ಪತ್ರಿಕಾಗೋಷ್ಠಿಯಲ್ಲಿ ವಿಧಾನ ಪರಿಷತ್ ಸದಸ್ಯೆ ಮೋಟಮ್ಮ ಮತ್ತಿತರರು ಹಾಜರಿದ್ದರು. 
ಜಿಲ್ಲಾ ಸುದ್ದಿ

ಅಶ್ವಿನಿ ಅಂಗಡಿ ಸಾಧನೆ ಶ್ಲಾಘಿಸಿದ ಮೋಟಮ್ಮ

ದುರ್ಬಲ, ವಿಕಲಚೇತನ ಹಾಗೂ ಅಂಧ ಮಕ್ಕಳ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಕನ್ನಡದ ಕುವರಿ ಕುಮಾರಿ ಅಶ್ವಿನಿ ಅಂಗಡಿ ಅವರಿಗೆ ವಿಶ್ವ ಮಟ್ಟದಲ್ಲಿ ಮನ್ನಣೆ...

ಬೆಂಗಳೂರು: ದುರ್ಬಲ, ವಿಕಲಚೇತನ ಹಾಗೂ ಅಂಧ ಮಕ್ಕಳ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಕನ್ನಡದ ಕುವರಿ ಕುಮಾರಿ ಅಶ್ವಿನಿ ಅಂಗಡಿ ಅವರಿಗೆ ವಿಶ್ವ ಮಟ್ಟದಲ್ಲಿ ಮನ್ನಣೆ ಸಿಕ್ಕಿರುವುದು ಶ್ಲಾಘನೀಯ ಎಂದು ವಿಧಾನ ಪರಿಷತ್ ಸದಸ್ಯೆ ಮೋಟಮ್ಮ ಹೇಳಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಶ್ವಿನಿ ಅಂಗಡಿ ಅವರು ಬೆಂಗಳೂರಿನಲ್ಲಿ ಬೆಳಕು ಅಕಾಡೆಮಿ ಸ್ಥಾಪಿಸಿ ಅಂಧ ಮಕ್ಕಳಿಗೆ ಉಚಿತ ವಸತಿ ಶಾಲೆ ಸೌಲಭ್ಯ ಕಲ್ಪಿಸಿದ್ದಾರೆ. ಅವರಿಗೆ ದೇಶ-ವಿದೇಶಗಳ ಬಿರುದು ಬಾವಲಿಗಳು, ಪುರಸ್ಕಾರಗಳು ದೊರೆತಿರುವುದು ಕನ್ನಡಿಗರಿಗೆ ಹೆಮ್ಮೆಯ ವಿಷಯವಾಗಿದೆ ಎಂದು ತಿಳಿಸಿದ್ದಾರೆ.

ಅಶ್ವಿನಿ ಅಂಗಡಿಯವರಿಗೆ ಲಂಡನ್ ಮಹಾರಾಣಿ ಎಲಿಜಬೆತ್ ಅವರ ಡೈಮಂಡ್ ಜುಬಿಲಿ ಟ್ರಸ್ಟ್ ನೀಡುವ  ಯಂಗ್ ಲೀಡರ್ ಪ್ರಶಸ್ತಿ ಲಭಿಸಿದೆ. ಇದೇ 22ರಂದು ಬಂಕಿಂಗ್ಹ್ಯಾಮ್ ಅರಮನೆಯಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ ಎಂದ ಅವರು, ವಿಶ್ವದ 60 ಯುವ ಪ್ರತಿಭೆಗಳಿಗೆ ಯಂಗ್ ಲೀಡರ್ ಪ್ರಶಸ್ತಿ ಲಭಿಸಿದ್ದು, ಅದರಲ್ಲಿ ಅಶ್ವಿನಿ ಕೂಡ ಒಬ್ಬಳಾಗಿರುವುದು ಖುಷಿಯ ಸಂಗತಿ. ಅಶ್ವಿನಿ ಅಂಗಡಿ ಮಾದರಿಯಲ್ಲೇ ಎಲ್ಲಾ ಅಂಗವಿಕಲರು ಕುಗ್ಗದೇ ಸಾಧನೆಯತ್ತ ಮುನ್ನಡೆಯಬೇಕು ಎಂದು ಸಲಹೆ ನೀಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

ಡೆವಿಲ್‌' ಸಿನಿಮಾದ 'ಇದ್ರೆ ನೆಮ್ಮದಿಯಾಗಿ ಇರಬೇಕು' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT