ಬೀದರ್ ನಲ್ಲಿ ಬೀದಿ ನಾಯಿ ಹಾವಳಿ 
ಜಿಲ್ಲಾ ಸುದ್ದಿ

ಒಂದೇ ದಿನ 13 ಜನರಿಗೆ ಕಚ್ಚಿದ ಬೀದಿ ನಾಯಿಗಳು

ನಗರದಲ್ಲಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಭಾನುವಾರ ಒಂದೆ ದಿನ ಸುಮಾರು 13 ಜನರು ನಾಯಿ ಕಡಿತದಿಂದ ಆಸ್ಪತ್ರೆಗೆ ದಾಖಲಾದ ಘಟನೆ ಜರುಗಿದೆ.

ಬೀದರ್: ನಗರದಲ್ಲಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಭಾನುವಾರ ಒಂದೆ ದಿನ ಸುಮಾರು 13 ಜನರು ನಾಯಿ ಕಡಿತದಿಂದ ಆಸ್ಪತ್ರೆಗೆ ದಾಖಲಾದ ಘಟನೆ ಜರುಗಿದೆ.

ಬೀದರ್ ನಗರದ ವಾರ್ಡ್ ಸಂಖ್ಯೆ 3ರ ಮುಸ್ತೈದ್ ಪೂರಾ ಬಡಾವಣೆಯಲ್ಲಿ ವಾಸಿಸುತ್ತಿರುವ ಜಮ್ಮು ಅಬ್ದುಲ್ ರಫೀಕ್ (3) ಎಂಬ ಚಿಕ್ಕ ಬಾಲಕಿಯ ಕಿವಿಗೆ ಕಚ್ಚಿದ್ದರಿಂದ ಗಂಭೀರವಾಗಿ ಗಾಯಗೊಂಡ ಬಾಲಕಿಗೆ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೂಲಿ ಕೆಲಸ ಮಾಡಿ ಜೀವನ ಸಾಗಿಸುತ್ತಿರುವ ಜಮ್ಮು ಎಂಬ ಬಾಲಕಿಯ ತಾಯಿ ಕುಡಿಯಲು ನೀರು ತರಲು ಹೋದಾಗ ಮನೆ ಹೊರಗೆ ನಿಂತಿದ್ದ ಬಾಲಕಿಗೆ 3-4 ನಾಯಿಗಳು ಸೇರಿ ಬಾಲಕಿಯ ಕಿವಿಗೆ ಕಚ್ಚಿದ್ದರಿಂದ ಗಂಭೀರ ಗಾಯಗಳಾಗಿವೆ. ಮಗಳ ನೋವಿಗೆ ತಾಯಿ ಕಣ್ಣೀರು ಸುರಿಸುತ್ತಿದ್ದಾಳೆ.

ಇದೇ ಬಡಾವಣೆಯಲ್ಲಿ ವಾಸಿಸುತ್ತಿರುವ ಬಡ ಚಂದ್ರಮ್ಮ (50) ಎಂಬ ಮಹಿಳೆಯ ಕಾಲಿಗೆ ನಾಯಿ ಕಚ್ಚಿದ್ದು, ಅವಳು ಕೂಡ ಭಾನುವಾರ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದಾಳೆ. ಇದಲ್ಲದೆ ಅನೇಕ ಚಿಕ್ಕ ಮಕ್ಕಳಿಗೆ ನಾಯಿ ಕಡಿತದ ಹಾವಳಿ ಹೆಚ್ಚಾಗಿದೆ.

ಆಸ್ಪತ್ರೆಯಲ್ಲಿ ಔಷಧಿ ಕೊರತೆ
ನಾಯಿ ಕಡಿತದ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿದ್ದರೆ, ಇತ್ತ ಜಿಲ್ಲಾ ಆಸ್ಪತ್ರೆಯಲ್ಲಿ ಔಷಧಿಯ ಕೊರತೆ ಕಾಡುತ್ತಿದೆ. ಭಾನುವಾರ ಮುಸ್ತೈದ್‍ಪುರಾ ಬಡಾವಣೆಯ ಮೂರು ವರ್ಷದ
ಬಾಲಕಿಗೆ ನಾಯಿ ಕಡಿತದಿಂದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅಲ್ಲಿ ನಾಯಿ ಕಡಿತದ ಔಷಧಿ ಇಲ್ಲ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ ಎಂದು ನಗರಸಭೆ ಸದಸ್ಯ ನಬೀ ಖುರೇಶಿ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT