ಹೈ ಕೋರ್ಟ್ 
ಜಿಲ್ಲಾ ಸುದ್ದಿ

ನಗರದಲ್ಲಿ ತ್ಯಾಜ್ಯ ಸಮಸ್ಯೆ: ವಿಚಾರಣೆಗೆ ಆಡಳಿತಾಧಿಕಾರಿಗಳೇ ಗೈರು

ನಗರದಲ್ಲಿ ಉದ್ಭವಿಸಿದ್ದ ತ್ಯಾಜ್ಯ ಸಮಸ್ಯೆ ಬಗೆಹರಿಸುವಂತೆ ಕೋರಿ ದಾಖಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆಗೆ ಬಿಬಿಎಂಪಿ ಆಡಳಿತಾಧಿಕಾರಿ ಗೈರು ಹಾಜರಾಗಿದ್ದಕ್ಕೆ ಹೈ ಕೋರ್ಟ್ ಕಿಡಿಕಾರಿದೆ...

ಬೆಂಗಳೂರು: ನಗರದಲ್ಲಿ ಉದ್ಭವಿಸಿದ್ದ ತ್ಯಾಜ್ಯ ಸಮಸ್ಯೆ ಬಗೆಹರಿಸುವಂತೆ ಕೋರಿ ದಾಖಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆಗೆ ಬಿಬಿಎಂಪಿ ಆಡಳಿತಾಧಿಕಾರಿ ಗೈರು ಹಾಜರಾಗಿದ್ದಕ್ಕೆ ಹೈ ಕೋರ್ಟ್ ಕಿಡಿಕಾರಿದೆ.

ಈ ಹಿಂದೆ ವಿಚಾರಣೆ ವೇಳೆ ಹಾಜರಾಗಿದ್ದ ಆಡಳಿತಾಧಿಕಾರಿ, ತಾವು ಹೊಸದಾಗಿ ಅಧಿಕಾರ ಸ್ವೀಕರಿಸಿಕೊಂಡಿದ್ದು, ಸಮಸ್ಯೆ ಕುರಿತು ಮತ್ತು ಕೋರ್ಟ್ ಹೊರಡಿಸಿದ ಆದೇಶ ಅಧ್ಯಯನ ಮಾಡಬೇಕಿದೆ. ಹೀಗಾಗಿ ಕೊಂಚ ಕಾಲವಕಾಶ ನೀಡುವಂತೆ ವಿನಂತಿಸಿದ್ದರು. ಆದರೆ, ಶುಕ್ರವಾರ ವಿಚಾರಣೆ ನಡೆಯಲಿದೆ ಎಂದು ತಿಳಿದಿದ್ದರೂ ಸಹ ಅವರು ಕೋರ್ಟ್ ಗೆ ಹಾಜರಾಗಿಲ್ಲ. ಅಂದರೆ ಅಧಿಕಾರಿಗೆ ಸಮಸ್ಯೆಯ ಗಂಭೀರತೆ ತಿಳಿದಿಲ್ಲ ಎನಿಸುತ್ತದೆ.

ಸಂಬಂಧಪಟ್ಟವರು ಹಾಜರಾಗದಿದ್ದರೆ ವಿಚಾರಣೆ ನಡೆಸುವುದಾದರು ಹೇಗೆ?  ಅಧಿಕಾರಿಗಳು ಕೋರ್ಟ್ ಗೆ ಗೌರವ ನೀಡಿದರೆ ಕೋರ್ಟ್ ಸಹ ಅವರಿಗೆ ಗೌರವ ನೀಡುತ್ತದೆ. ಆದರೆ ಇತ್ತೀಚಿಗೆ ನ್ಯಾಯಾಲಯ ಅವರಿಗೆ ಹೆಚ್ಚು ಗೌರವ ನೀಡುತ್ತಿದೆ ಎಂದೆನಿಸುತ್ತದೆ. ಬಹುಶಃ ಈ ಕಾರಣಕ್ಕಾಗಿಯೇ ಅಧಿಕಾರಿ ಹಾಜರಾಗಿಲ್ಲ ಎಂದು ನ್ಯಾ.ಎನ್.ಕುಮಾರ್ ಮತ್ತು ನ್ಯಾ.ಶ್ರೀನಿವಾಸೇಗೌಡ ಅವರಿದ್ದ ವಿಭಾಗೀಯ ಪೀಠ ಅಸಮಾಧಾನ ವ್ಯಕ್ತಪಡಿಸಿತು. ಇಚ್ಛಾಶಕ್ತಿ ಆಡಳಿತಾಧಿಕಾರಿಗೆ ಇಲ್ಲದ ಮೇಲೆ ಅವರು ಇನ್ಯಾವ ರೀತಿ ಆಡಳಿತ ನಡೆಸುತ್ತಾರೆ? ಆದೇಶ ಪಾಲಿಸಲು ಇರುವ ಕಷ್ಟವಾದರೂ ಏನು? ಎಂಬುದನ್ನಾದರು ತಿಳಿಸಲಿ ಎಂದು ಸೂಚಿಸಿ ವಿಚಾರಣೆಯನ್ನು ಜೂ.19ಕ್ಕೆ ಮುಂದೂಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ