ಶ್ರೀಅನಂತೇಶ್ವರ ದೇವಾಲಯ 
ಜಿಲ್ಲಾ ಸುದ್ದಿ

ವಿರೋಧದ ಮಧ್ಯೆಯೂ ಜೀರ್ಣೋದ್ಧಾರ ಆರಂಭ

ಇಲ್ಲಿನ ಅಷ್ಟ ಮಠಾಧೀಶರ ನಡುವೆ ಭಿನ್ನಮತಕ್ಕೆ ಕಾರಣವಾಗಿರುವ ಉಡುಪಿಯ ರಥಬೀದಿಯಲ್ಲಿರುವ ಶ್ರೀಅನಂತೇಶ್ವರ ದೇವಾಲಯದ ಜೀರ್ಣೋದ್ಧಾರ ಕಾಮಗಾರಿ ಸೋಮವಾರ ಬಿಗಿ ಪೊಲೀಸ್ ಬಂದೋಬಸ್ತ್‍ನಲ್ಲಿ ಆರಂಭವಾಗಿದೆ...

ಉಡುಪಿ: ಇಲ್ಲಿನ ಅಷ್ಟ ಮಠಾಧೀಶರ ನಡುವೆ ಭಿನ್ನಮತಕ್ಕೆ ಕಾರಣವಾಗಿರುವ ಉಡುಪಿಯ ರಥಬೀದಿಯಲ್ಲಿರುವ ಶ್ರೀಅನಂತೇಶ್ವರ ದೇವಾಲಯದ ಜೀರ್ಣೋದ್ಧಾರ ಕಾಮಗಾರಿ ಸೋಮವಾರ ಬಿಗಿ ಪೊಲೀಸ್ ಬಂದೋಬಸ್ತ್ ನಲ್ಲಿ ಆರಂಭವಾಗಿದೆ.

ಪೇಜಾವರ ಮಠದ ಶ್ರೀವಿಶ್ವೇಶ ತೀರ್ಥರು ಮತ್ತು ಇತರ ಮಠಾಧೀಶರ ವಿರೋಧದ ನಡುವೆಯೂ ಪುತ್ತಿಗೆ ಮಠದ ಶ್ರೀ ಸುಗಣೇಂದ್ರ ತೀರ್ಥರು ದೇವಾಲಯದ ಜೀರ್ಣೋದ್ಧಾರಕ್ಕೆ
ಚಾಲನೆ ನೀಡಿದ್ದಾರೆ. ಮುಜರಾಯಿ ಇಲಾಖೆಗೆ ಸೇರಿರುವ ಈ ದೇವಾಲಯದ ಮೇಲ್ಮಾಡು ನಾಲ್ಕೈದು ವರ್ಷಗಳಿಂದ ಸೋರುತ್ತಿದ್ದು, ಅದನ್ನೀಗ ಸುಮಾರು ರು.3 ಕೋಟಿ ವೆಚ್ಚದಲ್ಲಿ ದುರಸ್ತಿಗೊಳಿಸಲು ಪುತ್ತಿಗೆ ಶ್ರೀಗಳು ಮುಜರಾಯಿ ಇಲಾಖೆಯ ಅನುಮತಿ ಪಡೆದಿದ್ದಾರೆ.

ಈ ದೇವಾಲಯವು ಉಡುಪಿಯ ಕಷ್ಣಮಠ ಮತ್ತು ಅಷ್ಟಮಠಗಳ ಸ್ಥಾಪಕರಾದ ಆಚಾರ್ಯ ಮಧ್ವರ ಸನ್ನಿಧಿ ಇರುವ ಸ್ಥಳವಾಗಿದ್ದು, ಈ ದೇವಾಲಯದ ಮೇಲೆ ಎಲ್ಲ ಅಷ್ಟ ಮಠಗಳಿಗೆ ಹಕ್ಕಿದೆ. ಆದ್ದರಿಂದ ಪುತ್ತಿಗೆ ಮಠಾಧೀಶರು ತಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಜೀರ್ಣೋದಾಟಛಿರಕ್ಕೆ ಹೊರಟಿದ್ದಾರೆ ಎನ್ನುವುದು ಇತರ ಮಠಾಧೀಶರ ಅಸಮಾಧಾನ.

ಮೊದಲು ಅಸಮಾಧಾನವನ್ನು ಬಹಿರಂಗವಾಗಿ ವ್ಯಕ್ತಪಡಿಸಿದವರು ಶಿರೂರು ಮಠದ ಶ್ರೀಲಕ್ಷ್ಮೀವರ ತೀರ್ಥರು. ನಂತರ ಪೇಜಾವರ ಶ್ರೀಗಳ ನೇತೃತ್ವದಲ್ಲಿ, ಪುತ್ತಿಗೆ ಶ್ರೀಗಳೊಂದಿಗೆ ಅಷ್ಟ ಮಠಾಧೀಶರ ಸುದೀರ್ಘ ಸಭೆ ನಡೆಯಿತು. ಸಭೆಯಲ್ಲಿ, ಈಗ ಮಳೆಗಾಲ, ಜೀರ್ಣೋದ್ಧಾರಕ್ಕೆ ಸಕಾಲವಲ್ಲ. ಆದ್ದರಿಂದ ಸದ್ಯ 6 ತಿಂಗಳು ಜೀರ್ಣೋದಾಟಛಿರ ಬೇಡ ಎಂದು ಪುತ್ತಿಗೆ ಶ್ರೀಗಳ ಮನವೂಲಿಸಲು ಯತ್ನಿಸಿದರು. ಆದರೆ, ಪುತ್ತಿಗೆ ಶ್ರೀಗಳು ತಮ್ಮ ಪಟ್ಟು ಸಡಿಲಿಸಲಿಲ್ಲ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

BBk 12: ಟಾಸ್ಕ್‌ನೇ ಮರೆತುಬಿಟ್ರಾ ಅಸುರಾಧಿಪತಿ ಕಾಕ್ರೋಚ್? ಬಾಗಿಲನ್ನು ಓಪನ್ ಮಾಡಿ ಎಂದ ಕಿಚ್ಚ ಸುದೀಪ್!

SCROLL FOR NEXT