ಪತ್ರಿಕಾಗೋಷ್ಠಿ ನಡೆಸಿದ ಶಮೀರ್ ಪಾಷ, ನರಸಿಂಹ ರೆಡ್ಡಿ ಮತ್ತು ಜ್ಯೋತಿ 
ಜಿಲ್ಲಾ ಸುದ್ದಿ

ಪಂಚಾಯತ್ ಚುನಾವಣೆ ಮತ ಎಣಿಕೆಯಲ್ಲಿ ಅಕ್ರಮ: ಸೋತ ಅಭ್ಯರ್ಥಿಗಳ ಆರೋಪ

ಬೆಂಗಳೂರು ದಕ್ಷಿಣ ತಾಲೂಕು ಬೇಗೂರು ಹೋಬಳಿ ದೊಡ್ಡತೋಗೂರು ಗ್ರಾಮ ಪಂಚಾಯತ್ ಗೆ ನಡೆದ ಚುನಾವಣೆಯ ಮತ ಎಣಿಕೆಯಲ್ಲಿ ಸಾಕಷ್ಟು...

ಬೆಂಗಳೂರು: ಬೆಂಗಳೂರು ದಕ್ಷಿಣ ತಾಲೂಕು ಬೇಗೂರು ಹೋಬಳಿ ದೊಡ್ಡತೋಗೂರು ಗ್ರಾಮ ಪಂಚಾಯತ್ ಗೆ ನಡೆದ ಚುನಾವಣೆಯ ಮತ ಎಣಿಕೆಯಲ್ಲಿ ಸಾಕಷ್ಟು ಅಕ್ರಮ ನಡೆದಿದ್ದು, ಒಂದೆರಡು ಮತಗಳಲ್ಲಿ ನಾವು ಸೋತಿದ್ದೇವೆ. ಆದರೂ ಮರು ಮತ ಎಣಿಕೆ ನಡೆಸುವಂತೆ ಕೋರಿದ್ದರೂ ಚುನಾವಣಾಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಚುನಾವಣೆಯಲ್ಲಿ ಸೋತ ಅಭ್ಯರ್ಥಿಗಳು ಆರೋಪಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸೋತ ಅಭ್ಯರ್ಥಿ ಜ್ಯೋತಿ ಅವರ ಪತಿ ಕೆ.ನರಸಿಂಹ ರೆಡ್ಡಿ, ದೊಡ್ಡತೋಗೂರು ಗ್ರಾಮ ಪಂಚಾಯತ್ ಚುನಾವಣೆಗೆ ಜ್ಯೋತಿ ಆರ್, ಮೇರಿ ಚೌರಮ್ಮ, ಶಮೀರ್ ಪಾಷ ಸ್ಪರ್ಧಿಸಿದ್ದರು. ಜ್ಯೋತಿ ಅವರು 308 ಮತಗಳನ್ನು ಪಡೆದರೆ ಅವರ ಎದುರಾಳಿ ಉಷಾ ಎಂಬವರು 315 ಮತ ಪಡೆದಿದ್ದಾರೆ. ಮೇರಿ ಚೌರಮ್ಮ ಅವರು 304 ಮತ ಪಡೆದರೆ ಅವರ ಎದುರಾಳಿ 306 ಮತ ಪಡೆದಿದ್ದಾರೆ. ಮತ್ತು ಗ್ರಾಮ ಪಂಚಾಯತ್ನಲ್ಲಿ ಸ್ಪರ್ದಿಸಿದ್ದ ಶಮೀರ್ ಪಾಷ 226 ಮತ, ಅವರ ಎದುರಾಳಿ 228 ಮತ ಪಡೆದಿದ್ದಾರೆ. ಇವೆರಲ್ಲರ ಸೋಲಿನ ಅಂತರ ಕೇವಲ ಒಂದೆರಡು ಮತ ಆಗಿವೆ. ಆದರೆ ಫಲಿತಾಂಶ ಪ್ರಕಟಗೊಂಡ ತಕ್ಷಣ ಮರು ಮತ ಎಣಿಕೆ ನಡೆಸುವಂತೆ ಕೋರಿ ಅರ್ಜಿ ಸಲ್ಲಿಸಿದ್ದರೂ ಚುನಾವಣಾಧಿಕಾರಿ ಯಾವುದೇ ಪ್ರತಿಕ್ರಿಯೆ ನೀಡುತ್ತಿಲ್ಲ.

ಮತ ಎಣಿಕೆ ಸಂದರ್ಭದಲ್ಲಿ ತಪ್ಪು ಸಂಭವಿಸಿದ್ದು, ಅಕ್ರಮ ನಡೆದಿರುವ ಶಂಕೆ ಇದೆ. ಗ್ರಾಫ್ ಸೀಟಿನಲ್ಲಿ ಮೋಸ ಮಾಡಿರುವ ಸಾಧ್ಯತೆ ಇದೆ. ಆದ್ದರಿಂದ ಈ ಗ್ರಾಮ ಪಂಚಾಯತ್ ನಲ್ಲಿ ಮರು ಎಣಿಕೆ ನಡೆಸಬೇಕು ಎಂದು ಅವರು ಒತ್ತಾಯಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT