ಮುಜರಾಯಿ ಸಚಿವ ಟಿ.ಬಿ.ಜಯಚಂದ್ರ 
ಜಿಲ್ಲಾ ಸುದ್ದಿ

ದೇವರ ದರ್ಶನಕ್ಕೆ ಇನ್ನು ಆನ್‍ಲೈನ್ ಬುಕ್ಕಿಂಗ್: ಸಚಿವ ಜಯಚಂದ್ರ

ದೇವಸ್ಥಾನಗಳಲ್ಲಿ ನಡೆಯುತ್ತಿರುವ ಭಕ್ತರ ಶೋಷಣೆ ತಪ್ಪಿಸಲು ರಾಜ್ಯ ಸರ್ಕಾರ 11 ಪ್ರಮುಖ ದೇವಸ್ಥಾನಗಳಲ್ಲಿ ದೇವರ ದರ್ಶನಕ್ಕೆ ಆನ್‍ಲೈನ್ ಸೇವೆ ಆರಂಭಿಸಿದೆ. ರಾಜ್ಯ ಧಾರ್ಮಿಕ ದತ್ತಿ ಇಲಾಖೆ ಮತ್ತು ಇ-ಆಡಳಿತ ಇಲಾಖೆ ಸಹಯೋಗದಲ್ಲಿ ಕಲ್ಪಿಸಲಾಗಿರುವ...

ಬೆಂಗಳೂರು: ದೇವಸ್ಥಾನಗಳಲ್ಲಿ ನಡೆಯುತ್ತಿರುವ ಭಕ್ತರ ಶೋಷಣೆ ತಪ್ಪಿಸಲು ರಾಜ್ಯ ಸರ್ಕಾರ 11 ಪ್ರಮುಖ ದೇವಸ್ಥಾನಗಳಲ್ಲಿ ದೇವರ ದರ್ಶನಕ್ಕೆ ಆನ್‍ಲೈನ್ ಸೇವೆ ಆರಂಭಿಸಿದೆ. ರಾಜ್ಯ ಧಾರ್ಮಿಕ ದತ್ತಿ ಇಲಾಖೆ ಮತ್ತು ಇ-ಆಡಳಿತ ಇಲಾಖೆ ಸಹಯೋಗದಲ್ಲಿ ಕಲ್ಪಿಸಲಾಗಿರುವ ದೇಗುಲಗಳ ಆನ್‍ಲೈನ್ ಸೇವೆಯನ್ನು ಮುಜರಾಯಿ ಸಚಿವ ಟಿ.ಬಿ.ಜಯಚಂದ್ರ ಗುರುವಾರ ಉದ್ಘಾಟಿಸಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರು.1 ಕೋಟಿಗೂ ಹೆಚ್ಚಿನ ಆದಾಯ ಇರುವ ರಾಜ್ಯದ 11 ದೇವಸ್ಥಾನಗಳಲ್ಲಿ ಭಕ್ತರಿಗೆ ಸುಲಭ ದರ್ಶನಕ್ಕಾಗಿ ಆನ್‍ಲೈನ್ ಸೇವೆ ಆರಂಭಿಸಲಾಗಿದೆ. ಇದನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ವಿನಂತಿಸಿದರು. ಬೆಂಗಳೂರು ಒನ್ ವೆಬ್‍ಸೈಟ್‍ನಿಂದ ಬುಕ್ಕಿಂಗ್ ಮಾಡಬೇಕು.

ಕೊಲ್ಲೂರು ಮೂಕಾಂಬಿಕಾ, ಕುಕ್ಕೆ ಸುಬ್ರಹ್ಮಣ್ಯ, ಮಲೆ ಮಹದೇಶ್ವರ ಬೆಟ್ಟ, ಮೈಸೂರು ಚಾಮುಂಡೇಶ್ವರಿ, ನಂಜನಗೂಡು ಶ್ರೀಕಂಠೇಶ್ವರ, ಹುಲಿಗೇಮ್ಮ ದೇವಿ, ರೇಣುಕಾಯಲ್ಲಮ್ಮ, ಕಟೀಲು ಶ್ರೀ ದುರ್ಗಾ ಪರಮೇಶ್ವರಿ, ಅಳೇವೂರು ಶ್ರೀ ದುರ್ಗಾ ಪರಮೇಶ್ವರಿ ಹಾಗೂ ಬೆಂಗಳೂರಿನ ಬನಶಂಕರಿ ದೇವಸ್ಥಾನಗಳಲ್ಲಿ ಲಭ್ಯ ಇರುತ್ತದೆ. ತಿರುಪತಿಯಲ್ಲಿ ಮಾತ್ರ ದೇವರ ದರ್ಶನಕ್ಕೆ ಬದಲಾಗಿ ಕರ್ನಾಟಕ ರಾಜ್ಯದ ಛತ್ರಗಳಲ್ಲಿ ತಂಗುವುದಕ್ಕೆ ಕಲ್ಪಿಸಲಾಗಿದೆ. ದರ್ಶನಕ್ಕೆ ತಾವೇ ವ್ಯವಸ್ಥೆ ಮಾಡಿಸಿಕೊಳ್ಳಬೇಕು ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT