ಬಿಬಿಎಂಪಿ ಆಡಳಿತಾಧಿಕಾರಿ ಟಿ.ಎಂ. ವಿಜಯಭಾಸ್ಕರ್ 
ಜಿಲ್ಲಾ ಸುದ್ದಿ

ಸಿಗ್ನಲ್ ಫ್ರೀ ಕಾರಿಡಾರ್‍ಗೆ 25ರೊಳಗೆ ಟೆಂಡರ್: ಟಿ.ಎಂ. ವಿಜಯಭಾಸ್ಕರ್

ನಗರದಲ್ಲಿ 6 ಪಥಗಳ 3 ಸಿಗ್ನಲ್ ಫ್ರೀ ಕಾರಿಡಾರ್ ರಸ್ತೆ ನಿರ್ಮಾಣಕ್ಕೆ ಸಾಧ್ಯತಾ ವರದಿ (ಡಿಎಫ್ಆರ್) ಸಿದ್ಧಪಡಿಸಲು ಜೂ.25ರೊಳಗೆ ಟೆಂಡರ್ ಕರೆಯಲು ಬಿಬಿಎಂಪಿ ಆಡಳಿತಾಧಿಕಾರಿ ಟಿ.ಎಂ. ವಿಜಯಭಾಸ್ಕರ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ...

ಬೆಂಗಳೂರು: ನಗರದಲ್ಲಿ 6 ಪಥಗಳ 3 ಸಿಗ್ನಲ್ ಫ್ರೀ ಕಾರಿಡಾರ್ ರಸ್ತೆ ನಿರ್ಮಾಣಕ್ಕೆ ಸಾಧ್ಯತಾ ವರದಿ (ಡಿಎಫ್ಆರ್) ಸಿದ್ಧಪಡಿಸಲು ಜೂ.25ರೊಳಗೆ ಟೆಂಡರ್ ಕರೆಯಲು ಬಿಬಿಎಂಪಿ ಆಡಳಿತಾಧಿಕಾರಿ ಟಿ.ಎಂ. ವಿಜಯಭಾಸ್ಕರ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಬಿಬಿಎಂಪಿಯಲ್ಲಿ ಸೋಮವಾರ ನಡೆದ ಸಭೆಯಲ್ಲಿ ಶೀಘ್ರದಲ್ಲಿ ಡಿಎಫ್ಆರ್ ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಸೆಂಟ್ರಲ್ ಸಿಲ್ಕ್ ಬೋರ್ಡ್-ಹೆಬ್ಬಾಳದವರೆಗೆ 16ಕಿಮೀ ಉದ್ದದ ಉತ್ತರ-ದಕ್ಷಿಣ ಕಾರಿಡಾರ್, ಕೆ.ಆರ್.ಪುರ-ಗೊರಗುಂಟೆಪಾಳ್ಯವರೆಗೆ 21 ಕಿಮೀ ಉದ್ದದ ಪೂರ್ವ ಪಶ್ಚಿಮ ಕಾರಿಡಾರ್, ಜ್ಞಾನಭಾರತಿ-ವೈಟ್ ಫೀಲ್ಡ್ ವರೆಗೆ ಪೂರ್ವ-ಪಶ್ಚಿಮ ಕಾರಿಡಾರ್ ನಿರ್ಮಿಸಲು ಸರ್ಕಾರ ನಿರ್ಧರಿಸಿತ್ತು. ರು.18,500 ಕೋಟಿ ಅಂದಾಜು ವೆಚ್ಚದಲ್ಲಿ ಕಾರಿಡಾರ್ ನಿರ್ಮಾಣವಾಗಲಿದ್ದು, ರು.10 ಸಾವಿರ ಕೋಟಿ ನಿರ್ಮಾಣ ಕಾರ್ಯಗಳಿಗೆ ವೆಚ್ಚವಾಗಲಿದೆ ಸುಮಾರು ರು.25 ಕೋಟಿ ಡಿಎಫ್ಆರ್ ಗೆ ವೆಚ್ಚವಾಗಲಿದ್ದು, ನಗರೋತ್ಥಾನ ಯೋಜನೆಯಿ ಈ ಹಣವನ್ನು ಬಳಸಿ ಡಿಎಫ್ಆರ್ ಸಿದ್ಧಪಡಿಸಲಾಗುವುದು.

ಖಾಸಗಿ ಸಂಸ್ಥೆಗಳು ಕಾರಿಡಾರ್ ನಿರ್ಮಿಸುತ್ತಿದ್ದು, ಮೂರು ಕಾರಿಡಾರ್‍ಗಳಲ್ಲಿ ಟೋಲ್ ನಿರ್ಮಿಸಿ ಶುಲ್ಕ ವಿಧಿಸಲಾಗುತ್ತದೆ. ಶೀಘ್ರವಾಗಿ ವರದಿ ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸಬೇಕು ಎಂದು ಸಭೆಯಲ್ಲಿ ಸೂಚಿಸಲಾಗಿದೆ. ಈ ಹಿಂದೆ ಕಾರಿಡಾರ್ ಯೋಜನೆ ಘೋಷಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಅಂತಾರಾಷ್ಟ್ರೀಯ ಮಟ್ಟದ ತಂತ್ರಜ್ಞಾನವನ್ನು ಬಳಸಿಕೊಳ್ಳಲು ಜಾಗತಿಕ ಮಟ್ಟದ ಟೆಂಡರ್ ಕರೆಯಲಾಗುವುದು ಎಂದು ತಿಳಿಸಿದ್ದರು. ಟೋಲ್ ಆಧಾರದಲ್ಲಿ ಕಾರಿಡಾರ್ ನಿರ್ವಹಣೆಯಾಗಲಿದ್ದು, ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಅಥವಾ `ಡಿಬೂಟ್' ಮಾದರಿಯಲ್ಲಿ ರಸ್ತೆ ಕಾಮಗಾರಿ ಮಾಡಲಾಗುತ್ತದೆ ಎಂದು ಪ್ರಕಟಿಸಲಾಗಿತ್ತು.

ಕಡಿಮೆ ಭೂಸ್ವಾಧೀನಕ್ಕೆ ಸೂಚನೆ: ಸಭೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯ್ ಭಾಸ್ಕರ್, ಕಾರಿಡಾರ್ ನಿರ್ಮಿಸಲು ಸುಮಾರು 100 ಎಕರೆ ಭೂಸ್ವಾಧೀನ ಅಗತ್ಯವಿದೆ ಎಂದು ಪ್ರಾಥಮಿಕ ಅಧ್ಯಯನದ ಮೂಲಕ ತಿಳಿದುಬಂದಿದೆ. ಆದರೆ ಆದಷ್ಟು ಕಡಿಮೆ ಭೂಸ್ವಾಧೀನ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ

Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ, ಗ್ರಾಹಕರ ಜೇಬಿಗೆ 'ಸಿಹಿ ಕಹಿ'!

2nd Test: ಬೌಂಡರಿ ಲೈನ್ ಬಳಿ ದುರ್ವರ್ತನೆ ತೋರಿದ್ದ ಲಂಕಾ ಆಟಗಾರ Prabath Jayasuriyaಗೆ ಬರೆ ಹಾಕಿದ ICC!