ಬಿಬಿಎಂಪಿ ಆಡಳಿತಾಧಿಕಾರಿ ಟಿ.ಎಂ.ವಿಜಯಭಾಸ್ಕರ್ 
ಜಿಲ್ಲಾ ಸುದ್ದಿ

ಗುರುತಿನ ಚೀಟಿ, ಇಎಸ್‍ಐ ನೀಡದ ಗುತ್ತಿಗೆದಾರನಿಗೆ ರು.25ಸಾವಿರ ದಂಡ

ಪೌರಕಾರ್ಮಿಕರಿಗೆ ಗುರುತಿನ ಚೀಟಿ ಹಾಗೂ ಇಎಸ್‍ಐ ನೀಡದ ರಾಜಾಜಿನಗರದ ಗುತ್ತಿಗೆದಾರನಿಗೆ ಬಿಬಿಎಂಪಿ ಆಡಳಿತಾಧಿಕಾರಿ ಟಿ.ಎಂ.ವಿಜಯಭಾಸ್ಕರ್ ರು.25 ಸಾವಿರ ದಂಡ ವಿಧಿಸಿದ್ದಾರೆ...

ಬೆಂಗಳೂರು: ಪೌರಕಾರ್ಮಿಕರಿಗೆ ಗುರುತಿನ ಚೀಟಿ ಹಾಗೂ ಇಎಸ್‍ಐ ನೀಡದ ರಾಜಾಜಿನಗರದ ಗುತ್ತಿಗೆದಾರನಿಗೆ ಬಿಬಿಎಂಪಿ ಆಡಳಿತಾಧಿಕಾರಿ ಟಿ.ಎಂ.ವಿಜಯಭಾಸ್ಕರ್ ರು.25 ಸಾವಿರ ದಂಡ ವಿಧಿಸಿದ್ದಾರೆ.

ತೀವ್ರ ಸ್ವಚ್ಛತಾ ಅಭಿಯಾನದ ಅಂಗವಾಗಿ ಆಡಳಿತಾಧಿಕಾರಿ ವಿಜಯಭಾಸ್ಕರ್ ಹಾಗೂ ಆಯುಕ್ತ ಜಿ. ಕುಮಾರ್ ನಾಯಕ್ ರಾಜಾಜಿನಗರ, ಬಸವನಗುಡಿ, ಪದ್ಮನಾಭನಗರ ವಾರ್ಡ್‍ಗಳಲ್ಲಿ ಪರಿಶೀಲನೆ ನಡೆಸಿದರು. ರಾಜಾಜಿನಗರದ ಶ್ರೀರಾಂಪುರ 7ನೇ ಮುಖ್ಯರಸ್ತೆಗೆ ಭೇಟಿ ನೀಡಿ ಪೌರ ಕಾರ್ಮಿಕರೊಂದಿಗೆ ಸಂವಾದ ನಡೆಸಲಾಯಿತು. ಪೌರ ಕಾರ್ಮಿಕರಿಗೆ ಕಾನೂನು ರೀತಿ ಸಿಗಬೇಕಾದ ಸೌಲಭ್ಯ, ಸಂಬಳ, ವಿಮೆ, ಸುರಕ್ಷಾ ಉಪಕರಣಗಳ ಬಗ್ಗೆ ವಿಚಾರಿಸಿದಾಗ, ಇಎಸ್‍ಐ ಹಾಗೂ ಗುರುತಿನ ಚೀಟಿ ನೀಡದಿರುವ ಬಗ್ಗೆ ಪೌರ ಕಾರ್ಮಿಕರು ದೂರಿದರು.

ಕೂಡಲೇ ಗುತ್ತಿಗೆದಾರನಿಗೆ ರು.25 ಸಾವಿರ ದಂಡ ವಿಧಿಸಿದ ಆಡಳಿತಾಧಿಕಾರಿ ವಿಜಯಭಾಸ್ಕರ್, ಎರಡು ದಿನಗಳೊಳಗೆ ಗುರುತಿನ ಚೀಟಿ, ಇಎಸ್‍ಐ ನೀಡಬೇಕು ಎಂದು ಸೂಚಿಸಿದರು. ನಂತರ ಮಲ್ಲೇಶ್ವರ, ರಾಜಾಜಿನಗರದ ಪ್ರಮುಖ ರಸ್ತೆ, ಪದ್ಮನಾಭನಗರಕ್ಕೆ ಭೇಟಿ ನೀಡಿ ತಪಾಸಣೆ ನಡೆಸಲಾಯಿತು. ಚರಂಡಿಯ ಹೂಳೆತ್ತುವಿಕೆ, ಕಸ ವಿಲೇವಾರಿ, ಬೀದಿಯಲ್ಲಿ ಬಿದ್ದ ಕಲ್ಲುಗಳನ್ನು ನಿರಂತರವಾಗಿ ವಿಲೇವಾರಿ ನಡೆಯಬೇಕೆಂದು ಪೌರಕಾರ್ಮಿಕರು ಹಾಗೂ ಗುತ್ತಿಗೆದಾರರಿಗೆ ಸೂಚಿಸಲಾಯಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT