ಪತ್ರಿಕಾಗೋಷ್ಠಿ ನಡೆಸಿದ ಆರ್ ಟಿಐ ಕಾರ್ಯಕರ್ತ ಉಮೇಶ್ 
ಜಿಲ್ಲಾ ಸುದ್ದಿ

ಶಿವಮೊಗ್ಗ: ಅಗ್ನಿಶಾಮಕ ಅಧಿಕಾರಿಯಿಂದ 9 ಲಕ್ಷ ರೂಪಾಯಿ ವಂಚನೆ; ಆರ್ ಟಿಐ ಕಾರ್ಯಕರ್ತ ಆರೋಪ

ಶಿವಮೊಗ್ಗದ ಪ್ರಾದೇಶಿಕ ಅಗ್ನಿಶಾಮಕ ಅಧಿಕಾರಿ ಕೆ. ಶಿವಕುಮಾರ್ ಅವರು ದೇವಸ್ಥಾನ ನಿರ್ಮಿಸುತ್ತೇನೆಂದು ಹೇಳಿ, ಸಾರ್ವಜನಿಕರಿಂದ ಲಕ್ಷಾಂತರ...

ಬೆಂಗಳೂರು: ಶಿವಮೊಗ್ಗದ ಪ್ರಾದೇಶಿಕ ಅಗ್ನಿಶಾಮಕ ಅಧಿಕಾರಿ ಕೆ. ಶಿವಕುಮಾರ್ ಅವರು ದೇವಸ್ಥಾನ ನಿರ್ಮಿಸುತ್ತೇನೆಂದು ಹೇಳಿ, ಸಾರ್ವಜನಿಕರಿಂದ ಲಕ್ಷಾಂತರ ರು. ಹಣ ಪಡೆದು ವಂಚಿಸಿರುವ ಹಿನ್ನಲೆಯಲ್ಲಿ ಅವರು ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆರ್ ಟಿಐ ಕಾರ್ಯಕರ್ತ ಉಮೇಶ್ ಆಗ್ರಹಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿವಮೊಗ್ಗದ ಮೆಲ್ಲಕಟ್ಟ ಎಂಬಲ್ಲಿ ಗಣೇಶ ದೇವಸ್ಥಾನ ನಿರ್ಮಿಸುತ್ತೇನೆ ಎಂದು ಹೇಳಿ ಅಧಿಕಾರಿ ಕೆ. ಶಿವಕುಮಾರ್ ಅವರು ಸುಮಾರು 9 ಲಕ್ಷ ಹಣ ಸಂಗ್ರಹಿಸಿ ಸಾರ್ವಜನಿಕರಿಗೆ ವಂಚಿಸಿದ್ದಾರೆ.  ಈ ಬಗ್ಗೆ ನಡೆದ ಪ್ರಾಥಮಿಕ ವಿಚಾರಣೆಯಲ್ಲಿ ಆರೋಪ ಸಾಬೀತಾಗಿದೆ ಎಂದು ತಿಳಿಸಿದ್ದಾರೆ.

ಕೆ. ಶಿವಕುಮಾರ್ ಅವರ ವಿರುದ್ಧದ ಆರೋಪಗಳ ಬಗ್ಗೆ ಇಲಾಖಾ ಜಂಟಿ ನಿರ್ದೇಶಕರು ತನಿಖೆಗೆ ಆದೇಶಿಸಿದ್ದರು. ತನಿಖೆಗೆ ಉಪ ನಿರ್ದೇಶಕ ಕೆ.ಯು. ರಮೇಶ್ ಅವರನ್ನು ನೇಮಿಸಲಾಗಿತ್ತು. ಕಳೆದ ವರ್ಷ ಜೂ.27ರಂದು ಅವರು ದೋಷಾರೋಪವನ್ನು ಸಲ್ಲಿಸಿದ್ದಾರೆ. ಆದರೆ ಇದುವರೆಗೂ ಆರೋಪಿಯ ವಿರುದ್ಧ ಕ್ರಮ ಕೈಗೊಂಡಿಲ್ಲ ಎಂದು ಅವರು ಆರೋಪಿಸಿದರು.

ತನಿಖೆ ವೇಳೆ ಆರು ಜನ ಸಾರ್ವಜನಿರು ಮತ್ತು 43 ಜನ ಇಲಾಖೆಯ ಸಿಬ್ಬಂದಿಗಳ ಹೇಳಿಕೆಗಳನ್ನು ದಾಖಲಿಸಿಕೊಳ್ಳಲಾಗುತ್ತದೆ. ಯಾವುದೇ ಒಬ್ಬ ಅಧಿಕಾರಿ ವಂತಿಗೆ ಸಂಗ್ರಹಿಸಬೇಕಾದರೆ ಸರ್ಕಾರದಿಂದ ಅನುಮತಿ ಪಡೆಯಬೇಕಾಗುತ್ತದೆ. ಆದರೆ ಇವರು ಮಾತ್ರ ಯಾವುದೇ ಅನುಮತಿ ಇಲ್ಲದೆ ನಿಯಮ ಉಲ್ಲಂಘಿಸಿ ದೇಣಿಗೆ ಪಡೆದಿದ್ದಾರೆ.

ತದ ನಂತರ ಶಿವಕುಮಾರ್ ಅವರ ಒತ್ತಡಕ್ಕೆ ಮಣಿದ ವಿಚಾರಣಾಧಿಕಾರಿಯೊಬ್ಬರು ಆರೋಪ ಸಾಬೀತಾಗಿಲ್ಲ ಎಂದು ವರದಿ ನೀಡಿರುತ್ತಾರೆ. ಈ ಹಿನ್ನಲೆಯಲ್ಲಿ, ವಿಚಾರಣಾಧಿಕಾರಿ ಆರೋಪಿಯ ಒತ್ತಡಕ್ಕೆ ಮಣಿದಿರುವುದರಿಂದ ಡಿಐಜಿ ಮಟ್ಟದ ಅಧಿಕಾರಿಯಿಂದ ಈ ಪ್ರಕರಣವನ್ನು ಮರು ವಿಚಾರಣೆ ನಡೆಸಬೇಕು ಎಂದು ಉಮೇಶ್ ಆಗ್ರಹಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT