಶ್ನಿಸಿದ್ದ ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಆಯೋಗ, ಹೈಕೋರ್ಟ್ ಗೆ ತಕರಾರು ಅರ್ಜಿ ಸಲ್ಲಿಸಿ, 2011 ರ ಜನಗಣತಿ ಆಧಾರದ ಮೇಲೆ  ಮೀಸಲು ಪಟ್ಟಿ ಸಿದ್ಧಪಡಿಸಲು ಸರ್ಕಾರ ಹಾಗೂ ಚುನಾವಣಾ ಆಯೋಗಕ್ಕೆ ಆದೇಶ ನೀಡಬೇಕೆಂದು ಕೋರಿತ್ತು.

ವಿಚಾರಣೆ ವೇಳೆ ವಾದ ಮಂಡಿಸಿದ್ದ ಸರ್ಕಾರದ ಪರ ಹೆಚ್ಚುವರಿ ಅಡ್ವೊಕೇಟ್ ಜನರಲ್ ಎ.ಎಸ್  ಪೊನ್ನಣ್ಣ,  ಚುನಾವಣೆಗೆ 2011 ರ ಜನಗಣತಿ ಪ್ರಕಾರವೇ ಮೀಸಲು ಪಟ್ಟಿ ಪ್ರಕಟಿಸಲು  ಸರ್ಕಾರ ಸಿದ್ಧವಿದೆ. ಆದರೆ  ಸೂಕ್ತ ಸಮಯದಲ್ಲಿ ಚುನಾವಣೆ ನಡೆಸುವಂತೆ ನಿರ್ದೇಶಿಸಿರುವ ನ್ಯಾ.ನಾಗರತ್ನ ಅವರ ಆದೇಶದಲ್ಲಿ ಮೀಸಲು  ವಿವರ ಸ್ಪಷ್ಟವಾಗಿಲ್ಲ ಎಂದು ನ್ಯಾ. ರಾಘವೇಂದ್ರ ಸಿಂಗ್ ಚೌವ್ಹಾಣ್  ಅವರಿದ್ದ ಪೀಠಕ್ಕೆ ತಿಳಿಸಿದರು.  ಇದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಹೈಕೋರ್ಟ್,  ಏಕ ಸದಸ್ಯ ಪೀಠದ ಆದೇಶದ ನಂತರವೂ ನೀವು ಚುನಾವಣೆಗೆ ಮುಂದಾಗಲೇ ಇಲ್ಲ.  ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ವಿಭಾಗೀಯ ಪೀಠಕ್ಕೆ ಹೋದಿರಿ, ನಂತರ ಈ ಪ್ರಕರಣ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ಈಗ ನೋಡಿದರೆ  ಮೀಸಲು ತಕರಾರಿನಲ್ಲಿ 2011 ರ  ಜನಗಣತಿ ಪ್ರಕಾರವೇ  ಚುನಾವಣೆ ನಡೆಸುತ್ತೇವೆ ಎಂದು ಹೇಳುತ್ತಿದ್ದೀರಿ, ನಾವು ತಾಳ ಹಾಕಬೇಕು ನೀವು  ಕುಣಿಯಬೇಕು ಆಗಾಗ್ಗೆ ಹೊಸ ರಾಗ ಗಳನ್ನೂ ಹುಡುಕಬೇಕೆ? ಎಂದು  ನ್ಯಾಯಮೂರ್ತಿ ಚೌವ್ಹಾಣ್ ಸರ್ಕಾರದ ವಕೀಲರನ್ನು ಪ್ರಶ್ನಿಸಿದರು.

ಅಲ್ಲದೇ  ತನ್ನದೇ ಮಿತಿಯಲ್ಲಿ ಪೀಠ ವಿಚಾರಣೆ ನಡೆಸುತ್ತಿರುವುದರಿಂದ ಈ ಹಿಂದೆ ಆದೇಶ ನೀಡಿದ್ದ ನ್ಯಾ.ನಾಗರತ್ನ ಅವರ ಏಕಸದಸ್ಯ   ಪೀಠದ ಮುಂದೆಯೇ ಹೋಗಿ ಹೊಸದಾಗಿ ಅರ್ಜಿ ಸಲ್ಲಿಸಿ   ಬಗೆಹರಿಸಿಕೊಳ್ಳಿ ಎಂದು ಆದೇಶ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮೈಸೂರಿನಲ್ಲಿ ರಾಹುಲ್ ಗಾಂಧಿ ಜತೆ ಸಿದ್ದರಾಮಯ್ಯ, ಡಿಕೆಸಿ ಮಹತ್ವದ ಚರ್ಚೆ; ಬಳಿಕ ಸಿಎಂ ಹೇಳಿದ್ದೇನು? Video

'Ground Ops ಗಾಗಿ ಭಾರತೀಯ ಸೇನೆ ಸಂಪೂರ್ಣ ಸಜ್ಜು: ಪಾಕ್ ಗೆ ವಾರ್ನಿಂಗ್ ನೀಡಿದ ಸೇನಾ ಮುಖ್ಯಸ್ಥ ದ್ವಿವೇದಿ!

ಬ್ಲಿಂಕಿಟ್, ಸ್ವಿಗ್ಗಿ, ಜೆಪ್ಟೊಗೆ 10 ನಿಮಿಷಗಳ ಡೆಲಿವರಿ ಸೇವೆ ನಿಲ್ಲಿಸುವಂತೆ ಸರ್ಕಾರ ಸೂಚನೆ; ಯಾಕೆ ಗೊತ್ತಾ?

'ಹಾವು ಕಚ್ಚಿದೆ ಬೇಗ ಚಿಕಿತ್ಸೆ ಕೊಡಿ'; ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂದ ಆಟೋ ಚಾಲಕ, Video

ಜಮ್ಮು-ಕಾಶ್ಮೀರ: ಇದೇ ಮೊದಲು, ಮಸೀದಿಯ ಇಮಾಮ್ ಸೇರಿದಂತೆ ಎಲ್ಲರ ವೈಯಕ್ತಿಕ ಮಾಹಿತಿ ಕಲೆ ಹಾಕುತ್ತಿರುವ ಪೊಲೀಸರು! ಕಾರಣವೇನು ಗೊತ್ತಾ?

SCROLL FOR NEXT