ಸಚಿವ ಚಿಂಚನಸೂರು 
ಜಿಲ್ಲಾ ಸುದ್ದಿ

ಜವಳಿ ನೀತಿಯಿಂದ 50,000 ಉದ್ಯೋಗ

ರಾಜ್ಯ ಸರ್ಕಾರದ ನೂತನ ಜವಳಿ ನೀತಿ ಅತ್ಯುತ್ತಮ ಪರಿಣಾಮ ಬೀರಿದ್ದು, ಇದುವರೆಗೆ ಸುಮಾರು ರು.1,300 ಕೋಟಿ ಬಂಡವಾಳ ಹೂಡಿಕೆಯಾಗಿದ್ದು, 50,000 ಉದ್ಯೋಗ ಸೃಷ್ಟಿಯಾಗಿದೆ. ಜತೆಗೆ 26,000 ಜನರಿಗೆ ಜವಳಿ ಕ್ಷೇತ್ರಕ್ಕೆ ಸಂಬಂಧಿಸಿದಂತೆ ತರಬೇತಿಯನ್ನೂ...

ಬೆಂಗಳೂರು: ರಾಜ್ಯ ಸರ್ಕಾರದ ನೂತನ ಜವಳಿ ನೀತಿ ಅತ್ಯುತ್ತಮ ಪರಿಣಾಮ ಬೀರಿದ್ದು, ಇದುವರೆಗೆ ಸುಮಾರು ರು.1,300 ಕೋಟಿ ಬಂಡವಾಳ ಹೂಡಿಕೆಯಾಗಿದ್ದು, 50,000 ಉದ್ಯೋಗ ಸೃಷ್ಟಿಯಾಗಿದೆ. ಜತೆಗೆ 26,000 ಜನರಿಗೆ ಜವಳಿ ಕ್ಷೇತ್ರಕ್ಕೆ ಸಂಬಂಧಿಸಿದಂತೆ ತರಬೇತಿಯನ್ನೂ ನೀಡಲಾಗಿದ್ದು, ಅವರಲ್ಲಿ ಬಹುತೇಕ ಮಂದಿಗೆ ಉದ್ಯೋಗವೂ ಸಿಕ್ಕಿದೆ ಎಂದು ಸಚಿವ ಚಿಂಚನಸೂರು ಹೇಳಿದರು.

ಗುರುವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜವಳಿ ನೀತಿ ಜಾರಿಗೊಳಿಸಿದ ಎರಡೇ ವರ್ಷಗಳಲ್ಲಿ ಇಷ್ಟೊಂದು ಸಾಧನೆಯಾಗಿದ್ದು, ಐದು ವರ್ಷಗಳ ಒಳಗೆ ರು.10 ಸಾವಿರ ಕೋಟಿ ಬಂಡವಾಳ ಹೂಡಿಕೆಯಾಗುವಂತೆ ಮಾಡಿ, ಸುಮಾರು 5ಲಕ್ಷ ಮಂದಿಗೆ ಉದ್ಯೋಗಸಿಗುವಂತೆ ಮಾಡಲಾಗುತ್ತದೆ. ವಿಶ್ವ ಹೂಡಿಕೆದಾರರ ಸಮಾವೇಶದ ಪರಿಣಾಮವಾಗಿ ಶಾಹಿ ಎಕ್ಸ್ ಪೋರ್ಟ್, ಇಟ್ಟೋ ಡೆನಿಮ್, ಪ್ರಿಕಾಟ್ ಮೆರಿಡಿಯನ್, ಕವಾಶಿಮ ಮತ್ತು ಸ್ಕಾಟ್ ಗಾರ್ಮೆಂಟ್ಸ್ ಕಂಪನಿಗಳು ಬಂಡವಾಳ ಹೂಡಿಕೆ ಮಾಡಿವೆ.

ಪ್ರಸಕ್ತ ಸಾಲಿನಲ್ಲಿ ಚಾಮರಾಜನಗರ, ತುಮಕೂರು ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ತಲಾ 500 ಎಕರೆ ಪ್ರದೇಶದಲ್ಲಿ ಮೆಗಾ ಜವಳಿ ಪಾರ್ಕ್ ಸ್ಥಾಪಿಸಲು ಕ್ರಮಕೈಗೊಳ್ಳಲಾಗಿದೆ ಎಂದು ವಿವರಿಸಿದರು.3 ವರ್ಷಗಳಲ್ಲಿ 15 ಘಟಕಗಳ ಸ್ಥಾಪನೆಗೆ ಉತ್ತೇಜನೆ ನೀಡಲಾಗುತ್ತಿದ್ದು ವರ್ಷಕ್ಕೆ 5,000 ಗ್ರಾಮೀಣ ಮಹಿಳೆಯರಿಗೆ ಉದ್ಯೋಗ ಸಿಗಲಿದೆ ಎಂದು ಚಿಂಚನಸೂರು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗುಜರಾತ್: SIR ಬಳಿಕ ಕರಡು ಮತದಾರರ ಪಟ್ಟಿ ಪ್ರಕಟ, 73.73 ಲಕ್ಷಕ್ಕೂ ಹೆಚ್ಚು ಮತದಾರರ ಹೆಸರು ಡಿಲೀಟ್!

5ನೇ T20: ದಕ್ಷಿಣ ಆಫ್ರಿಕಾ ವಿರುದ್ಧ ಭಾರತಕ್ಕೆ 30 ರನ್ ಗಳ ರೋಚಕ ಜಯ; 3-1 ಸರಣಿ ಗೆಲುವು

Load shedding In bangalore: ಡಿ.20 ರಂದು ನಗರದ ಈ ಏರಿಯಾಗಳಲ್ಲಿ ಬೆಳಿಗ್ಗೆಯಿಂದ ಸಂಜೆ ವರೆಗೂ ವಿದ್ಯುತ್ ಕಡಿತ

ಬೇಡಿಕೆ ಈಡೇರಿದೆ, ನನ್ನ-ಸಿಎಂ ನಡುವೆ ಒಪ್ಪಂದವಾಗಿದೆ; ಹೈಕಮಾಂಡ್ ಅವರ ಪರ ಇರೋದ್ರಿಂದಲೇ ಅವರು ಸಿಎಂ: ಡಿ.ಕೆ ಶಿವಕುಮಾರ್

1,000 ಕೋಟಿ ಬೆಟ್ಟಿಂಗ್ ಆ್ಯಪ್ ತನಿಖೆ: ಯುವರಾಜ್ ಸಿಂಗ್, ಉತ್ತಪ್ಪ, ಮಿಮಿ ಚಕ್ರವರ್ತಿ, ಸೋನು ಸೂದ್ ಆಸ್ತಿ ಮುಟ್ಟುಗೋಲು!

SCROLL FOR NEXT