ರವಿಕೃಷ್ಣಾ ರೆಡ್ಡಿ 
ಜಿಲ್ಲಾ ಸುದ್ದಿ

ಬಿಬಿಎಂಪಿ ವ್ಯಾಪ್ತಿಯಲ್ಲಿ ಕಳಪೆ ಕಾಮಗಾರಿ: ತನಿಖೆಗೆ ಆಪ್ ಆಗ್ರಹ

ಕಳೆದ ಎರಡು ಎರಡು ವರ್ಷದಿಂದ ಬಿಬಿಎಂಪಿ ವ್ಯಾಪ್ತಿಯಲ್ಲಿ ನಡೆದಿರುವ ಹಲವು ಕಾಮಗಾರಿಗಳು ಕಳಪೆ ಗುಣಮಟ್ಟದಿಂದ ಕೂಡಿದ್ದು...

ಬೆಂಗಳೂರು: ಕಳೆದ ಎರಡು ಎರಡು ವರ್ಷದಿಂದ ಬಿಬಿಎಂಪಿ ವ್ಯಾಪ್ತಿಯಲ್ಲಿ ನಡೆದಿರುವ ಹಲವು ಕಾಮಗಾರಿಗಳು ಕಳಪೆ ಗುಣಮಟ್ಟದಿಂದ ಕೂಡಿದ್ದು, ಇದರ ಬಗ್ಗೆ ಸೂಕ್ತ ತನಿಖೆ ನಡೆಸಬೇಕು ಎಂದು ಆಮ್ ಆದ್ಮಿ ಪಕ್ಷದ ಅಧ್ಯಕ್ಷ ರವಿಕೃಷ್ಣಾ ರೆಡ್ಡಿ ಆಗ್ರಹಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಬಿಎಂಪಿ ವ್ಯಾಪ್ತಿಯಲ್ಲಿ ನಡೆದಿರುವ ಬಹುತೇಕ ಕಾಮಗಾರಿಗಳು ಕಳೆಪೆಯಾಗಿದ್ದು, ಕಾರ್ಪೋರೇಟರ್ ಗಳು, ಗುತ್ತಿಗೆದಾರರು ಮತ್ತು ಎಂಜಿನಿಯರ್ ಗಳ ಒಳ ಒಪ್ಪಂದದಲ್ಲಿ ಈ ಕಳೆಪೆ ಮಟ್ಟದ ಕಾಮಗಾರಿಗಳು ನಡೆದಿವೆ ಎಂದು ಆರೋಪಿಸಿದ್ದಾರೆ.

10 ಲಕ್ಷಕ್ಕಿಂತ ಹೆಚ್ಚು ಮೊತ್ತದ ಕಾಮಗಾರಿ ನಡೆಸುವಾಗ ನಿಯಮಗಳನ್ನು ಉಲ್ಲಂಘನೆಯಾಗಿದ್ದು, ಪಾರದರ್ಶಕತೆ ಮತ್ತು ಗುಣಮಟ್ಟ ಕಾಪಾಡದೆ, ಮನಬಂದಂತೆ ಕಾಮಗಾರಿ ನಡೆಸಿ ಬೊಕ್ಕಸಕ್ಕೆ ಸಾವಿರಾರು ಕೋಟಿ ರೂ. ನಷ್ಟಉಂಟು ಮಾಡಿದ್ದಾರೆ. ಈ ಹಿನ್ನಲೆಯಲ್ಲಿ ಸಮಗ್ರ ತನಿಖೆ ನಡೆಸಲು ಸ್ವತಂತ್ರ ಆಯೋಗ ರಚನೆ ಮಾಡಬೇಕು ಎಂದ ಅವರು, ಬಿಬಿಎಂಪಿ ಆಡಳಿತಧಿಕಾರಿ ವಿಜಯ್ಭಾಸ್ಕರ್ ಹಾಗೂ ಆಯುಕ್ತ ಕುಮಾರ್ ನಾಯಕ್ ಅವರುಗಳು ಈ ಬಗ್ಗೆ ನಿವೃತ್ತ ಸರ್ಕಾರಿ ಎಂಜಿನಿಯರ್ಗಳು ಮತ್ತು ನಾಗರೀಕ ಸಮಾಜದ ಪ್ರತಿನಿಧಿಗಳನ್ನು ಒಳಗೊಂಡ ಆಯೋಗ ರಚನೆ ಮಾಡಿ ಸತ್ಯಾಂಶ ಬಯಲಿಗೆಳೆಯಬೇಕು ಎಂದು ಒತ್ತಾಯಿಸಿದ್ದಾರೆ.

ಜೋಗುಪಾಳ್ಯ ಶಾಲೆ, ನೀಲಸಂದ್ರ, ಗಂಗಾನಗರ, ಹುಳಿಮಾವು, ಶಂಕರಮಠ ಉದ್ಯಾನವನ ನವೀಕರಣ, ಸೇರಿದಂತೆ ಬಹುತೇಕ ಕಡೆ ಕಾಮಗಾರಿಗಳಲ್ಲಿ ಹಗರಣ ನಡೆದಿದೆ. ನಮ್ಮ ಪಕ್ಷದ ಕಾರ್ಯಕರ್ತರು ಸ್ವಯಂಪ್ರೇರಿತರಾಗಿ ನಗರದ ಅನೇಕ ಕಡೆ ನಡೆಸಿರುವ ಪರಿಶೀಲನೆ ವೇಳೆ ಇದು ಬೆಳಕಿಗೆ ಬಂದಿದೆ. 30, 4 , 2015ರ ವರೆಗಿನ ಎಲ್ಲಾ ಬಾಕಿ ಇರುವ ಕಾಮಗಾರಿಗಳ ವಿವರವನ್ನು ಬಿಬಿಎಂಪಿ ವೆಬ್ಸೈಟಿನಲ್ಲಿ ಪ್ರಕಟಿಸುವಂತೆ ಬಿಬಿಎಂಪಿ ಆಡಳಿತಧಿಕಾರಿ ವಿಜಯ್ಭಾಸ್ಕರ್ ಕೇಳಿಕೊಂಡಿದ್ದರು.

ಈ ಹಿನ್ನಲೆಯಲ್ಲಿ ನಾವು ನಗರದ ನಾನಾ ಭಾಗಗಳಲ್ಲಿ ನಡೆದಿರುವ ಆಕ್ರಮ ಕಾಮಗಾರಿಯನ್ನು ಬಯಲು ಮಾಡಿದ್ದೇವೆ. ಇದರ ಬಗ್ಗೆ ತಕ್ಷಣವೇ ಕ್ರಮ ಕೈಗೊಂಡು, ತಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

SCROLL FOR NEXT