ಜಿಲ್ಲಾ ಸುದ್ದಿ

ದಿಂಗಾಲೇಶ್ವರ ಶ್ರೀ ಬೆಂಬಲಿಗರಿಂದ ಹಲ್ಲೆಗೊಳಗಾಗಿದ್ದ ಮಹಾಂತಪ್ಪ ಸಾವು

Sumana Upadhyaya

ಹುಬ್ಬಳ್ಳಿ:  ಬಾಲೆಹೊಸೂರ ದಿಂಗಾಲೇಶ್ವರ ಸ್ವಾಮೀಜಿ ಮತ್ತವರ ಬೆಂಬಲಿಗರಿಂದ ಹಲ್ಲೆಗೊಳಗಾಗಿ ಗಂಭೀರವಾಗಿ ಗಾಯಗೊಂಡು ಹುಬ್ಬಳ್ಳಿಯ ಬಾಲಾಜಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ  ಬಾಲೆಹೊಸೂರಿನ ಮಹಾಂತಪ್ಪ ಹನುಮಂತಪ್ಪ ಗುಡಗೇರಿ(60) ಚಿಕಿತ್ಸೆ ಫಲಿಸದೆ ಬುಧವಾರ ಸಂಜೆ ಮೃತಪಟ್ಟಿದ್ದಾರೆ.

ಬಾಲೆ ಹೊಸೂರಿನಲ್ಲಿ ಎರಡು ಗುಂಪುಗಳ ಮಧ್ಯೆ ನಡೆದ ಘರ್ಷಣೆಯಲ್ಲಿ ಮಹಾಂತಪ್ಪ ಗಂಭೀರವಾಗಿ ಗಾಯಗೊಂಡಿದ್ದಾರೆ. ಬಳಿಕ ಅವರನ್ನು ಹುಬ್ಬಳ್ಳಿಯ ಕಿಮ್ಸ್ ಗೆ ದಾಖಲಿಸಲಾಗಿತ್ತು. ಎದೆಯ ಭಾಗಕ್ಕೆ ಬಲವಾಗಿ ಪೆಟ್ಟು ಬಿದ್ದಿರುವ ಕಾರಣ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಇಲ್ಲಿನ ಬಾಲಾಜಿ ಆಸ್ಪತ್ರೆಗೆ  ಸ್ಥಳಾಂತರಿಸಲಾಗಿತ್ತು. ಆದರೆ  ಚಿಕಿತ್ಸೆ ಫಲಿಸದೆ ಮಹಾಂತಪ್ಪ  ಮೃತಪಟ್ಟಿದ್ದಾರೆ.

SCROLL FOR NEXT