ಪತ್ರಿಕಾಗೋಷ್ಠಿಯಲ್ಲಿ ಡಿಎಸ್ ಎಸ್ ಅಧ್ಯಕ್ಷ ಎನ್ ಮೂರ್ತಿ ಮತ್ತಿತರರು ಹಾಜರಿದ್ದರು. 
ಜಿಲ್ಲಾ ಸುದ್ದಿ

ಜೂನ್ 29ರಂದು ಸರ್ಕಾರದ ವಿರುದ್ಧ ಬೆಳಗಾವಿಯಲ್ಲಿ ದಲಿತರ ಚಳವಳಿ

ಡಾ ಬಿಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮ ಮತ್ತು ವಾಲ್ಮಿಕಿ ಅಭಿವೃದ್ಧಿ ನಿಗಮಗಳ ಅಧಿಕಾರವನ್ನು ಮೊಟಕುಗೊಳಿಸಿರುವ ರಾಜ್ಯ ಸರ್ಕಾರದ...

ಬೆಂಗಳೂರು: ಡಾ ಬಿಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮ ಮತ್ತು ವಾಲ್ಮಿಕಿ ಅಭಿವೃದ್ಧಿ ನಿಗಮಗಳ ಅಧಿಕಾರವನ್ನು ಮೊಟಕುಗೊಳಿಸಿರುವ ರಾಜ್ಯ ಸರ್ಕಾರದ ನಿರ್ಧಾರದ ವಿರುದ್ಧ ಪ್ರತಿಭಟನೆ ನಡೆಸಲಾಗುವುದು ಎಂದು ದಲಿತ ಸಂಘಟನೆಗಳ ಸಮನ್ವಯ ಸಮತಿ ಮುಖಂಡ ಎನ್.ಮೂರ್ತಿ ಹೇಳಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಅಭಿವೃದ್ಧಿಗಳಿಗಾಗಿ ಈ ಎರಡು ನಿಗಮಗಳು ಕಾರ್ಯನಿರ್ವಹಿಸುತ್ತಿವೆ. ಆದರೆ, ರಾಜ್ಯ ಸರ್ಕಾರ ಇತ್ತೀಚೆಗಷ್ಟೆ ನಿಗಮದ ಅಧ್ಯಕ್ಷರಿಗೆ ಇರುವ ಅಧಿಕಾರವನ್ನು ಮೊಟಕುಗೊಳಿಸಿ, ದಲಿತರ ಮೇತೆ ದೌರ್ಜನ್ಯವೆಸಗುತ್ತಿದೆ ಎಂದು ಆರೋಪಿಸಿದ್ದಾರೆ.
ಸಿದ್ದರಾಮಯ್ಯನವರು ನಾನು ಒಬ್ಬ ದಲಿತ ಎಂದು ಹೇಳಿದರೇ ಹೊರತು, ದಲಿತರ ಅಭಿವೃದ್ಧಿ ಕೆಲಸಗಳನ್ನು ಮಾಡದೆ, ಅವರಿಗೆ ಇರುವಂತಹ ಸೌಲಭ್ಯಗಳನ್ನು ಕಸಿಯುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಸರ್ಕಾರದ ಧೋರಣೆ ವಿರುದ್ಧ ಎಲ್ಲಾ ದಲಿತ ಸಂಘಟನೆಗಳು ಒಟ್ಟಾಗಿ ಪ್ರತಿಭಟನೆ ನಡೆಸಲು ಮುಂದಾಗಿದೆ. ಅಧಿವೇಶನ ನಡೆಯುವ ಸಂದರ್ಭದಲ್ಲಿ ಜೂನ್ 29 ರಂದು ಸುವರ್ಣಸೌಧದ ಮುಂದೆ ಹಾಗೂ ಎಲ್ಲಾ ಜಿಲ್ಲೆಗಳಲ್ಲಿನ ಜಿಲ್ಲಾ ವ್ಯವಸ್ಥಾಪಕರ ಕಛೇರಿಗಳ ಮುಂದೆ ತಮಟೆ ಚಳವಳಿ ನಡೆಸಿ ಧರಣಿ ನಡೆಸಲಾಗುವುದು ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ: Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ; Turkey ಬೇಸ್ತು!

IPL 2026: MI vs RCB; ವಾಂಖೆಡೆ ಕ್ರೀಡಾಂಗಣದಲ್ಲಿ ಇತಿಹಾಸ ಬರೆದ ಬೆಂಗಳೂರು, ಅತ್ಯಧಿಕ ಮೊತ್ತ!

ನೀವೇನ್ ಮುಚ್ಚೋದು.. ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ; ಇರಾನ್ ಗೆ ಟ್ರಂಪ್ ಶಾಕ್!

SCROLL FOR NEXT