ಪತ್ರಿಕಾಗೋಷ್ಠಿ ನಡೆಸಿದ ಶಮೀರ್ ಪಾಷ, ನರಸಿಂಹ ರೆಡ್ಡಿ ಮತ್ತು ಜ್ಯೋತಿ 
ಜಿಲ್ಲಾ ಸುದ್ದಿ

ಪಂಚಾಯತ್ ಚುನಾವಣೆ ಮತ ಎಣಿಕೆಯಲ್ಲಿ ಅಕ್ರಮ: ಸೋತ ಅಭ್ಯರ್ಥಿಗಳ ಆರೋಪ

ಬೆಂಗಳೂರು ದಕ್ಷಿಣ ತಾಲೂಕು ಬೇಗೂರು ಹೋಬಳಿ ದೊಡ್ಡತೋಗೂರು ಗ್ರಾಮ ಪಂಚಾಯತ್ ಗೆ ನಡೆದ ಚುನಾವಣೆಯ ಮತ ಎಣಿಕೆಯಲ್ಲಿ ಸಾಕಷ್ಟು...

ಬೆಂಗಳೂರು: ಬೆಂಗಳೂರು ದಕ್ಷಿಣ ತಾಲೂಕು ಬೇಗೂರು ಹೋಬಳಿ ದೊಡ್ಡತೋಗೂರು ಗ್ರಾಮ ಪಂಚಾಯತ್ ಗೆ ನಡೆದ ಚುನಾವಣೆಯ ಮತ ಎಣಿಕೆಯಲ್ಲಿ ಸಾಕಷ್ಟು ಅಕ್ರಮ ನಡೆದಿದ್ದು, ಒಂದೆರಡು ಮತಗಳಲ್ಲಿ ನಾವು ಸೋತಿದ್ದೇವೆ. ಆದರೂ ಮರು ಮತ ಎಣಿಕೆ ನಡೆಸುವಂತೆ ಕೋರಿದ್ದರೂ ಚುನಾವಣಾಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಚುನಾವಣೆಯಲ್ಲಿ ಸೋತ ಅಭ್ಯರ್ಥಿಗಳು ಆರೋಪಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸೋತ ಅಭ್ಯರ್ಥಿ ಜ್ಯೋತಿ ಅವರ ಪತಿ ಕೆ.ನರಸಿಂಹ ರೆಡ್ಡಿ, ದೊಡ್ಡತೋಗೂರು ಗ್ರಾಮ ಪಂಚಾಯತ್ ಚುನಾವಣೆಗೆ ಜ್ಯೋತಿ ಆರ್, ಮೇರಿ ಚೌರಮ್ಮ, ಶಮೀರ್ ಪಾಷ ಸ್ಪರ್ಧಿಸಿದ್ದರು. ಜ್ಯೋತಿ ಅವರು 308 ಮತಗಳನ್ನು ಪಡೆದರೆ ಅವರ ಎದುರಾಳಿ ಉಷಾ ಎಂಬವರು 315 ಮತ ಪಡೆದಿದ್ದಾರೆ. ಮೇರಿ ಚೌರಮ್ಮ ಅವರು 304 ಮತ ಪಡೆದರೆ ಅವರ ಎದುರಾಳಿ 306 ಮತ ಪಡೆದಿದ್ದಾರೆ. ಮತ್ತು ಗ್ರಾಮ ಪಂಚಾಯತ್ನಲ್ಲಿ ಸ್ಪರ್ದಿಸಿದ್ದ ಶಮೀರ್ ಪಾಷ 226 ಮತ, ಅವರ ಎದುರಾಳಿ 228 ಮತ ಪಡೆದಿದ್ದಾರೆ. ಇವೆರಲ್ಲರ ಸೋಲಿನ ಅಂತರ ಕೇವಲ ಒಂದೆರಡು ಮತ ಆಗಿವೆ. ಆದರೆ ಫಲಿತಾಂಶ ಪ್ರಕಟಗೊಂಡ ತಕ್ಷಣ ಮರು ಮತ ಎಣಿಕೆ ನಡೆಸುವಂತೆ ಕೋರಿ ಅರ್ಜಿ ಸಲ್ಲಿಸಿದ್ದರೂ ಚುನಾವಣಾಧಿಕಾರಿ ಯಾವುದೇ ಪ್ರತಿಕ್ರಿಯೆ ನೀಡುತ್ತಿಲ್ಲ.

ಮತ ಎಣಿಕೆ ಸಂದರ್ಭದಲ್ಲಿ ತಪ್ಪು ಸಂಭವಿಸಿದ್ದು, ಅಕ್ರಮ ನಡೆದಿರುವ ಶಂಕೆ ಇದೆ. ಗ್ರಾಫ್ ಸೀಟಿನಲ್ಲಿ ಮೋಸ ಮಾಡಿರುವ ಸಾಧ್ಯತೆ ಇದೆ. ಆದ್ದರಿಂದ ಈ ಗ್ರಾಮ ಪಂಚಾಯತ್ ನಲ್ಲಿ ಮರು ಎಣಿಕೆ ನಡೆಸಬೇಕು ಎಂದು ಅವರು ಒತ್ತಾಯಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT