ಅಪಘಾತ (ಸಾಂದರ್ಭಿಕ ಚಿತ್ರ) 
ಜಿಲ್ಲಾ ಸುದ್ದಿ

ಮಗನ ವೇಗಕ್ಕೆ ಬಲಿಯಾಯ್ತು ತಾಯಿ ಜೀವ

ವೇಗವಾಗಿ ಬೈಕ್ ಓಡಿಸುತ್ತಿದ್ದ ಮಗ ರಸ್ತೆ ಉಬ್ಬನ್ನು ಗಮನಿಸದೇ ಆಯತಪ್ಪಿ ಬಿದ್ದ ಪರಿಣಾಮ ಹಿಂಬದಿಯಲ್ಲಿ ಕುಳಿತಿದ್ದ ಆತನ ತಾಯಿ ಪ್ರಾಣ ಬಿಟ್ಟ ಘಟನೆ ಬೆಂಗಳೂರಿನ ವೈಟ್ ಫೀಲ್ಡ್ ನಲ್ಲಿ ನಡೆದಿದೆ...

ಬೆಂಗಳೂರು: ವೇಗವಾಗಿ ಬೈಕ್ ಓಡಿಸುತ್ತಿದ್ದ ಮಗ ರಸ್ತೆ ಉಬ್ಬನ್ನು ಗಮನಿಸದೇ ಆಯತಪ್ಪಿ ಬಿದ್ದ ಪರಿಣಾಮ ಹಿಂಬದಿಯಲ್ಲಿ ಕುಳಿತಿದ್ದ ಆತನ ತಾಯಿ ಪ್ರಾಣ ಬಿಟ್ಟ ಘಟನೆ ಬೆಂಗಳೂರಿನ ವೈಟ್ ಫೀಲ್ಡ್ ನಲ್ಲಿ ನಡೆದಿದೆ.

ವೈಟ್‌ಫೀಲ್ಡ್‌ನ ವಿನಾಯಕನಗರದ ಬಸ್‌ನಿಲ್ದಾಣದ ಬಳಿ ವೇಗವಾಗಿ ಚಲಿಸುತ್ತಿದ್ದ ಬೈಕ್ ಸವಾರ ರಸ್ತೆ ಉಬ್ಬನ್ನು ಗಮನಿಸದೇ ಬೈಕ್ ಚಲಾಯಿಸಿದ್ದರಿಂದ ಹಿಂಬದಿ ಸೀಟಿನಲ್ಲಿ ಕುಳಿತಿದ್ದ ಆತನ ತಾಯಿ ಆಯತಪ್ಪಿ ಕೆಳಕ್ಕೆ ಬಿದಿದ್ದಾರೆ. ಬಿದ್ದ ರಭಸಕ್ಕೆ ಆಕೆಯ ತಲೆಗೆ ತೀವ್ರ ಪೆಟ್ಟಾಗಿದ್ದು, ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಆಕೆ ಮೃತಪಟ್ಟಿದ್ದಾರೆ.

ಗುಂಜೂರಿನ ಉಮಾದೇವಿ (50 ವರ್ಷ) ಎಂಬುವವರೇ ಮೃತ ದುರ್ದೈವಿಗಳಾಗಿದ್ದು, ತಮ್ಮ ಪುತ್ರ ರವೀಂದ್ರನೊಂದಿಗೆ ಹೀರೋ ಹೊಂಡಾ ಬೈಕಿನಲ್ಲಿ ಕುಳಿತು ಆಕೆ ಗುಂಜೂರಿನಲ್ಲಿರುವ ಮನೆಗೆ ತೆರಳುತ್ತಿದ್ದರು. ವರ್ತೂರು-ಗುಂಜೂರು ರಸ್ತೆಯ ವಿನಾಯಕನಗರದ ಬಸ್‌ನಿಲ್ದಾಣದ ಬಳಿ ಬರುತ್ತಿದ್ದ ವೇಳೆ ರಸ್ತೆಯಲ್ಲಿದ್ದ ಉಬ್ಬನ್ನು ಗಮನಿಸದ ರವೀಂದ್ರ ವೇಗವಾಗಿಯೇ ಬೈಕ್ ಚಲಾಯಿಸಿದ್ದಾನೆ. ಈ ವೇಳೆ ರವೀಂದ್ರ ಹಾಗೂ ಹಿಂಬದಿಯಲ್ಲಿದ್ದ ಉಮಾದೇವಿ ಇಬ್ಬರೂ ಆಯತಪ್ಪಿ ಕೆಳಗೆ ಬಿದಿದ್ದು, ಉಮಾದೇವಿ ಅವರ ತಲೆಗೆ ತೀವ್ರ ಪೆಟ್ಟಾಗಿದೆ. ರಕ್ತದ ಮಡುವಿನಲ್ಲಿ ಬಿದಿದ್ದ ಉಮಾದೇವಿ ಅವರನ್ನು ಕೂಡಲೇ ಸ್ಥಳೀಯರ ಸಹಾಯದಿಂದ ಸಮೀಪದ ಸಿಟಿ ಆಸ್ಪತ್ರೆಗೆ ದಾಖಲು ಮಾಡಲಾಯಿತಾದರೂ, ಚಿಕಿತ್ಸೆ ಫಲಕಾರಿಯಗದೇ ಅವರು ಮೃತಪಟ್ಟಿದ್ದಾರೆ.

ಗಾಯಗೊಂಡಿರುವ ಅವರ ಪುತ್ರ ರವೀಂದ್ರ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಹೆಲ್ಮೆಟ್ ಹಾಕಿದ್ದರಿಂದ ರವೀಂದ್ರ ಗಾಯಗೊಂಡರೂ ಪ್ರಾಣಾಪಾಯದಿಂದ ಪಾರಾದರು. ಇತ್ತೀಚಿಗಷ್ಟೇ ಇಂಜಿನಿಯರಿಂಗ್ ಮುಗಿಸಿದ್ದ ರವೀಂದ್ರ ಖಾಸಗಿ ಕಂಪನಿಯಲ್ಲಿ ಕೆಲಸಕ್ಕೆ ಹೋಗುತ್ತಿದ್ದರು ಎಂದು ತಿಳಿದುಬಂದಿದೆ. ಪ್ರಕರಣ ದಾಖಲಿಸಿಕೊಂಡಿರುವ ವೈಟ್‍ಫೀಲ್ಡ್ ಸಂಚಾರ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

SCROLL FOR NEXT