ಹಳೇ ಸರಗಳ್ಳತನ ಆರೋಪಿಗಳ ಪರೇಡ್ (ಸಾಂದರ್ಭಿಕ ಚಿತ್ರ) 
ಜಿಲ್ಲಾ ಸುದ್ದಿ

ಹಳೇ ಸರಗಳ್ಳತನ ಆರೋಪಿಗಳ ಪರೇಡ್

ಸರಗಳ್ಳರ ಅಟಾಟೋಪ ನಿಯಂತ್ರಣಕ್ಕೆ ಕಸರತ್ತು ಮುಂದುವರೆಸಿರುವ ಕೇಂದ್ರ ವಿಭಾಗದ ಪೊಲೀಸರು ಬುಧವಾರ ಸರಗಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದ ಹಳೇ ಆರೋಪಿಗಳನ್ನು ಠಾಣೆಗಳಿಗೆ ಕರೆಸಿ ಬುದ್ಧಿ ಮಾತು ಹೇಳಿ ಕಳುಹಿಸಿದರು...

ಬೆಂಗಳೂರು: ಸರಗಳ್ಳರ ಅಟಾಟೋಪ ನಿಯಂತ್ರಣಕ್ಕೆ ಕಸರತ್ತು ಮುಂದುವರೆಸಿರುವ ಕೇಂದ್ರ ವಿಭಾಗದ ಪೊಲೀಸರು ಬುಧವಾರ ಸರಗಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದ ಹಳೇ ಆರೋಪಿಗಳನ್ನು ಠಾಣೆಗಳಿಗೆ ಕರೆಸಿ ಬುದ್ಧಿ ಮಾತು ಹೇಳಿ ಕಳುಹಿಸಿದರು.

ಕಳೆದ ಮೂರು ವರ್ಷಗಳ ಅವಧಿಯಲ್ಲಿ ನಗರ ವ್ಯಾಪ್ತಿಯಲ್ಲಿ ಸರಗಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿ ಪೊಲೀಸರಿಂದ ಬಂಧಿತರಾಗಿ ಬಳಿಕ ಜಾಮೀನು ಪಡೆದು ಹೊರ ಬಂದಿದ್ದ ಸುಮಾರು 71 ಮಂದಿಯನ್ನು ಕಬ್ಬನ್ ಪಾರ್ಕ್ ಠಾಣೆಗೆ ಕರೆಸಿ ಬುದ್ಧಿ ಮಾತು ಹೇಳಿ, ಎಚ್ಚರಿಕೆ ನೀಡಿ ಕಳುಹಿಸಿದ್ದಾರೆ. ಇತ್ತೀಚೆಗೆ ನಗರದಲ್ಲಿ ನಡೆದ ಸರಣಿ ಸರಗಳ್ಳತನ ಪ್ರಕರಣ ಹಿನ್ನೆಲೆಯಲ್ಲಿ ಹಳೆ ಸರಗಳ್ಳತನ ಪ್ರಕರಣದ ಆರೋಪಿಗಳನ್ನು ಠಾಣೆಗೆ ಕರೆಸಿ ಪರೇಡ್ ನಡೆಸಲಾಯಿತು.

ಆರೋಪಿಗಳು, ಸದ್ಯ ನಡೆಸುತ್ತಿರುವ ಚಟುವಟಿಕೆಗಳು, ವೃತ್ತಿ ಹಾಗೂ ಆರ್ಥಿಕ ವ್ಯವಹಾರ ಸೇರಿದಂತೆ ಅವರ ಎಲ್ಲಾ ಮಾಹಿತಿ ಸಂಗ್ರಹಿಸಲಾಗಿದೆ. ಮುಂದಿನ ದಿನಗಳಲ್ಲಿ ಉತ್ತಮ ನಾಗರೀಕರಾಗಿ ಜೀವನ ನಡೆಸಬೇಕು. ಮತ್ತೆ ಸರಗಳ್ಳತನ ಸೇರಿದಂತೆ ಯಾವುದೇ ಅಪರಾಧ ಪ್ರಕರಣಗಳಲ್ಲಿ ಭಾಗಿಯಾದರೆ, ಕಠಿಣ ಕ್ರಮ ಎದುರಿಸಬೇಕಾಗುತ್ತದೆ ಎನ್ನುವ ಎಚ್ಚರಿಕೆ ನೀಡಲಾಗಿದೆ ಎಂದು ಕೇಂದ್ರ ವಿಭಾಗ ಡಿಸಿಪಿ ಸಂದೀಪ್ ಪಾಟೀಲ್ ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT