ವಿವಾಹ 
ಜಿಲ್ಲಾ ಸುದ್ದಿ

ಅರಮನೆ ಮೈದಾನದಲ್ಲಿ ಬಡವರ ಮದುವೆ

ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯುವ ಮದುವೆಗಳೆಂದರೆ ಅದ್ಧೂರಿಯ ಆಡುಂಬೊಲ ಎಂದೇ ಜನಜನಿತ. ಆದರೆ, ಬುಧವಾರ ಸಾಮೂಹಿಕ ...

ಬೆಂಗಳೂರು: ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯುವ ಮದುವೆಗಳೆಂದರೆ ಅದ್ಧೂರಿಯ ಆಡುಂಬೊಲ ಎಂದೇ ಜನಜನಿತ. ಆದರೆ, ಬುಧವಾರ ಸಾಮೂಹಿಕ ವಿವಾಹವೊಂದು ನೆರವೇರಿತು. ಅದು ಕುವೆಂಪು ಆಶಯದ ಮಂತ್ರ ಮಾಂಗಲ್ಯದಂತೆ ವಿವಾಹ ನಡೆದಿದ್ದು ವಿಶೇಷ. ಅಲ್ಲದೇ ಸಾಮೂಹಿಕ ವಿವಾಹದಲ್ಲಿ ಕ್ರೈಸ್ತ ಸಮುದಾಯದ ಒಂದು ಜೋಡಿ ಇದ್ದರೆ, ಅಂಗವಿಕಲರೂ ಇದ್ದಿದ್ದು ಮತ್ತೊಂದು ವಿಶೇಷ. ಅರಮನೆ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಆರ್ಥಿಕವಾಗಿ ತೀರಾ ಹಿಂದುಳಿದವರು ಸತಿಪತಿಗಳಾಗಿದ್ದು ಹೊಸ ಸಂಗತಿ. ಈ ಸಂಗತಿಯನ್ನು ರೈತ ಮುಖಂಡ ಕಡಿದಾಳು ಶಾಮಣ್ಣ ಮೆಲುಕು ಹಾಕಿ, ಕುವೆಂಪು ಅವರ ಮಂತ್ರಮಾಂಗಲ್ಯದ ಉದ್ದೇಶವನ್ನು ವಿವರಿಸಿದರು. ಕೃಷಿ ಸಚಿವ ಕೃಷ್ಣ ಬೈರೇಗೌಡ ಮಾತನಾಡಿ, ಸರಳ ವಿವಾಹವನ್ನು ಕಡ್ಡಾಯಗೊಳಿಸಲು ಸಮಾಜದ ಸಹಮತ ಇಲ್ಲ. ಈ ಬಗ್ಗೆ ಜಾಗೃತಿ ಮೂಡಿಸಬೇಕಾದ ಅಗತ್ಯವಿದೆ. ಒಬ್ಬರಿಗೊಬ್ಬರು ನೋಡಿ ಅದ್ಧೂರಿ ವಿವಾಹ ಮಾಡುವ ಪರಿಪಾಠ ಹೆಚ್ಚುತ್ತಿದೆ. ವಿವಾಹದ ನಂತರ ಆರ್ಥಿಕ ಸಂಕಷ್ಟಕ್ಕೆ ಒಳಗಾಗುತ್ತಾರೆ. ಈ ಬಗ್ಗೆ ರಾಜ್ಯ ಸರ್ಕಾರ ಚಿಂತಿಸಿ ಸರಳ ವಿವಾಹದ ಕಾನೂನು ಜಾರಿಗೆ ತರಲು ಮುಂದಾಗಿತ್ತು. ಆದರೆ, ಸಮಾಜದ ವಿರೋಧದಿಂದಾಗಿ ಕೈಬಿಡಬೇಕಾಯಿತು ಎಂದು ವಿಷಾದಿಸಿದರು. ಸಚಿವ ಡಿ.ಕೆ. ಶಿವಕುಮಾರ್, ಸರಳ ವಿವಾಹವೇ ಸರ್ಕಾರದ ನೀತಿ. ಇಂತಹ ವಿವಾಹ ಪದ್ಧತಿಗಳು ಎಲ್ಲೆಡೆ ಚರ್ಚೆಗೀಡಾಗಿವೆ.  ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣ ಗೌಡ ಅವರು 49ನೇ ಹುಟ್ಟುಹಬ್ಬದ ಅಂಗವಾಗಿ ಬುಧವಾರ ಅರಮನೆ ಮೈದಾನದಲ್ಲಿ ಸಾಮೂಹಿಕ ವಿವಾಹ, ಕ್ಯಾನ್ಸರ್ ಪೀಡಿತರಿಗೆ ಆರ್ಥಿಕ ಸಹಾಯಕ, ವಿದ್ಯಾರ್ಥಿ ವೇತನ, ಆರ್ಥಿಕ ತೊಂದರೆಯಿಂದ ಜೈಲಲ್ಲೇ ಉಳಿದಿರುವ ವೃದ್ಧ ಕೈದಿಗಳಿಗೆ ನೆರವು ಸೇರಿದಂತೆ ವಿವಿಧ ಕಾರ್ಯಕ್ರಮಗಳು ನೆರವೇರಿದವು. ಕ್ಯಾನ್ಸರ್ ಪೀಡಿತರ ಪರವಾಗಿ ಅವರ ಕುಟುಂಬದವರು ಆರ್ಥಿಕ ಸಹಾಯ ಸ್ವೀಕರಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

2nd test, Day 2: 518 ರನ್ ಗಳಿಗೆ ಭಾರತ ಇನ್ನಿಂಗ್ಸ್ ಡಿಕ್ಲೇರ್!

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

SCROLL FOR NEXT