ಕೊಳದ ಮಠದ ಪೀಠಾಧ್ಯಕ್ಷ ಶಾಂತವೀರ ಸ್ವಾಮೀಜಿ 
ಜಿಲ್ಲಾ ಸುದ್ದಿ

ಅಲ್ಲಮನನ್ನು ಮರೆತ ಸರ್ಕಾರ: ಶಾಂತವೀರ ಸ್ವಾಮೀಜಿ

ಸಮಾಜದ ಓರೆ-ಕೋರೆಗಳನ್ನು ತಿದ್ದಲು ಕಾರಣನಾದ ವಚನಕಾರ ಅಲ್ಲಮಪ್ರಭುವಿ ನ ಹೆಸರಿನಲ್ಲಿ ಸರ್ಕಾರ ಯಾವುದೇ ಪ್ರಶಸ್ತಿ ನೀಡುತ್ತಿಲ್ಲ ಎಂದು ಕೊಳದ ಮಠದ ಪೀಠಾಧ್ಯಕ್ಷ ಶಾಂತವೀರ ಸ್ವಾಮೀಜಿ ಬೇಸರ ವ್ಯಕ್ತಪಡಿಸಿದರು...

ಬೆಂಗಳೂರು: ಸಮಾಜದ ಓರೆ-ಕೋರೆಗಳನ್ನು ತಿದ್ದಲು ಕಾರಣನಾದ ವಚನಕಾರ ಅಲ್ಲಮಪ್ರಭುವಿ ನ ಹೆಸರಿನಲ್ಲಿ ಸರ್ಕಾರ ಯಾವುದೇ ಪ್ರಶಸ್ತಿ ನೀಡುತ್ತಿಲ್ಲ ಎಂದು ಕೊಳದ ಮಠದ ಪೀಠಾಧ್ಯಕ್ಷ ಶಾಂತವೀರ ಸ್ವಾಮೀಜಿ ಬೇಸರ ವ್ಯಕ್ತಪಡಿಸಿದರು.

ಭಾನುವಾರ ಕೊಳದಮಠದ ಆವರಣದಲ್ಲಿ ಏರ್ಪಡಿಸಿದ್ದ `ಅಲ್ಲಮಶ್ರೀ' ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಅವರು, ಬಸವಣ್ಣನವರು ಕೈಗೊಂಡ ವಚನ ಕ್ರಾಂತಿಗೆ ಅಲ್ಲಮರೇ ಅಡಿಪಾಯ ಹಾಕಿದವರು. ಆದರೂ ಅವರ ಹೆಸರಿನಲ್ಲಿ ಸರ್ಕಾರ ಪ್ರಶಸ್ತಿ ನೀಡುತ್ತಿಲ್ಲ. ಹೀಗಾಗಿ ಅಲ್ಲಮಶ್ರೀ ಪ್ರಶಸ್ತಿಯನ್ನು ಸ್ಥಾಪಿಸಿ, ಅದನ್ನು ಬ್ಯಾಹ್ಯಾಕಾಶ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಿರುವ ಇಸ್ರೋ ಅಧ್ಯಕ್ಷ ಎ.ಎಸ್.ಕಿರಣ್ ಕುಮಾರ್ ಅವರಿಗೆ ನೀಡಲಾಗಿದೆ ಎಂದು ಹೇಳಿದರು.

ಕಾಂಗ್ರೆಸ್‍ನ ಹಿರಿಯ ಮುಖಂಡ ಬೂಟಾಸಿಂಗ್ ಮಾತನಾಡಿ, ಸನಾತನ ಧರ್ಮ, ಸಿಖ್‍ಧರ್ಮ ಒಳಗೊಂಡಂತೆ ಎಲ್ಲಾ ಧರ್ಮಗಳೂ ಸಂತರನ್ನು ಕುರಿತು ಪೂಜ್ಯ ಭಾವನೆ ಹೊಂದಿವೆ. ವಿಶ್ವಶಾಂತಿಗಾಗಿ ಸರ್ವಧರ್ಮ ಸಮ್ಮೇಳನ ನಡೆಯಬೇಕಾಗಿದೆ. ನಾನು ಮೊದಲು ಧಾರ್ಮಿಕ ನಂಬಿಕೆಯುಳ್ಳವ, ನಂತರ ರಾಜಕಾರಣಿ ಎಂದರು. ಶಾಸಕ ಹ್ಯಾರಿಸ್ ಮಾತನಾಡಿ, ಭಾರತೀಯರೆಲ್ಲಾ ಒಂದಾದರೆ ದೇಶ ಕ್ಷಿಪ್ರ ಬೆಳವಣಿಗೆ ಕಾಣುತ್ತದೆ. ಆದರೆ, ನಮ್ಮ ನಡುವೆಯೇ ಹೋರಾಟ ನಡೆಯುತ್ತಿರುವುದರಿಂದ ಇದು ಸಾಧ್ಯವಾಗುತ್ತಿಲ್ಲ ಎಂದು ವಿಷಾದಿಸಿದರು.

ಇಸ್ರೋ ಅಧ್ಯಕ್ಷ ಕಿರಣ್ ಕುಮಾರ್ ಅನುಪಸ್ಥಿತಿಯಲ್ಲಿ `ಅಲ್ಲಮಶ್ರೀ ಪ್ರಶಸ್ತಿ' ಪ್ರದಾನ ಮಾಡಲಾಯಿತು. ನಿವೃತ್ತ ಅಧಿಕಾರಿ ಡಾ. ಸಿ. ಸೋಮಶೇಖರ್, ಕೃಷಿ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಎಂ. ಮಹದೇವಪ್ಪ, ಮಹದೇವ ಹೊರಟ್ಟಿ ಮತ್ತಿತರರು ಭಾಗವಹಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT