ಸಾಂದರ್ಭಿಕ ಚಿತ್ರ 
ಜಿಲ್ಲಾ ಸುದ್ದಿ

ಹೈಟೆಕ್ ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ: ಇಬ್ಬರ ಬಂಧನ

ಲ್ಯಾವೆಲ್ಲೆ ರಸ್ತೆಯಲ್ಲಿರುವ ಸರ್ವಿಸ್ ಅಪಾರ್ಟ್‌ಮೆಂಟ್‌ವೊಂದರಲ್ಲಿ ನಡೆಯುತ್ತಿದ್ದ ಹೈಟೆಕ್ ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ ನಡೆಸಿದ...

ಬೆಂಗಳೂರು: ಲ್ಯಾವೆಲ್ಲೆ ರಸ್ತೆಯಲ್ಲಿರುವ ಸರ್ವಿಸ್ ಅಪಾರ್ಟ್‌ಮೆಂಟ್‌ವೊಂದರಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ ನಡೆಸಿದ ಸಿಸಿಬಿ ಪೊಲೀಸರು ಇಬ್ಬರನ್ನು ಬಂಧಿಸಿ, ಮೂವರು ಯುವತಿಯರನ್ನು ರಕ್ಷಿಸಿದ್ದಾರೆ.

ಅಗ್ರಹಾರ ದಾಸರಹಳ್ಳಿಯ ದಿಲೀಪ್ ಕುಮಾರ್(30) ಹಾಗೂ ಚನ್ನರಾಯನಪಟ್ಟಣದ ಯೋಗೇಶ್(26) ಬಂಧಿತರು. ಪಶ್ಚಿಮ ಬಂಗಾಳ, ಮುಂಬೈ ಹಾಗೂ ಭೋಪಾಲ್ ಮೂಲದ ಮೂವರು ಯುವತಿಯರನ್ನು ರಕ್ಷಿಸಲಾಗಿದೆ. ಆರು ಸಾವಿರ ರುಪಾಯಿ ನಗದು, 2 ಮೊಬೈಲ್ ಹಾಗೂ 2 ದ್ವಿಚಕ್ರ ವಾಹನ ಹಾಗೂ ಇತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಅರುಣ್ ಭಾಗ್ ಎಂಬಾತ ಅಪಾರ್ಟ್‌ಮೆಂಟ್‌ನಲ್ಲಿ ಫ್ಲ್ಯಾಟ್ ಬಾಡಿಗೆ ಪಡೆದು ಹೊರ ರಾಜ್ಯಗಳಿಂದ ಯುವತಿಯರನ್ನು ಕಳ್ಳಸಾಗಣೆ ಮಾಡಿಕೊಂಡು ಕರೆತರುತ್ತಿದ್ದ. ಅಂತರ್ಜಾಲದಲ್ಲಿ ಮೊಬೈಲ್ ಫೋನ್ ನಂಬರ್ ನೀಡಿ ಗ್ರಾಹಕರ ಸಂಪರ್ಕಿಸುತ್ತಿದ್ದ. ಆಸಕ್ತ ಗ್ರಾಹಕರು ಕರೆ ಮಾಡಿದಾಗ ಅವರನ್ನು ಸಮೀಪದ ಹೋಟೆಲ್ ಬಳಿ ಕರೆಸಿಕೊಳ್ಳುತ್ತಿದ್ದ. ಅಲ್ಲಿಂದ ಮತ್ತಿಬ್ಬರು ಆರೋಪಿಗಳಾದ ಗಿರೀಶ್ ಮತ್ತು ವೆಂಕಟೇಶ್ ಎಂಬುವರು ಅವರನ್ನು ದ್ವಿಚಕ್ರ ವಾಹನದಲ್ಲಿ ಅಪಾರ್ಟ್‌ಮೆಂಟ್‌ಗೆ ಕರೆದುಕೊಂಡು ಹೋಗುತ್ತಿದ್ದರು.

ಗ್ರಾಹಕರಿಂದ ಮೂರು ತಾಸಿಗೆ 25 ಸಾವಿರದಿಂದ 30 ಸಾವಿರ ಹಣ ಪಡೆಯುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ತಲೆಮರೆಸಿಕೊಂಡಿರುವ ಅರುಣ್, ಗಿರೀಶ್ ಹಾಗೂ ವೆಂಕಟೇಶ್‌ಗಾಗಿ ಶೋಧ ಕಾರ್ಯ ಮುಂದುವರೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT