ಗುಂಡು ಹಾರಿಸಿದ ಸ್ಥಳ ಪರಿಶೀಲನೆ ಮಾಡುತ್ತಿರುವ ಹಿರಿಯ ಪೊಲೀಸ್ ಅಧಿಕಾರಿಗಳು 
ಜಿಲ್ಲಾ ಸುದ್ದಿ

ಕಲಾಸಿಪಾಳ್ಯ ಫೈರಿಂಗ್: ದರೋಡೆಕೋರನ ಮೇಲೆ ಪೊಲೀಸರ ಗುಂಡೇಟು

ಕೊಲೆ, ಸುಲಿಗೆ, ದರೋಡೆ ಸೇರಿದಂತೆ 15ಕ್ಕೂ ಹೆಚ್ಚು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪಿಯೊಬ್ಬನನ್ನು ಬಂಧಿಸಲು ಹೋದಾಗ, ಆತ ಪೊಲೀಸರ ಮೇಲೆಯೇ ಪ್ರತಿದಾಳಿ ನಡೆಸಿದ್ದು, ಆತನನ್ನು ಬಂಧಿಸುವಲ್ಲಿ ಕಲಾಸಿಪಾಳ್ಯ ಪೊಲೀಸರು ಯಶಸ್ವಿಯಾಗಿದ್ದಾರೆ...

ಬೆಂಗಳೂರು: ಕೊಲೆ, ಸುಲಿಗೆ, ದರೋಡೆ ಸೇರಿದಂತೆ 15ಕ್ಕೂ ಹೆಚ್ಚು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪಿಯೊಬ್ಬನನ್ನು ಬಂಧಿಸಲು ಹೋದಾಗ, ಆತ ಪೊಲೀಸರ ಮೇಲೆಯೇ ಪ್ರತಿದಾಳಿ ನಡೆಸಿದ್ದು, ಆತನನ್ನು ಬಂಧಿಸುವಲ್ಲಿ ಕಲಾಸಿಪಾಳ್ಯ ಪೊಲೀಸರು ಯಶಸ್ವಿಯಾಗಿದ್ದಾರೆ.

ಭಾನುವಾರ ರಾತ್ರಿ 10.15ರ ವೇಳೆಗೆ ಈ ಘಟನೆ ನಡೆದಿದೆ. ಆರೋಪಿ ಸಲೀಂನ ಎಡಗಾಲಿಗೆ ಪೊಲೀಸರು ಗುಂಡು ಹಾರಿಸಿದ್ದು, ಸದ್ಯ ಆತ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಹಲವು ಪ್ರಕರಣಗಳಲ್ಲಿ ಬೇಕಾಗಿದ್ದ ಸಲೀಂ ವಿರುದ್ಧ ನ್ಯಾಯಾಲಯವು ಬಂಧನ ವಾರಂಟ್ ಜಾರಿ ಮಾಡಿತ್ತು. ಭಾನುವಾರ ರಾತ್ರಿ ಸಲೀಂ ಕಲಾಸಿಪಾಳ್ಯದ ನ್ಯೂ ಎಕ್ಸ್ ಟೆನ್ಶನ್ ನ 4ನೇ ಕ್ರಾಸ್‍ನಲ್ಲಿದ್ದಾನೆ ಎಂಬ ಖಚಿತ ಮಾಹಿತಿಯ ಮೇರೆಗೆ ಕಲಾಸಿಪಾಳ್ಯ ಠಾಣೆಯ ಕಾನ್‍ಸ್ಟೇಬಲ್ ರೆಹಮಾನ್ ಹಾಗೂ ಅಪರಾಧ ದಳದ ಇಬ್ಬರು ಪೆÇಲೀಸರು ಅಲ್ಲಿಗೆ ತೆರಳಿದ್ದರು.

ಪೊಲೀಸರು ಆಗಮಿಸಿದ ವಿಚಾರ ಗೊತ್ತಾದೊಡನೆ ಆರೋಪಿ ಸಲೀಂ ಶರಣಾಗಲು ನಿರಾಕರಿಸಿ, ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ್ದಾನೆ. ತಕ್ಷಣ ರೆಹಮಾನ್ ಅವರು ಕಲಾಸಿಪಾಳ್ಯ ಠಾಣೆಯ ಇನ್ಸ್ ಪೆಕ್ಟರ್ ಅನಿಲ್ ಕುಮಾರ್ ಅವರಿಗೆ ಕರೆ ಮಾಡಿ ವಿಚಾರ ತಿಳಿಸಿದ್ದಾರೆ. ಸ್ಥಳಕ್ಕೆ ಆಗಮಿಸಿದ ಅನಿಲ್‍ಕುಮಾರ್ ಅವರು ಆರೋಪಿಯನ್ನು ಬಂಧಿಸಲು ಮುಂದಾದಾಗ ಸಲೀಂ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾನೆ. ಪರಿಣಾಮ ಕಾನ್‍ಸ್ಟೇಬಲ್ ರೆಹಮಾನ್ ಗಾಯಗೊಂಡಿದ್ದಾರೆ. ಕೂಡಲೇ ಅನಿಲ್‍ಕುಮಾರ್ ಅವರು ತಮ್ಮ ಸರ್ವೀಸ್ ರಿವಾಲ್ವರ್‍ನಿಂದ ಆರೋಪಿಯ ಎಡಗಾಲಿಗೆ ಗುಂಡು ಹಾರಿಸಿದ್ದಾರೆ. ಸಲೀಂನನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಪತ್ರೆಯಿಂದ ಬಿಡುಗಡೆಗೊಂಡ ಬಳಿಕ ಆತನನ್ನು ಬಂಧಿಸಿ ಹೆಚ್ಚಿನ ವಿಚಾರಣೆ ನಡೆಸಲಾಗುವುದು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT