ಹಳೇ ಸರಗಳ್ಳತನ ಆರೋಪಿಗಳ ಪರೇಡ್ (ಸಾಂದರ್ಭಿಕ ಚಿತ್ರ) 
ಜಿಲ್ಲಾ ಸುದ್ದಿ

ಹಳೇ ಸರಗಳ್ಳತನ ಆರೋಪಿಗಳ ಪರೇಡ್

ಸರಗಳ್ಳರ ಅಟಾಟೋಪ ನಿಯಂತ್ರಣಕ್ಕೆ ಕಸರತ್ತು ಮುಂದುವರೆಸಿರುವ ಕೇಂದ್ರ ವಿಭಾಗದ ಪೊಲೀಸರು ಬುಧವಾರ ಸರಗಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದ ಹಳೇ ಆರೋಪಿಗಳನ್ನು ಠಾಣೆಗಳಿಗೆ ಕರೆಸಿ ಬುದ್ಧಿ ಮಾತು ಹೇಳಿ ಕಳುಹಿಸಿದರು...

ಬೆಂಗಳೂರು: ಸರಗಳ್ಳರ ಅಟಾಟೋಪ ನಿಯಂತ್ರಣಕ್ಕೆ ಕಸರತ್ತು ಮುಂದುವರೆಸಿರುವ ಕೇಂದ್ರ ವಿಭಾಗದ ಪೊಲೀಸರು ಬುಧವಾರ ಸರಗಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದ ಹಳೇ ಆರೋಪಿಗಳನ್ನು ಠಾಣೆಗಳಿಗೆ ಕರೆಸಿ ಬುದ್ಧಿ ಮಾತು ಹೇಳಿ ಕಳುಹಿಸಿದರು.

ಕಳೆದ ಮೂರು ವರ್ಷಗಳ ಅವಧಿಯಲ್ಲಿ ನಗರ ವ್ಯಾಪ್ತಿಯಲ್ಲಿ ಸರಗಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿ ಪೊಲೀಸರಿಂದ ಬಂಧಿತರಾಗಿ ಬಳಿಕ ಜಾಮೀನು ಪಡೆದು ಹೊರ ಬಂದಿದ್ದ ಸುಮಾರು 71 ಮಂದಿಯನ್ನು ಕಬ್ಬನ್ ಪಾರ್ಕ್ ಠಾಣೆಗೆ ಕರೆಸಿ ಬುದ್ಧಿ ಮಾತು ಹೇಳಿ, ಎಚ್ಚರಿಕೆ ನೀಡಿ ಕಳುಹಿಸಿದ್ದಾರೆ. ಇತ್ತೀಚೆಗೆ ನಗರದಲ್ಲಿ ನಡೆದ ಸರಣಿ ಸರಗಳ್ಳತನ ಪ್ರಕರಣ ಹಿನ್ನೆಲೆಯಲ್ಲಿ ಹಳೆ ಸರಗಳ್ಳತನ ಪ್ರಕರಣದ ಆರೋಪಿಗಳನ್ನು ಠಾಣೆಗೆ ಕರೆಸಿ ಪರೇಡ್ ನಡೆಸಲಾಯಿತು.

ಆರೋಪಿಗಳು, ಸದ್ಯ ನಡೆಸುತ್ತಿರುವ ಚಟುವಟಿಕೆಗಳು, ವೃತ್ತಿ ಹಾಗೂ ಆರ್ಥಿಕ ವ್ಯವಹಾರ ಸೇರಿದಂತೆ ಅವರ ಎಲ್ಲಾ ಮಾಹಿತಿ ಸಂಗ್ರಹಿಸಲಾಗಿದೆ. ಮುಂದಿನ ದಿನಗಳಲ್ಲಿ ಉತ್ತಮ ನಾಗರೀಕರಾಗಿ ಜೀವನ ನಡೆಸಬೇಕು. ಮತ್ತೆ ಸರಗಳ್ಳತನ ಸೇರಿದಂತೆ ಯಾವುದೇ ಅಪರಾಧ ಪ್ರಕರಣಗಳಲ್ಲಿ ಭಾಗಿಯಾದರೆ, ಕಠಿಣ ಕ್ರಮ ಎದುರಿಸಬೇಕಾಗುತ್ತದೆ ಎನ್ನುವ ಎಚ್ಚರಿಕೆ ನೀಡಲಾಗಿದೆ ಎಂದು ಕೇಂದ್ರ ವಿಭಾಗ ಡಿಸಿಪಿ ಸಂದೀಪ್ ಪಾಟೀಲ್ ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT