ಹಳೇ ಸರಗಳ್ಳತನ ಆರೋಪಿಗಳ ಪರೇಡ್ (ಸಾಂದರ್ಭಿಕ ಚಿತ್ರ) 
ಜಿಲ್ಲಾ ಸುದ್ದಿ

ಹಳೇ ಸರಗಳ್ಳತನ ಆರೋಪಿಗಳ ಪರೇಡ್

ಸರಗಳ್ಳರ ಅಟಾಟೋಪ ನಿಯಂತ್ರಣಕ್ಕೆ ಕಸರತ್ತು ಮುಂದುವರೆಸಿರುವ ಕೇಂದ್ರ ವಿಭಾಗದ ಪೊಲೀಸರು ಬುಧವಾರ ಸರಗಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದ ಹಳೇ ಆರೋಪಿಗಳನ್ನು ಠಾಣೆಗಳಿಗೆ ಕರೆಸಿ ಬುದ್ಧಿ ಮಾತು ಹೇಳಿ ಕಳುಹಿಸಿದರು...

ಬೆಂಗಳೂರು: ಸರಗಳ್ಳರ ಅಟಾಟೋಪ ನಿಯಂತ್ರಣಕ್ಕೆ ಕಸರತ್ತು ಮುಂದುವರೆಸಿರುವ ಕೇಂದ್ರ ವಿಭಾಗದ ಪೊಲೀಸರು ಬುಧವಾರ ಸರಗಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದ ಹಳೇ ಆರೋಪಿಗಳನ್ನು ಠಾಣೆಗಳಿಗೆ ಕರೆಸಿ ಬುದ್ಧಿ ಮಾತು ಹೇಳಿ ಕಳುಹಿಸಿದರು.

ಕಳೆದ ಮೂರು ವರ್ಷಗಳ ಅವಧಿಯಲ್ಲಿ ನಗರ ವ್ಯಾಪ್ತಿಯಲ್ಲಿ ಸರಗಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿ ಪೊಲೀಸರಿಂದ ಬಂಧಿತರಾಗಿ ಬಳಿಕ ಜಾಮೀನು ಪಡೆದು ಹೊರ ಬಂದಿದ್ದ ಸುಮಾರು 71 ಮಂದಿಯನ್ನು ಕಬ್ಬನ್ ಪಾರ್ಕ್ ಠಾಣೆಗೆ ಕರೆಸಿ ಬುದ್ಧಿ ಮಾತು ಹೇಳಿ, ಎಚ್ಚರಿಕೆ ನೀಡಿ ಕಳುಹಿಸಿದ್ದಾರೆ. ಇತ್ತೀಚೆಗೆ ನಗರದಲ್ಲಿ ನಡೆದ ಸರಣಿ ಸರಗಳ್ಳತನ ಪ್ರಕರಣ ಹಿನ್ನೆಲೆಯಲ್ಲಿ ಹಳೆ ಸರಗಳ್ಳತನ ಪ್ರಕರಣದ ಆರೋಪಿಗಳನ್ನು ಠಾಣೆಗೆ ಕರೆಸಿ ಪರೇಡ್ ನಡೆಸಲಾಯಿತು.

ಆರೋಪಿಗಳು, ಸದ್ಯ ನಡೆಸುತ್ತಿರುವ ಚಟುವಟಿಕೆಗಳು, ವೃತ್ತಿ ಹಾಗೂ ಆರ್ಥಿಕ ವ್ಯವಹಾರ ಸೇರಿದಂತೆ ಅವರ ಎಲ್ಲಾ ಮಾಹಿತಿ ಸಂಗ್ರಹಿಸಲಾಗಿದೆ. ಮುಂದಿನ ದಿನಗಳಲ್ಲಿ ಉತ್ತಮ ನಾಗರೀಕರಾಗಿ ಜೀವನ ನಡೆಸಬೇಕು. ಮತ್ತೆ ಸರಗಳ್ಳತನ ಸೇರಿದಂತೆ ಯಾವುದೇ ಅಪರಾಧ ಪ್ರಕರಣಗಳಲ್ಲಿ ಭಾಗಿಯಾದರೆ, ಕಠಿಣ ಕ್ರಮ ಎದುರಿಸಬೇಕಾಗುತ್ತದೆ ಎನ್ನುವ ಎಚ್ಚರಿಕೆ ನೀಡಲಾಗಿದೆ ಎಂದು ಕೇಂದ್ರ ವಿಭಾಗ ಡಿಸಿಪಿ ಸಂದೀಪ್ ಪಾಟೀಲ್ ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel