ಲೋಕಾಯುಕ್ತ ನ್ಯಾ.ವೈ.ಭಾಸ್ಕರ್ ರಾವ್ 
ಜಿಲ್ಲಾ ಸುದ್ದಿ

ಪ್ರತ್ಯೇಕ ಗುಪ್ತಚರಕ್ಕೆ ಲೋಕಾಯುಕ್ತರ ಪತ್ರ

ಬೆಂಗಳೂರು: ಭ್ರಷ್ಟರನ್ನು ಮಟ್ಟಹಾಕಲು ಹುಟ್ಟಿರುವ ಸಂಸ್ಥೆ ಲೋಕಾಯುಕ್ತದಲ್ಲೇ ಭ್ರಷ್ಟಾಚಾರ ಆರೋಪಗಳು ಕೇಳಿಬರುತ್ತಿವೆ. ಇದನ್ನು ಮಟ್ಟಹಾಕಲು ಲೋಕಾಯುಕ್ತ ನ್ಯಾ.ವೈ.ಭಾಸ್ಕರ್ ರಾವ್ ಮುಂದಾಗಿದ್ದು ಪ್ರತ್ಯೇಕ ಗುಪ್ತಚರ ದಳ ರಚನೆ ಮಾಡಲು ಸರ್ಕಾರಕ್ಕೆ ಪತ್ರ ಬರೆದಿದ್ದಾರೆ ಎಂದು ಭೂ ಕಬಳಿಕೆ ಹೋರಾಟ ಸಮಿತಿ ಅಧ್ಯಕ್ಷ ಎ.ಟಿ ರಾಮಸ್ವಾಮಿ ತಿಳಿಸಿದ್ದಾರೆ.

ನಗರದಲ್ಲಿರುವ ಕೆಲವು ಅಪಾರ್ಟ್ ಮೆಂಟ್ ಗಳು ಭೂ ಒತ್ತುವರಿ ಮಾಡಿದ್ದು ಈ ಎಲ್ಲವುಗಳ ಬಗ್ಗೆ ಮಾಹಿತಿ ನೀಡಲು ಲೋಕಾಯುಕ್ತರ ಬಳಿ ಹೋಗಿದ್ದಾಗ ಅವರು ಈ ವಿಷಯ ತಿಳಿಸಿದರು ಎಂದು ರಾಮಸ್ವಾಮಿ ಹೇಳಿದ್ದಾರೆ. ಲೋಕಾಯುಕ್ತ ಸಂಸ್ಥೆ ಮೇಲೆ ಜನರು ವಿಶ್ವಾಸ ಇಟ್ಟಿದ್ದಾರೆ. ಆದರೆ ಇಲ್ಲೇ ಭ್ರಷ್ಟತೆಯಾ ಆರೋಪಗಳು ಕೇಳಿಬರುತ್ತಿವೆ. ಜನರಲ್ಲಿರುವ ನಂಬಿಕೆ ಉಳಿಸಿಕೊಂಡು ಜನರಿಗೆ ನ್ಯಾಯ ಒದಗಿಸಬೇಕಿದೆ. ಈ ಹಿನ್ನೆಲೆಯಲ್ಲಿ ಸಂಸ್ಥೆಗೆ ಪ್ರತ್ಯೇಕ ಗುಪ್ತಚರ ದಳ ರಚನೆ ಮಾಡಬೇಕು ಎಂದು ಲೋಕಾಯುಕ್ತರು ಇಂಗಿತ ವ್ಯಕ್ತಪಡಿಸಿದ್ದಾರೆ ಎಂದರು.
ಶಾಂತಿನಗರ ಸೊಸೈಟಿಯವರು 3 ಸಾವಿರ ಕೋಟಿ ರೂ ಮೌಲ್ಯದ ಭೂಮಿ ಒತ್ತುವರಿ ಮಾಡಿಕೊಂಡಿದ್ದಾರೆ. ಮತ್ತೊಂದೆಡೆ ಪೂರ್ವಾಂಕರ, ಖೋಡೆ ಸಂಸ್ಥೆಯವರು ಭೂ ಒತ್ತುವರಿ ಮಾಡಿಕೊಂಡಿರುವುದರ ಬಗ್ಗೆ ಲೋಕಾಯುಕ್ತಕ್ಕೆ ಮನವಿ ಮಾಡಲಾಗಿತ್ತು ದೂರಿನ ಬಗ್ಗೆ ಕೈಗೊಂಡಿರುವ ಕ್ರಮದ ಬಗ್ಗೆ ಲೋಕಾಯುಕ್ತರೊಂದಿಗಿನ ಭೇಟಿ ವೇಳೆ ಚರ್ಚೆ ನಡೆಸಲಾಯಿತು ಎಂದು ರಾಮಸ್ವಾಮಿ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT