ಬಿಬಿಎಂಪಿ 
ಜಿಲ್ಲಾ ಸುದ್ದಿ

ಬಿಬಿಎಂಪಿ ಮೀಸಲು ಪಟ್ಟಿ ತಕರಾರನ್ನು ಏಕಸದಸ್ಯ ಪೀಠದಲ್ಲೇ ಬಗೆಹರಿಸಿಕೊಳ್ಳಿ : ಹೈಕೋರ್ಟ್

ಬಿಬಿಎಂಪಿ ಚುನಾವಣೆ ಮೀಸಲು ಪಟ್ಟಿ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಹೈಕೋರ್ಟ್ ನ ನ್ಯಾ.ನಾಗರತ್ನ ಅವರ ಏಕಸದಸ್ಯ ಪೀಠದಲ್ಲೇ ಬಗೆಹರಿಸಿಕೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ನ್ಯಾ.ರಾಘವೇಂದ್ರ ಸಿಂಗ್ ಚೌವ್ಹಾಣ್ ಆದೇಶಿಸಿದ್ದಾರೆ.

ಬೆಂಗಳೂರು : ಬಿಬಿಎಂಪಿ  ಚುನಾವಣೆ ಮೀಸಲು ಪಟ್ಟಿ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಹೈಕೋರ್ಟ್  ನ ನ್ಯಾ.ನಾಗರತ್ನ ಅವರ ಏಕಸದಸ್ಯ ಪೀಠದಲ್ಲೇ ಬಗೆಹರಿಸಿಕೊಳ್ಳುವಂತೆ  ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನ್ಯಾ.ರಾಘವೇಂದ್ರ ಸಿಂಗ್ ಚೌವ್ಹಾಣ್ ಆದೇಶಿಸಿದ್ದಾರೆ. 

ಮೇ.31 ರೊಳಗೆ ಬಿಬಿಎಂಪಿ ಚುನಾವಣೆ ಪ್ರಕ್ರಿಯೆ ನಡೆಸಬೇಕು. ಬಿಬಿಎಂಪಿ ಚುನಾವಣೆಗೆ 2001 ರ ಜನಗಣತಿ  ಆಧರಿಸಿ ಮೀಸಲುಪಟ್ಟಿ ನಿಗದಿಪಡಿಸಿ ಮೇ.31 ರ ಒಳಗಾಗಿ ಚುನಾವಣೆ ನಡೆಸುವಂತೆ ನ್ಯಾ.ಬಿ.ವಿ ನಾಗರತ್ನ ಅವರಿದ್ದ ಪೀಠ ರಾಜ್ಯ ಚುನಾವಣಾ ಆಯೋಗಕ್ಕೆ ಕಳೆದ ಮಾರ್ಚ್ 30 ರಂದು ನಿರ್ದೇಶನ ನೀಡಿತ್ತು. ಆದೇಶವನ್ನು ಪ್ರಶ್ನಿಸಿದ್ದ ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಆಯೋಗ, ಹೈಕೋರ್ಟ್ ಗೆ ತಕರಾರು ಅರ್ಜಿ ಸಲ್ಲಿಸಿ, 2011 ರ ಜನಗಣತಿ ಆಧಾರದ ಮೇಲೆ  ಮೀಸಲು ಪಟ್ಟಿ ಸಿದ್ಧಪಡಿಸಲು ಸರ್ಕಾರ ಹಾಗೂ ಚುನಾವಣಾ ಆಯೋಗಕ್ಕೆ ಆದೇಶ ನೀಡಬೇಕೆಂದು ಕೋರಿತ್ತು.

ವಿಚಾರಣೆ ವೇಳೆ ವಾದ ಮಂಡಿಸಿದ್ದ ಸರ್ಕಾರದ ಪರ ಹೆಚ್ಚುವರಿ ಅಡ್ವೊಕೇಟ್ ಜನರಲ್ ಎ.ಎಸ್  ಪೊನ್ನಣ್ಣ,  ಚುನಾವಣೆಗೆ 2011 ರ ಜನಗಣತಿ ಪ್ರಕಾರವೇ ಮೀಸಲು ಪಟ್ಟಿ ಪ್ರಕಟಿಸಲು  ಸರ್ಕಾರ ಸಿದ್ಧವಿದೆ. ಆದರೆ  ಸೂಕ್ತ ಸಮಯದಲ್ಲಿ ಚುನಾವಣೆ ನಡೆಸುವಂತೆ ನಿರ್ದೇಶಿಸಿರುವ ನ್ಯಾ.ನಾಗರತ್ನ ಅವರ ಆದೇಶದಲ್ಲಿ ಮೀಸಲು  ವಿವರ ಸ್ಪಷ್ಟವಾಗಿಲ್ಲ ಎಂದು ನ್ಯಾ. ರಾಘವೇಂದ್ರ ಸಿಂಗ್ ಚೌವ್ಹಾಣ್  ಅವರಿದ್ದ ಪೀಠಕ್ಕೆ ತಿಳಿಸಿದರು.  ಇದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಹೈಕೋರ್ಟ್,  ಏಕ ಸದಸ್ಯ ಪೀಠದ ಆದೇಶದ ನಂತರವೂ ನೀವು ಚುನಾವಣೆಗೆ ಮುಂದಾಗಲೇ ಇಲ್ಲ.  ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ವಿಭಾಗೀಯ ಪೀಠಕ್ಕೆ ಹೋದಿರಿ, ನಂತರ ಈ ಪ್ರಕರಣ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ಈಗ ನೋಡಿದರೆ  ಮೀಸಲು ತಕರಾರಿನಲ್ಲಿ 2011 ರ  ಜನಗಣತಿ ಪ್ರಕಾರವೇ  ಚುನಾವಣೆ ನಡೆಸುತ್ತೇವೆ ಎಂದು ಹೇಳುತ್ತಿದ್ದೀರಿ, ನಾವು ತಾಳ ಹಾಕಬೇಕು ನೀವು  ಕುಣಿಯಬೇಕು ಆಗಾಗ್ಗೆ ಹೊಸ ರಾಗ ಗಳನ್ನೂ ಹುಡುಕಬೇಕೆ? ಎಂದು  ನ್ಯಾಯಮೂರ್ತಿ ಚೌವ್ಹಾಣ್ ಸರ್ಕಾರದ ವಕೀಲರನ್ನು ಪ್ರಶ್ನಿಸಿದರು.

ಅಲ್ಲದೇ  ತನ್ನದೇ ಮಿತಿಯಲ್ಲಿ ಪೀಠ ವಿಚಾರಣೆ ನಡೆಸುತ್ತಿರುವುದರಿಂದ ಈ ಹಿಂದೆ ಆದೇಶ ನೀಡಿದ್ದ ನ್ಯಾ.ನಾಗರತ್ನ ಅವರ ಏಕಸದಸ್ಯ   ಪೀಠದ ಮುಂದೆಯೇ ಹೋಗಿ ಹೊಸದಾಗಿ ಅರ್ಜಿ ಸಲ್ಲಿಸಿ   ಬಗೆಹರಿಸಿಕೊಳ್ಳಿ ಎಂದು ಆದೇಶ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT