ಮಂತ್ರಿ ಮಾಲ್ ಶಾಪಿಂಗ್ ಕಾಂಪ್ಲೆಕ್ಸ್ ಕಟ್ಟಡ 
ಜಿಲ್ಲಾ ಸುದ್ದಿ

ಬಿಬಿಎಂಪಿ ಅಂಗಳಕ್ಕೆ ಮಂತ್ರಿ ಮಾಲ್ ವಿವಾದ

ನಗರದ ಮಲ್ಲೇಶ್ವರದಲ್ಲಿರುವ ಮಂತ್ರಿ ಮಾಲ್ ಶಾಪಿಂಗ್ ಕಾಂಪ್ಲೆಕ್ಸ್ ಕಟ್ಟಡ ನಿರ್ಮಾಣದ ಬೈಲಾ ಉಲ್ಲಂಘಿಸಿದೆ ಎಂದು ಆರೋಪಿಸಿ ಸಲ್ಲಿಕೆಯಾಗಿದ್ದ ಅರ್ಜಿಗೆ...


ಬೆಂಗಳೂರು : ನಗರದ ಮಲ್ಲೇಶ್ವರದಲ್ಲಿರುವ ಮಂತ್ರಿ ಮಾಲ್ ಶಾಪಿಂಗ್ ಕಾಂಪ್ಲೆಕ್ಸ್ ಕಟ್ಟಡ ನಿರ್ಮಾಣದ ಬೈಲಾ ಉಲ್ಲಂಘಿಸಿದೆ ಎಂದು ಆರೋಪಿಸಿ ಸಲ್ಲಿಕೆಯಾಗಿದ್ದ ಅರ್ಜಿಗೆ ಸಂಬಂಧಿಸಿದಂತೆ ಅರ್ಜಿದಾರರು ಮತ್ತು ಪ್ರತಿವಾದಿಗಳ ವಾದ ಮತ್ತು ಆಕ್ಷೇಪಣೆಗಳನ್ನು ಆಲಿಸಿ ಸೂಕ್ತ ಆದೇಶ ಹೊರಡಿಸುವಂತೆ ಬೃಹತ್ ಬೆಂಗಳೂರು ಮಹಾನಗರ
ಪಾಲಿಕೆಗೆ ಹೈಕೋರ್ಟ್ ನಿರ್ದೇಶಿಸಿದೆ. ನಗರದಲ್ಲಿರುವ ಮಂತ್ರಿ ಮಾಲ್ ಕಟ್ಟಡ ಬೈಲಾಗಳನ್ನು ಉಲ್ಲಂಘಿಸಿದ್ದು, ತಪ್ಪಿತಸ್ಥ ಅಧಿಕಾರಿ ಮತ್ತು ಮಂತ್ರಿ ಡೆವಲಪರ್ಸ್ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಧವನೇಶನ್ ಎಂಬುವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿದ್ದರು. ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾ. ಎಸ್.ಕೆ. ಮುಖರ್ಜಿ ಮತ್ತು ನ್ಯಾ. ಬಿ.ವಿ.ನಾಗರತ್ನ ಅವರಿದ್ದ ವಿಭಾಗೀಯ ಪೀಠ, ಬೈಲಾ ಉಲ್ಲಂಘನೆಗೆ ಸಂಬಂಧಿಸಿದಂತೆ ಹೈಕೋರ್ಟ್ ಈ ಹಂತದಲ್ಲಿ ಮಧ್ಯೆ ಪ್ರವೇಶಿಸಲು ಸಾಧ್ಯವಿಲ್ಲ. ಈ ಕುರಿತು  ಅರ್ಜಿದಾರರ ಮತ್ತು ಪ್ರತಿವಾದಿಗಳು ವಾದವನ್ನು ಕೂಲಂಕುಷವಾಗಿ ಪರಿಗಣಿಸಿ ಸೂತ್ಕ ಆದೇಶ ಹೊರಡಿಸುವಂತೆ  ಬಿಬಿಎಂಪಿಗೆ ಸೂಚಿಸಿ ಅರ್ಜಿ ಇತ್ಯರ್ಥಪಡಿಸಿದೆ. ಕೆರೆಗೆ ಸೇರಿದ್ದ ಒಂದು ಎಕರೆ ಜಾಗದಲ್ಲಿ ಮಾಲ್ ನಿರ್ಮಿಸಿರುವ ಮಂತ್ರಿ ಸಂಸ್ಥೆ ಇದಕ್ಕಾಗಿ ಕಟ್ಟಡದ ಬೈಲಾ ಉಲ್ಲಂಘಿಸಿದೆ. ಪಾಲಿಕೆ ಮತ್ತು ನಗಾರಾಭಿವೃದ್ಧಿ ಇಲಾಖೆ ಮಂಜೂರು ಮಾಡಿದ್ದ ನಕ್ಷೆ ಕೂಡ ಮಂತ್ರಿ ಸಂಸ್ಥೆ ಉಲ್ಲಂಘಿಸಿದೆ. ಅವಶ್ಯವಿರುವ ಪಾರ್ಕಿಂಗ್ ಸೌಲಭ್ಯವನ್ನು ಸಹ ಕಲ್ಪಿಸದೆ ಕಾನೂನುಬಾಹಿರವಾಗಿ ಕಟ್ಟಡ ನಿರ್ಮಾಣ ಮಾಡಿದೆ. ವಾಸ್ತವ ಅರಿತು ಕೊಳ್ಳದೇ ನಗರಾಭಿವೃದ್ಧಿ ಜಂಟಿ ನಿರ್ದೇಶರು ಮಾಲ್ ನಿರ್ಮಾಣಕ್ಕೆ ಅನುಮತಿ ನೀಡಿದ್ದಾರೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿತ್ತು.
ಮಾಲ್‍ನಿಂದ ಟ್ರಾಫಿಕ್ ಕಿರಿಕಿರಿ: ಈ ಮಧ್ಯೆ ವಕೀಲ ಎನ್.ಪಿ. ಅಮೃತೇಶ್ ಎಂಬುವರು ಮಂತ್ರಿ ಮಾಲ್‍ನಿಂದ ಟ್ರಾಫಿಕ್ ಸಮಸ್ಯೆ ಉದ್ಭವಿಸಿದ್ದು ಅದಕ್ಕೆ ಸೂಕ್ತ ಪರಿಹಾರ ನೀಡುವಂತೆ ಕೋರಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸ್ದಿದರು. ವಿಚಾರಣೆ ನಡೆಸಿದ ವಿಭಾಗೀಯ ಪೀಠ, ಸಂಬಂಧಪಟ್ಟ ಆಯುಕ್ತರಿಗೆ ಮನವಿ ನೀಡಿ. ಅವರು ಸಮಸ್ಯೆ ಬಗೆಹರಿಸಲು ವಿಫಲವಾದಲ್ಲಿ ಹೈಕೋರ್ಟ್‍ಗೆ ಅರ್ಜಿ ದಾಖಲಿಸಿ ಎಂದು ತಿಳಿಸಿ ಅರ್ಜಿ ಇತ್ಯರ್ಥಪಡಿಸಿದೆ. ವಿಚಾರಣೆ ವೇಳೆ ಅರ್ಜಿದಾರ ಅಮೃತೇಶ್ ವಾದ ಮಂಡಿಸಿ, ಮಲ್ಲೇಶ್ವರದ ಪೊಲೀಸ್ ಠಾಣೆಯನ್ನು ಮಂತ್ರಿ ಡೆವಲಪರ್ಸ್ ಸಂಸ್ಥೆಯ ನಿರ್ಮಾಣ ಮಾಡಿದೆ. ಆದ
ಕಾರಣ ಅವರ ವಿರುದ್ಧ ಪೊಲೀಸರು ಮಂತ್ರಿ ಡೆವಲೆಪರ್ಸ್ ಸಂಸ್ಥೆ ವಿರುದ ಯಾವುದೇ ಕ್ರಮ ಜರುಗಿಸಲು ಮುಂದಾಗುತ್ತಿಲ್ಲ ಎಂದು ಆರೋಪಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT