ಬೆಂಗಳೂರು ರೈಲ್ವೆ ನಿಲ್ದಾಣದ ನೂತನ ಕಟ್ಟಡವನ್ನು ಕೇಂದ್ರ ರೈಲ್ವೆ ಸಚಿವ ಸುರೇಶ್ ಪ್ರಭು ಉದ್ಘಾಟಿಸಿದರು 
ಜಿಲ್ಲಾ ಸುದ್ದಿ

ಬರಲಿದೆ ಸಬ್ ಅರ್ಬನ್ ರೈಲು

ಬೆಂಗಳೂರು ಉಪನಗರ ರೈಲು ಸಂಚಾರ ವ್ಯವಸ್ಥೆಯ ಕಾಮಗಾರಿ ಆರಂಭಕ್ಕೆ ಸಿದ್ಧತೆ ನಡೆದಿದೆ ಎಂದು ಕೇಂದ್ರ ರೈಲ್ವೆ ಸಚಿವ ಪ್ರಭಾಕರ್ ಪ್ರಭು ತಿಳಿಸಿದ್ದಾರೆ...

ಬೆಂಗಳೂರು: ಬೆಂಗಳೂರು ಉಪನಗರ ರೈಲು ಸಂಚಾರ ವ್ಯವಸ್ಥೆಯ ಕಾಮಗಾರಿ ಆರಂಭಕ್ಕೆ ಸಿದ್ಧತೆ ನಡೆದಿದೆ ಎಂದು ಕೇಂದ್ರ ರೈಲ್ವೆ ಸಚಿವ ಪ್ರಭಾಕರ್ ಪ್ರಭು ತಿಳಿಸಿದ್ದಾರೆ.

ಉಪ ನಗರ ರೈಲು ಯೋಜನೆ ಬಗ್ಗೆ ಕೇಂದ್ರ ಹಣಕಾಸು ಸಚಿವರ ಜತೆ ಚರ್ಚಿಸಿ, ರೈಲ್ವೆ ತಾಂತ್ರಿಕ ಸಂಸ್ಥೆಗಳಿಂದ ಯೋಜನೆಯ ಸಲಹೆ ಪಡೆಯಲಾಗುತ್ತಿದೆ ಎಂದು ಶನಿವಾರ ನಗರ ರೈಲು ನಿಲ್ದಾಣದ ಎರಡನೇ ಪ್ರವೇಶ ದ್ವಾರದ ಬಳಿ ನೂತನ ಟಿಕೆಟ್ ಕೌಂಟರ್, ನೂತನ ಕಟ್ಟಡ ಉದ್ಘಾಟಿಸಿ ಅವರು ಮಾತನಾಡಿದರು.

ಸಬ್ ಅರ್ಬನ್ ರೈಲಿಗೆ ಒತ್ತು: ಸಂಚಾರ ದಟ್ಟಣೆ, ವಾಹನಗಳ ಹೆಚ್ಚಳದಿಂದಾಗಿ ಬೆಂಗಳೂರು ನಗರದಲ್ಲಿ ತೀವ್ರ ಸಮಸ್ಯೆಗಳು ಉಂಟಾಗುತ್ತಿವೆ. ಇದಕ್ಕೆ ಸಮಗ್ರ ಸಮೂಹ ಸಾರಿಗೆಯಾಗಿರುವ ಉಹ ನಗರ ರೈಲು ಸಂಚಾರವೇ (ಸಬ್ ಅರ್ಬನ್) ಪರಿಹಾರ. ಹಲವು ವರ್ಷಗಳ ಬೇಡಿಕೆಯನ್ನು ಆದಷ್ಟು ಬೇಗ ಆದ್ಯತೆ ಮೇಲೆ ಈಡೇರಿಸಲಾಗುವುದು. ಈ ಮೂಲಕ ಬೆಂಗಳೂರಿಗರ ಕನಸು ನನಸಾಗಿಸಲು ಯತ್ನಿಸಲಾಗುವುದು.

ಮುಂಬೈಗಿಂತಲೂ ಉನ್ನತ ದರ್ಜೆಯ ಆಧುನಿಕ ತಂತ್ರಜ್ಞಾನ, ವೇಗ ಒಳಗೊಂಡ ಸಮೂಹ ಸಾರಿಗೆ ವ್ಯವಸ್ಥೆ ಕಲ್ಪಿಸಲು ರೈಲ್ವೆ ಇಲಾಖೆ ಬದ್ಧವಾಗಿದೆ. ಆದರೆ, ವಿದ್ಯುತ್ ಚಾಲಿತ ಕೋಚ್ ಗಳು ಸಂಚರಿಸುವ ಕಾರಣ ನಗರದಲ್ಲಿ ವಿದ್ಯುತ್ ಚಾಲಿತ ರೈಲು ಎಂಜಿನ್ ನಿರ್ವಹಣೆಗೆ ಯಾರ್ಡ್ ಗಳ ಕೊರತೆ, ಪ್ಲಾಟ್ ಫಾರ್ಮ್ ಗಳಲ್ಲಿ ಬದಲಾವಣೆ, ಹಳಿ ವಿದ್ಯುತ್ತೀಕರಣ ಸೇರಿದಂತೆ ಹಲವು ಸಮಸ್ಯೆಗಳಿವೆ. ಹೀಗಾಗಿ ಈ ಬಗ್ಗೆ ಮತ್ತೊಮ್ಮೆ ಚರ್ಚೆ ನಡೆಸಬೇಕಿದೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಂಬೈ: ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ, ಗಣ್ಯರ ಕಂಬನಿ

US-Iran Peace Talks: ಇಸ್ಲಾಮಾಬಾದ್‌ನಲ್ಲಿ 21 ಗಂಟೆ ಮಾತುಕತೆಯಾದ್ರು, ಯುಎಸ್- ಇರಾನ್ ಶಾಂತಿ ಒಪ್ಪಂದ ವಿಫಲ! ಕಾರಣಗಳೇನು?

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಕೊಡಗು: 100 ಎಕರೆ ಅರಣ್ಯ ವಲಯದಲ್ಲಿ ಬೌದ್ಧಧರ್ಮ ಜೊತೆಗೆ ಪರಿಸರ ಸಂರಕ್ಷಣೆ ಮಾಡುತ್ತಿರುವ 'ಕರ್ಮ ಕರ್ಗ್ಯು ಮಠ!

SCROLL FOR NEXT