ಕರ್ನಾಟಕ ಹೈ ಕೋರ್ಟ್ 
ಜಿಲ್ಲಾ ಸುದ್ದಿ

ಎಲ್‍ಎಸ್‍ಡಿ ಮಕ್ಕಳಿಗೆ ಉಚಿತ ಚಿಕಿತ್ಸೆ ನೀಡಿ: ಸರ್ಕಾರಕ್ಕೆ ಸೂಚನೆ

ಮಾರಣಾಂತಿಕ `ಲೈಸೊಸೋಮಲ್ ಸ್ಟೊರೇಜ್ ಡಿಸಾರ್ಡರ್' (ಎಲ್‍ಎಸ್‍ಡಿ) ಕಾಯಿಲೆಯಿಂದ ಬಳಲುತ್ತಿರುವ ಮಕ್ಕಳಿಗೆ ಉಚಿತವಾಗಿ ವೈದ್ಯಕೀಯ ಚಿಕಿತ್ಸೆ ಒದಗಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ...

ಬೆಂಗಳೂರು: ಮಾರಣಾಂತಿಕ `ಲೈಸೊಸೋಮಲ್ ಸ್ಟೊರೇಜ್ ಡಿಸಾರ್ಡರ್' (ಎಲ್‍ಎಸ್‍ಡಿ) ಕಾಯಿಲೆಯಿಂದ ಬಳಲುತ್ತಿರುವ ಮಕ್ಕಳಿಗೆ ಉಚಿತವಾಗಿ ವೈದ್ಯಕೀಯ ಚಿಕಿತ್ಸೆ ಒದಗಿಸುವಂತೆ
ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ.

ನಗರದಲ್ಲಿ 40ಕ್ಕೂ ಹೆಚ್ಚು ಮಕ್ಕಳು ಈ ಮಾರಣಾಂತಿಕ ರೋಗದಿಂದ ಬಳಲುತ್ತಿದ್ದು, ಅವರಿಗೆ ಉಚಿತವಾಗಿ ವೈದ್ಯಕೀಯ ಸೌಲಭ್ಯ ಒದಿಗಸುವಂತೆ ಕೋರಿ ಭಾರತೀಯ ಲೈಸೊಸೋಮಲ್ ಸ್ಟೋರೇಜ್ ಡಿಸಾರ್ಡರ್ ಸಂಸ್ಥೆ ಹೈಕೋರ್ಟ್‍ನಲ್ಲಿ ಸಾರ್ವಜಿನಿಕ ಹಿತಾಸಕ್ತಿ ಅರ್ಜಿ ದಾಖಲಿಸಿತ್ತು. ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾ.ಎಸ್.ಕೆ.ಮುಖರ್ಜಿ ಮತ್ತು ನ್ಯಾ.ರಾಮಮೋಹನ ರೆಡ್ಡಿ ಅವರಿದ್ದ ವಿಭಾಗೀಯ ಪೀಠ ಈ ಆದೇಶ ನೀಡಿದೆ.

ಲೈಸೊಸೋಮಲ್ ಸ್ಟೋರೇಜ್ ಡಿಸಾರ್ಡರ್ ಅನುವಂಶಿಕವಾಗಿ ಮಕ್ಕಳಿಗೆ ಬರುವ ರೋಗವಾಗಿದೆ. 14 ವರ್ಷದ ಒಳಗಿನ ಮಕ್ಕಳು ಮಾತ್ರ ಈ ರೋಗಕ್ಕೆ ತುತ್ತಾಗಲಿದ್ದು, ಅಂತಹ ಮಕ್ಕಳು ಹೆಚ್ಚು ದಿನ ಜೀವಿಸುವುದು ಅಸಾಧ್ಯದ ಸಂಗತಿ. ಏತನ್ಮಧ್ಯೆ ಈ ರೋಗದ ಚಿಕಿತ್ಸೆ ವೆಚ್ಚ ಕೂಡ ದುಬಾರಿಯಾಗಿದ್ದು, ಇದರಿಂದ ಬಡ ಮಕ್ಕಳು ಚಿಕಿತ್ಸೆ ಪಡೆಯಲು ಸಾಧ್ಯವಾಗದೆ ಸಾವನ್ನಪ್ಪುತ್ತಿದ್ದಾರೆ. ಅಲ್ಲದೇ ಈಚೆಗೆ ದೆಹಲಿ ಹೈಕೋರ್ಟ್ ಸಹ ಈ ರೋಗಕ್ಕೆ ತುತ್ತಾದ ಮಕ್ಕಳಿಗೆ ಸರ್ಕಾರವೇ ತನ್ನ ವೆಚ್ಚದಲ್ಲಿ ಚಿಕಿತ್ಸೆ ನೀಡಬೇಕು ಎಂದು ಆದೇಶಿಸಿದೆ.

ಈ ಹಿನ್ನೆಲೆಯಲ್ಲಿ ದೆಹಲಿ ಹೈಕೋರ್ಟ್ ಆದೇಶವನ್ನು ರಾಜ್ಯದಲ್ಲಿ ಅನುಷ್ಟಾನ ಮಾಡಬೇಕು. ನಗರದ ಇಂದಿರಾಗಾಂಧಿ ಮಕ್ಕಳ ಆರೋಗ್ಯ ಸಂಸ್ಥೆಯಲ್ಲಿ ಈ ರೋಗದಿಂದ ನರಳುತ್ತಿರುವ ಸುಮಾರು 40 ಮಕ್ಕಳಿದ್ದು, ರೋಗದಿಂದ ಗುಣಮುಖರಾಗಲು ಅಗತ್ಯವಾದ ಎಲ್ಲಾ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಉಚಿತವಾಗಿ ಕಲ್ಪಿಸಬೇಕು. ಈ ಸಂಬಂಧ ಸರ್ಕಾರಕ್ಕೆ ಆದೇಶಿಸಬೇಕು ಎಂದು ಅರ್ಜಿದಾರರು ಕೋರಿದ್ದರು. ವಿಚಾರಣೆ ನಡೆಸಿದ ವಿಭಾಗೀಯ ಪೀಠ, ದೆಹಲಿ ಆದೇಶದಂತೆ ರಾಜ್ಯದಲ್ಲಿ ಈ ರೋಗಕ್ಕೆ ತುತ್ತಾಗಿರುವ ಮಕ್ಕಳಿಗೆ ಅಗತ್ಯವಾದ ಎಲ್ಲಾ ಚಿಕಿತ್ಸೆ ನೀಡಬೇಕು ಎಂದು ಆದೇಶಿಸಿ ಅರ್ಜಿ ಇತ್ಯರ್ಥಪಡಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್