ಸಾಂದರ್ಭಿಕ ಚಿತ್ರ 
ಜಿಲ್ಲಾ ಸುದ್ದಿ

ವ್ಯಾಪಾರಿ ಕಿಡ್ನ್ಯಾಪ್ 30 ಲಕ್ಷದ ಚಿನ್ನ ಲೂಟಿ

ಪೊಲೀಸರ ಸೋಗಿನಲ್ಲಿ ಮೆಜೆಸ್ಟಿಕ್ ನಿಂದ ಚಿನ್ನದ ವ್ಯಾಪಾರಿಯೊಬ್ಬರನ್ನು ಅಪಹರಿಸಿದ ದುಷ್ಕರ್ಮಿಗಳು ಅವರಿಂದ 30 ಲಕ್ಷ ಮೌಲ್ಯದ ಸುಮಾರು ಒಂದೂವರೆ ಕೆ.ಜಿ.ಚಿನ್ನ ದೋಚಿದ್ದಾರೆ...

ಬೆಂಗಳೂರು: ಪೊಲೀಸರ ಸೋಗಿನಲ್ಲಿ ಮೆಜೆಸ್ಟಿಕ್ ನಿಂದ ಚಿನ್ನದ ವ್ಯಾಪಾರಿಯೊಬ್ಬರನ್ನು ಅಪಹರಿಸಿದ ದುಷ್ಕರ್ಮಿಗಳು ಅವರಿಂದ 30 ಲಕ್ಷ ಮೌಲ್ಯದ ಸುಮಾರು ಒಂದೂವರೆ ಕೆ.ಜಿ.ಚಿನ್ನ ದೋಚಿದ್ದಾರೆ. ಅಲ್ಲದೆ, ಚಿನ್ನ ದೋಚಿದ ದುಷ್ಕರ್ಮಿಗಳು ಅವರನ್ನು ಅಲ್ಲಿಯೇ ಬಿಟ್ಟು ಪರಾರಿಯಾಗಿದ್ದಾರೆ.

ಶುಕ್ರವಾರ ರಾತ್ರಿ ಈ ಘಟನೆ ನಡೆದಿದ್ದು, ಚಿಕ್ಕಪೇಟೆ ನಿವಾಸಿ ಧ್ರುವ ಕಿಶನ್ ಚಿನ್ನ ಕಳೆದುಕೊಂಡ ವ್ಯಾಪಾರಿ. ಈ ಸಂಬಂಧ ಉಪ್ಪಾರಪೇಟೆ ಠಾಣೆಯಲ್ಲಿ ದೂರು ದಾಖಲಾಗಿದೆ.

ಅವಿನ್ಯೂ ರಸ್ತೆಯಲ್ಲಿ ಚಿನ್ನದ ವ್ಯಾಪಾರ ಮಾಡುವ ಧ್ರುವ ಕಿಶನ್ ಜೂನ್ 19ರಂದು ನೆಲ್ಲೂರಿಗೆ ಹೋಗಿದ್ದರು. ಅದೇ ದಿನ ರಾತ್ರಿ ಅಲ್ಲಿಂದ ಹೊರಟ ಅವರು, ಜೂನ್ 20ರಂದು ಬೆಳಗ್ಗೆ ಬೆಂಗಳೂರಿಗೆ ಹಿಂತಿರುಗಿದ್ದರು. ಅಂದು ಬೆಳಗ್ಗೆ ಸುಮಾರು 8 ಗಂಟೆ ವೇಳೆಗೆ ಮೆಜೆಸ್ಟಿಕ್ ನಲ್ಲಿಳಿದ ಅವರು ನಡೆದುಕೊಂಡು ಮನೆಗೆ ಹೋಗುತ್ತಿದ್ದರು. ಈ ವೇಳೆ ಟೊಯೊಟಾ ಇನೋವಾ ಕಾರಿನಲ್ಲಿ ಬಂದ ಮೂವರು ದುಷ್ಕರ್ಮಿಗಳು ತಾವು ಪೊಲೀಸರೆಂದು ಹಾಗೂ ಪ್ರಕರಣವೊಂದರ ವಿಚಾರಣೆಗೆ ಕರೆದೊಯ್ಯುತ್ತಿರುವುದಾಗಿ ತಿಳಿಸಿದ್ದಾರೆ.

ಇದರಿಂದ ಹೆದರಿದ ಧ್ರುವ ಕಾರಿನಲ್ಲಿ ಕುಳಿತಿದ್ದಾರೆ. ಅವರನ್ನು ಬೆದರಿಸಿ, ನಗರದ ವಿವಿಧೆಡೆ ಸುಮಾರು 2 ಗಂಟೆ ಸುತ್ತಾಡಿಸಿ ನಂತರ ಹೊಸೂರು ರಸ್ತೆ ಮಾರ್ಗವಾಗಿ ಸಾಗಿದ ಆರೋಪಿಗಳು ಅಲ್ಲಿನ ಸೂಲಿಗೆರೆ ಬಳಿ ವಾಹನ ನಿಲ್ಲಿಸಿ ಅವರ ಬಳಿ ಇದ್ದ ಒಂದೂವರೆ ಕೆ.ಜಿ ಚಿನ್ನ ಹಾಗೂ ನಗದು ದೋಚಿದ್ದಾರೆ. ನಂತರ ತಾವೇ 500 ರೂಪಾಯಿ ನೀಡಿ ಮನೆಗೆ ಹೋಗುವಂತೆ ಸೂಚಿಸಿದ್ದಾರೆ. ಬಳಿಕ ಧ್ರುವ ತಮ್ಮ ಸಹೋದರನಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ಮನೆಗೆ ಬಂದು ಸಹೋದರನ ಜತೆ ಉಪ್ಪಾರಪೇಟೆ ಠಾಣೆಗೆ ಹೋಗಿ ದೂರು ದಾಖಲಿಸಿದ್ದಾರೆ.

ವ್ಯಾಪಾರಿಯಿಂದ ಆರೋಪಿಗಳು ಹಾಗೂ ಕಾರಿನ ಬಗ್ಗೆ ಮಾಹಿತಿ ಪಡೆಯಲಾಗಿದೆ. ಅವರು ಸಂಚರಿಸಿದ ನಗರದ ವಿವಿಧೆಡೆ ಸಿಸಿಟಿವಿ ಇದ್ದಲ್ಲಿ ಅವುಗಳನ್ನು ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು. ಪ್ರಕರಣದ ತನಿಖೆಗಾಗಿ ಎರಡು ವಿಶೇಷ ತಂಡಗಳನ್ನು ರಚಿಸಲಾಗಿದ್ದು, ಸದ್ಯದಲ್ಲೇ ಆರೋಪಿಗಳನ್ನು ಬಂಧಿಸಲಾಗುವುದು ಎಂದು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT