ಬಿಬಿಎಂಪಿ ಆಡಳಿತಾಧಿಕಾರಿ ಟಿ.ಎಂ.ವಿಜಯಭಾಸ್ಕರ್ 
ಜಿಲ್ಲಾ ಸುದ್ದಿ

ಗುರುತಿನ ಚೀಟಿ, ಇಎಸ್‍ಐ ನೀಡದ ಗುತ್ತಿಗೆದಾರನಿಗೆ ರು.25ಸಾವಿರ ದಂಡ

ಪೌರಕಾರ್ಮಿಕರಿಗೆ ಗುರುತಿನ ಚೀಟಿ ಹಾಗೂ ಇಎಸ್‍ಐ ನೀಡದ ರಾಜಾಜಿನಗರದ ಗುತ್ತಿಗೆದಾರನಿಗೆ ಬಿಬಿಎಂಪಿ ಆಡಳಿತಾಧಿಕಾರಿ ಟಿ.ಎಂ.ವಿಜಯಭಾಸ್ಕರ್ ರು.25 ಸಾವಿರ ದಂಡ ವಿಧಿಸಿದ್ದಾರೆ...

ಬೆಂಗಳೂರು: ಪೌರಕಾರ್ಮಿಕರಿಗೆ ಗುರುತಿನ ಚೀಟಿ ಹಾಗೂ ಇಎಸ್‍ಐ ನೀಡದ ರಾಜಾಜಿನಗರದ ಗುತ್ತಿಗೆದಾರನಿಗೆ ಬಿಬಿಎಂಪಿ ಆಡಳಿತಾಧಿಕಾರಿ ಟಿ.ಎಂ.ವಿಜಯಭಾಸ್ಕರ್ ರು.25 ಸಾವಿರ ದಂಡ ವಿಧಿಸಿದ್ದಾರೆ.

ತೀವ್ರ ಸ್ವಚ್ಛತಾ ಅಭಿಯಾನದ ಅಂಗವಾಗಿ ಆಡಳಿತಾಧಿಕಾರಿ ವಿಜಯಭಾಸ್ಕರ್ ಹಾಗೂ ಆಯುಕ್ತ ಜಿ. ಕುಮಾರ್ ನಾಯಕ್ ರಾಜಾಜಿನಗರ, ಬಸವನಗುಡಿ, ಪದ್ಮನಾಭನಗರ ವಾರ್ಡ್‍ಗಳಲ್ಲಿ ಪರಿಶೀಲನೆ ನಡೆಸಿದರು. ರಾಜಾಜಿನಗರದ ಶ್ರೀರಾಂಪುರ 7ನೇ ಮುಖ್ಯರಸ್ತೆಗೆ ಭೇಟಿ ನೀಡಿ ಪೌರ ಕಾರ್ಮಿಕರೊಂದಿಗೆ ಸಂವಾದ ನಡೆಸಲಾಯಿತು. ಪೌರ ಕಾರ್ಮಿಕರಿಗೆ ಕಾನೂನು ರೀತಿ ಸಿಗಬೇಕಾದ ಸೌಲಭ್ಯ, ಸಂಬಳ, ವಿಮೆ, ಸುರಕ್ಷಾ ಉಪಕರಣಗಳ ಬಗ್ಗೆ ವಿಚಾರಿಸಿದಾಗ, ಇಎಸ್‍ಐ ಹಾಗೂ ಗುರುತಿನ ಚೀಟಿ ನೀಡದಿರುವ ಬಗ್ಗೆ ಪೌರ ಕಾರ್ಮಿಕರು ದೂರಿದರು.

ಕೂಡಲೇ ಗುತ್ತಿಗೆದಾರನಿಗೆ ರು.25 ಸಾವಿರ ದಂಡ ವಿಧಿಸಿದ ಆಡಳಿತಾಧಿಕಾರಿ ವಿಜಯಭಾಸ್ಕರ್, ಎರಡು ದಿನಗಳೊಳಗೆ ಗುರುತಿನ ಚೀಟಿ, ಇಎಸ್‍ಐ ನೀಡಬೇಕು ಎಂದು ಸೂಚಿಸಿದರು. ನಂತರ ಮಲ್ಲೇಶ್ವರ, ರಾಜಾಜಿನಗರದ ಪ್ರಮುಖ ರಸ್ತೆ, ಪದ್ಮನಾಭನಗರಕ್ಕೆ ಭೇಟಿ ನೀಡಿ ತಪಾಸಣೆ ನಡೆಸಲಾಯಿತು. ಚರಂಡಿಯ ಹೂಳೆತ್ತುವಿಕೆ, ಕಸ ವಿಲೇವಾರಿ, ಬೀದಿಯಲ್ಲಿ ಬಿದ್ದ ಕಲ್ಲುಗಳನ್ನು ನಿರಂತರವಾಗಿ ವಿಲೇವಾರಿ ನಡೆಯಬೇಕೆಂದು ಪೌರಕಾರ್ಮಿಕರು ಹಾಗೂ ಗುತ್ತಿಗೆದಾರರಿಗೆ ಸೂಚಿಸಲಾಯಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ

Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ, ಗ್ರಾಹಕರ ಜೇಬಿಗೆ 'ಸಿಹಿ ಕಹಿ'!

2nd Test: ಬೌಂಡರಿ ಲೈನ್ ಬಳಿ ದುರ್ವರ್ತನೆ ತೋರಿದ್ದ ಲಂಕಾ ಆಟಗಾರ Prabath Jayasuriyaಗೆ ಬರೆ ಹಾಕಿದ ICC!