ಪತ್ರಿಕಾಗೋಷ್ಠಿ ನಡೆಸಿದ ಆರ್ ಟಿಐ ಕಾರ್ಯಕರ್ತ ಉಮೇಶ್ 
ಜಿಲ್ಲಾ ಸುದ್ದಿ

ಶಿವಮೊಗ್ಗ: ಅಗ್ನಿಶಾಮಕ ಅಧಿಕಾರಿಯಿಂದ 9 ಲಕ್ಷ ರೂಪಾಯಿ ವಂಚನೆ; ಆರ್ ಟಿಐ ಕಾರ್ಯಕರ್ತ ಆರೋಪ

ಶಿವಮೊಗ್ಗದ ಪ್ರಾದೇಶಿಕ ಅಗ್ನಿಶಾಮಕ ಅಧಿಕಾರಿ ಕೆ. ಶಿವಕುಮಾರ್ ಅವರು ದೇವಸ್ಥಾನ ನಿರ್ಮಿಸುತ್ತೇನೆಂದು ಹೇಳಿ, ಸಾರ್ವಜನಿಕರಿಂದ ಲಕ್ಷಾಂತರ...

ಬೆಂಗಳೂರು: ಶಿವಮೊಗ್ಗದ ಪ್ರಾದೇಶಿಕ ಅಗ್ನಿಶಾಮಕ ಅಧಿಕಾರಿ ಕೆ. ಶಿವಕುಮಾರ್ ಅವರು ದೇವಸ್ಥಾನ ನಿರ್ಮಿಸುತ್ತೇನೆಂದು ಹೇಳಿ, ಸಾರ್ವಜನಿಕರಿಂದ ಲಕ್ಷಾಂತರ ರು. ಹಣ ಪಡೆದು ವಂಚಿಸಿರುವ ಹಿನ್ನಲೆಯಲ್ಲಿ ಅವರು ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆರ್ ಟಿಐ ಕಾರ್ಯಕರ್ತ ಉಮೇಶ್ ಆಗ್ರಹಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿವಮೊಗ್ಗದ ಮೆಲ್ಲಕಟ್ಟ ಎಂಬಲ್ಲಿ ಗಣೇಶ ದೇವಸ್ಥಾನ ನಿರ್ಮಿಸುತ್ತೇನೆ ಎಂದು ಹೇಳಿ ಅಧಿಕಾರಿ ಕೆ. ಶಿವಕುಮಾರ್ ಅವರು ಸುಮಾರು 9 ಲಕ್ಷ ಹಣ ಸಂಗ್ರಹಿಸಿ ಸಾರ್ವಜನಿಕರಿಗೆ ವಂಚಿಸಿದ್ದಾರೆ.  ಈ ಬಗ್ಗೆ ನಡೆದ ಪ್ರಾಥಮಿಕ ವಿಚಾರಣೆಯಲ್ಲಿ ಆರೋಪ ಸಾಬೀತಾಗಿದೆ ಎಂದು ತಿಳಿಸಿದ್ದಾರೆ.

ಕೆ. ಶಿವಕುಮಾರ್ ಅವರ ವಿರುದ್ಧದ ಆರೋಪಗಳ ಬಗ್ಗೆ ಇಲಾಖಾ ಜಂಟಿ ನಿರ್ದೇಶಕರು ತನಿಖೆಗೆ ಆದೇಶಿಸಿದ್ದರು. ತನಿಖೆಗೆ ಉಪ ನಿರ್ದೇಶಕ ಕೆ.ಯು. ರಮೇಶ್ ಅವರನ್ನು ನೇಮಿಸಲಾಗಿತ್ತು. ಕಳೆದ ವರ್ಷ ಜೂ.27ರಂದು ಅವರು ದೋಷಾರೋಪವನ್ನು ಸಲ್ಲಿಸಿದ್ದಾರೆ. ಆದರೆ ಇದುವರೆಗೂ ಆರೋಪಿಯ ವಿರುದ್ಧ ಕ್ರಮ ಕೈಗೊಂಡಿಲ್ಲ ಎಂದು ಅವರು ಆರೋಪಿಸಿದರು.

ತನಿಖೆ ವೇಳೆ ಆರು ಜನ ಸಾರ್ವಜನಿರು ಮತ್ತು 43 ಜನ ಇಲಾಖೆಯ ಸಿಬ್ಬಂದಿಗಳ ಹೇಳಿಕೆಗಳನ್ನು ದಾಖಲಿಸಿಕೊಳ್ಳಲಾಗುತ್ತದೆ. ಯಾವುದೇ ಒಬ್ಬ ಅಧಿಕಾರಿ ವಂತಿಗೆ ಸಂಗ್ರಹಿಸಬೇಕಾದರೆ ಸರ್ಕಾರದಿಂದ ಅನುಮತಿ ಪಡೆಯಬೇಕಾಗುತ್ತದೆ. ಆದರೆ ಇವರು ಮಾತ್ರ ಯಾವುದೇ ಅನುಮತಿ ಇಲ್ಲದೆ ನಿಯಮ ಉಲ್ಲಂಘಿಸಿ ದೇಣಿಗೆ ಪಡೆದಿದ್ದಾರೆ.

ತದ ನಂತರ ಶಿವಕುಮಾರ್ ಅವರ ಒತ್ತಡಕ್ಕೆ ಮಣಿದ ವಿಚಾರಣಾಧಿಕಾರಿಯೊಬ್ಬರು ಆರೋಪ ಸಾಬೀತಾಗಿಲ್ಲ ಎಂದು ವರದಿ ನೀಡಿರುತ್ತಾರೆ. ಈ ಹಿನ್ನಲೆಯಲ್ಲಿ, ವಿಚಾರಣಾಧಿಕಾರಿ ಆರೋಪಿಯ ಒತ್ತಡಕ್ಕೆ ಮಣಿದಿರುವುದರಿಂದ ಡಿಐಜಿ ಮಟ್ಟದ ಅಧಿಕಾರಿಯಿಂದ ಈ ಪ್ರಕರಣವನ್ನು ಮರು ವಿಚಾರಣೆ ನಡೆಸಬೇಕು ಎಂದು ಉಮೇಶ್ ಆಗ್ರಹಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

SCROLL FOR NEXT