ಪತ್ರಿಕಾಗೋಷ್ಠಿಯಲ್ಲಿ ವಾಟಾಳ್ ನಾಗರಾಜು, ಸಾರಾ ಗೋವಿಂದ್ ಮತ್ತಿತರರು ಹಾಜರಿದ್ದರು. 
ಜಿಲ್ಲಾ ಸುದ್ದಿ

ಕಳಸ ಬಂಡೂರಿಗೆ ಕ್ಯಾತೆ: ಜೂನ್ 27ಕ್ಕೆ ಗೋವಾ ಮುತ್ತಿಗೆ

ಕಳಸ ಬಂಡೂರಿ ಕುಡಿಯುವ ನೀರಿನ ಯೋಜನೆಗೆ ಕ್ಯಾತೆ ತೆಗೆದಿರುವ ಗೋವಾ ಸರ್ಕಾರದ ನೀತಿ ವಿರುದ್ಧ ರಾಜ್ಯ ಮತ್ತು ಕೇಂದ್ರ ಗಮನ ಸೆಳೆಯಲು...

ಬೆಂಗಳೂರು: ಕಳಸ ಬಂಡೂರಿ ಕುಡಿಯುವ ನೀರಿನ ಯೋಜನೆಗೆ ಕ್ಯಾತೆ ತೆಗೆದಿರುವ ಗೋವಾ ಸರ್ಕಾರದ ನೀತಿ ವಿರುದ್ಧ ರಾಜ್ಯ ಮತ್ತು ಕೇಂದ್ರ ಗಮನ ಸೆಳೆಯಲು ಜೂನ್ 27ರಂದು ಕನ್ನಡ ಒಕ್ಕೂಟದಿಂದ ಗೋವಾ ಮುತ್ತಿಗೆ ಚಳವಳಿ ನಡೆಸಲಾಗುವುದು ಎಂದು ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವಾಟಾಳ್ ನಾಗರಾಜ್, ಗೋವಾ ಸರ್ಕಾರ ಕನ್ನಡಿಗರಿಗೆ ನೀರು ಕೊಡದೆ, ತಡೆಯೊಡ್ಡಿದೆ. ಈ ಕುರಿತು ನಮ್ಮ ಸರ್ಕಾರ ಯಾವುದೇ ಕ್ರಮತೆಗೆದುಕೊಳ್ಳುತ್ತಿಲ್ಲ, ಇದರಿಂದಾಗಿ ಉತ್ತರ ಕರ್ನಾಟಕದ ಜನತೆಗೆ ನೀರಿನ ಸಮಸ್ಯೆ ಹೆಚ್ಚಾಗಿದೆ. ಹುಬ್ಬಳ್ಳಿಯಿಂದ ಕಾರವಾರ ಮಾರ್ಗವಾಗಿ ಗೋವಾಕ್ಕೆ ತೆರಳಿ ಜೂ. 27ರಂದು ಪ್ರತಿಭಟನೆ ನಡೆಸಲಾಗುವುದು. ಇದಕ್ಕೆ ಎಲ್ಲ ಕನ್ನಡಪರ ಸಂಘಟನೆಗಳು ವ್ಯಾಪಕವಾಗಿ ಬೆಂಬಲ ನೀಡಿ ಹೋರಾಟದಲ್ಲಿ ಭಾಗಿಯಾಗಬೇಕು'' ಎಂದು ಮನವಿ ಮಾಡಿದರು.

ಕುಡಿಯುವ ನೀರಿನ ವಿಚಾರದಲ್ಲಿ ನೆರೆ ರಾಜ್ಯಗಳಿಂದ ಕರ್ನಾಟಕಕ್ಕೆ ಸಾಕಷ್ಟು ತೊಂದರೆಗಳಾಗುತ್ತಿವೆ. ಈ ಸಂಬಂಧ ಆಯಾ ರಾಜ್ಯ ಸರ್ಕಾರಗಳು ತಮ್ಮ ಅನುಕೂಲಕ್ಕೆ ತಕ್ಕಂತೆ ಹೋರಾಟ ನಡೆಸಿ, ನಮ್ಮ ನೀರನ್ನು ಕಿತ್ತುಕೊಳ್ಳುತ್ತಿವೆ. ಹಾಗಾಗಿ, ಇಂಥ ವಿಚಾರದಲ್ಲಿ ರಾಜ್ಯ ಸರಕಾರ ದಿಟ್ಟ ನಿರ್ಧಾರ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.

ಜಯಲಲಿತಾ ಕ್ಯಾತೆ ತೆಗೆದರೆ ತಮಿಳು ಚಿತ್ರಗಳಿಗೆ ಬಹಿಷ್ಕಾರ

ತಮಿಳುನಾಡು ಸರ್ಕಾರ ವಿನಾಕಾರಣ ಮೇಕೆದಾಟು ಯೋಜನೆ ವಿಚಾರದಲ್ಲಿ ಕ್ಯಾತೆ ತೆಗೆಯುತ್ತಿದೆ. ಮುಖ್ಯಮಂತ್ರಿ ಜಯಲಲಿತಾ ಸಣ್ಣತನವನ್ನು ಪ್ರದರ್ಶಿಸುತ್ತಿದ್ದಾರೆ. ಇದೇ ರೀತಿ ಜಯಲಲಿತಾ ಮಂಡುತನ ಮುಂದುವರೆಸಿದರೇ, ರಾಜ್ಯದಲ್ಲಿ ತಮಿಳು ಚಿತ್ರಗಳಿಗೆ ಬಹಿಷ್ಕಾರ, ತಮಿಳ್ ಚಾನೆಲ್ ಬಂದ್ ಮಾಡಲಾಗುವುದು ಎಂದು ವಾಟಾಳ್ ಎಚ್ಚರಿಸಿದ್ದಾರೆ.
ಅಲ್ಲದೇ, ಕರ್ನಾಟಕ ಸರ್ಕಾರ ಬೆಳಗಾವಿಯಲ್ಲಿ ನಡೆಯಲಿರುವ ಅಧಿವೇಶನದಲ್ಲಿ ಮೇಕೆದಾಟು ಯೋಜನೆಗೆ ಶಂಕಸ್ಥಾಪನೆ ದಿನವನ್ನು ನಿಗದಿ ಪಡಿಸಬೇಕು, ಇಲ್ಲವಾದರೆ, ಕನ್ನಡಪರ ಸಂಘಟನೆಗಳೇ ಶಂಕಸ್ಥಾಪನೆ ಮಾಡಲಿವೆ ಎಂದ ಅವರು, ವಿಧಾನಸಭೆಯಲ್ಲಿ ಈ ಎಲ್ಲಾ ವಿಷಯಗಳ ಬಗ್ಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ: GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ; ಡಿಕೆ ಶಿವಕುಮಾರ್

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

SCROLL FOR NEXT